ಸಿದ್ದರಾಮಯ್ಯ 
ರಾಜ್ಯ

MUDA Scam: ನಕಲಿ ದಾಖಲೆ ಸಲ್ಲಿಸಿ ಸೈಟ್ ಪಡೆದ ಆರೋಪ; CM ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ 10 ಮಂದಿ ವಿರುದ್ಧ ಪ್ರಕರಣ ದಾಖಲು!

ಮೂಲಗಳ ಪ್ರಕಾರ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ ದೇವರಾಜು ಹಾಗೂ ಕುಟುಂಬದವರ ವಿರುದ್ಧ ದೂರು ದಾಖಲಿಸಿದ್ದಾರೆ.

ಮೈಸೂರು: Mysuru Urban Development Authority (MUDA) ಹಗರಣಕ್ಕೆ ಸಂಬಂಧಿಸಿದಂತೆ ನಕಲಿ ದಾಖಲೆ ಸಲ್ಲಿಸಿ ಸೈಟ್ ಪಡೆದ ಆರೋಪದ ಮೇರೆಗೆ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ಒಟ್ಟು 10 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಹೌದು.. ದಿನ ಕಳೆದಂತೆ ಮುಡಾ ಹಗರಣದಲ್ಲಿ ಹೊಸ ಹೊಸ ಹೆಸರುಗಳು ಕೇಳಿ ಬರುತ್ತಿದ್ದು, ಇದೀಗ ಮೈಸೂರು ವಿಜಯನಗರ ಪೊಲೀಸ್ ಠಾಣೆಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಮುಡಾಗೆ ವಂಚನೆ ಮಾಡಲಾಗಿದೆ ಎಂಬ ದೂರು ದಾಖಲಾಗಿದೆ. ನಕಲಿ ದಾಖಲೆ ಸಲ್ಲಿಸಿ ಸೈಟ್ ಪಡೆದ ಆರೋಪದ ಮೇರೆಗೆ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ಒಟ್ಟು 10 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಮೂಲಗಳ ಪ್ರಕಾರ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ ದೇವರಾಜು ಹಾಗೂ ಕುಟುಂಬದವರ ವಿರುದ್ಧ ದೂರು ದಾಖಲಿಸಿದ್ದಾರೆ. ಇದೇ ಪ್ರಕರಣದಲ್ಲಿ ಜಿಲ್ಲಾಧಿಕಾರಿ, ತಹಸೀಲ್ದಾರ್, ಉಪ ನೋಂದಣಾಧಿಕಾರಿ ಹಾಗೂ ಮುಡಾ ಅಧಿಕಾರಿಗಳ ಶಾಮೀಲು ಬಗ್ಗೆಯು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರರು ದೂರು ದಾಖಲಿಸಿದ್ದು, ಪೊಲೀಸರ ಜೊತೆಗೆ ರಾಜ್ಯಪಾಲ, ರಾಜ್ಯ ಮುಖ್ಯಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೂ ಅವರು ಪತ್ರ ಬರೆದಿದ್ದಾರೆ.

ದೂರಿನಲ್ಲಿ ದೂರುದಾರರು ಹಲವು ಪ್ರಶ್ನೆಗಳನ್ನು ಎತ್ತಿದ್ದು, ಪಾರ್ವತಿ ಪ್ರಕರಣದಲ್ಲಿ ಭೂ ಸ್ವಾಧೀನದಿಂದ ಕೈಬಿಟ್ಟಿರುವ ರಾಜ್ಯಪತ್ರದ ಬಗ್ಗೆಯೇ ಅನುಮಾನ ಇದೆ. ಮೂಲ ಭೂ ಮಾಲೀಕರ ಮಗ ಎನ್ನುವ ಮಲ್ಲಿಕಾರ್ಜುನಸ್ವಾಮಿ ದೇವರಾಜು ಅಸ್ತಿತ್ವದ ಬಗ್ಗೆ ಪ್ರಶ್ನೆ ಎತ್ತಲಾಗಿದೆ. 1998ರಲ್ಲಿ ಭೂ ಸ್ವಾಧಿನದಿಂದ ಕೈ ಬಿಟ್ಟಿದ್ದು ನಿಜವಾದರೆ 2010ರ ವರೆಗಿನ ಆರ್ಟಿಸಿ ಗಳಲ್ಲಿ ಭೂ ಸ್ವಾಧೀನ ಎಂಬ ಉಲ್ಲೇಖ ಏಕಿದೆ ಎಂದು ಪ್ರಶ್ನಿಸಿದ್ದಾರೆ.

1998ರಲ್ಲಿ ಭೂ ಸ್ವಾಧಿನದಿಂದ ಕೈ ಬಿಟ್ಟಿದ್ದು ನಿಜವಾದರೆ 2010ರ ವರೆಗಿನ ಆರ್ಟಿಸಿ ಗಳಲ್ಲಿ ಭೂ ಸ್ವಾಧೀನ ಎಂಬ ಉಲ್ಲೇಖ ಏಕಿದೆ. ನಂತರ ಮಲ್ಲಿಕಾರ್ಜುನಸ್ವಾಮಿ ದೇವರಾಜು ಅವರ ಮಾಲೀಕತ್ವ ಮತ್ತು ಸ್ವಾಧೀನದಲ್ಲಿ ಈ ಜಮೀನು ಇದ್ದಿದ್ದರೆ ಪ್ರಾಧಿಕಾರದ ಅಭಿವೃದ್ಧಿ ಕೆಲಸವನ್ನ ಏಕೆ ತಡೆದಿಲ್ಲ ಎಂಬಿತ್ಯಾದಿ ಪ್ರಶ್ನೆಗಳನ್ನು ಎತ್ತಿದ್ದಾರೆ.

ಮಾತ್ರವಲ್ಲದೇ ಜಿಲ್ಲಾಧಿಕಾರಿ, ತಹಶೀಲ್ದಾರ್, ಉಪ ನೋಂದಣಾಧಿಕಾರಿ ಮತ್ತು ಮುಡಾ ಅಧಿಕಾರಿಗಳು ಕೂಡ ಹಗರಣದಲ್ಲಿ ಶಾಮೀಲಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

ಗಂಗೂಲಿ ಹಿಂದಿಕ್ಕಿದ ವಿರಾಟ್ ಕೊಹ್ಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಈ ಮೈಲಿಗಲ್ಲು ಸಾಧಿಸಿದ Kohli

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

SCROLL FOR NEXT