ಹೈಕೋರ್ಟ್  
ರಾಜ್ಯ

ರಾಜ್ಯಾದ್ಯಂತ ಡೆಂಗ್ಯೂ ಉಲ್ಬಣ: ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡ ಹೈಕೋರ್ಟ್

ಡೆಂಗ್ಯೂ ಹರಡುವಿಕೆ ಮತ್ತು ಇತರ ಸಂಬಂಧಿತ ವಿಷಯಗಳಲ್ಲಿ ಸಮಾಜದ ನಾಡಿಮಿಡಿತವನ್ನು ಪ್ರತಿಬಿಂಬಿಸುತ್ತದೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಡೆಂಗ್ಯೂ ಹರಡುವಿಕೆಯ ಬಗ್ಗೆ ನಾಡಿನ ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡ ವರದಿಗಳನ್ನು ಉಲ್ಲೇಖಿಸಿದೆ.

ಬೆಂಗಳೂರು: ಆಂಗ್ಲ ದೈನಿಕವೊಂದರ ಓದುಗರೊಬ್ಬರು ಅದರ ಸಂಪಾದಕರಿಗೆ ಬರೆದ ಪತ್ರ ಹಾಗೂ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾದ ಡೆಂಗ್ಯೂ ಜ್ವರದ ವರದಿಗಳ ಆಧಾರದ ಮೇಲೆ ರಾಜ್ಯಾದ್ಯಂತ ಡೆಂಗ್ಯೂ ಹರಡುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಸ್ವಯಂ ಪ್ರೇರಿತವಾಗಿ ಬುಧವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕೈಗೆತ್ತಿಕೊಂಡಿದೆ.

ನಿನ್ನೆ ಅಂದರೆ ಜುಲೈ 9 ರಂದು ಆಂಗ್ಲ ದೈನಿಕವೊಂದರಲ್ಲಿ ಪ್ರಕಟವಾದ ರಾಯಚೂರಿನ ವಿಜಯ ಕುಮಾರ್ ಹೆಚ್ ಕೆ ಎಂಬವರು ಬರೆದಿರುವ ಪತ್ರವನ್ನು ಪರಿಗಣಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಡೆಂಗ್ಯೂ ತಡೆಗಟ್ಟುವ ಮತ್ತು ಪರಿಹಾರ ಕ್ರಮಗಳ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಜ್ವರ ವೇಗವಾಗಿ ಹರಡುತ್ತಿರುವುದಕ್ಕೆ ಕೂಡಲೇ ಪರೀಕ್ಷೆ ನಡೆಸುವಂತೆ ಸೂಚಿಸಿದೆ.

ಪ್ರಮುಖ ನಗರಗಳಿಂದ ಗ್ರಾಮೀಣ ಪ್ರದೇಶಗಳಿಗೆ ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ತೆಗೆದುಕೊಂಡ ಕ್ರಮಗಳ ವಿವರಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ ನ್ಯಾಯಾಲಯ, ತುರ್ತುಪರಿಸ್ಥಿತಿಯಲ್ಲಿ ಚಿಕಿತ್ಸೆ ಪೂರೈಸಲು ಲಭ್ಯವಿರುವ ವೈದ್ಯಕೀಯ ಮೂಲಸೌಕರ್ಯಗಳ ವಿವರಗಳನ್ನು ಒದಗಿಸುವಂತೆ ಸಹ ಕೇಳಿದೆ.

ಸಂಪಾದಕರಿಗೆ ಬರೆದ ಪತ್ರವು ಡೆಂಗ್ಯೂ ಹರಡುವಿಕೆ ಮತ್ತು ಇತರ ಸಂಬಂಧಿತ ವಿಷಯಗಳಲ್ಲಿ ಸಮಾಜದ ನಾಡಿಮಿಡಿತವನ್ನು ಪ್ರತಿಬಿಂಬಿಸುತ್ತದೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಡೆಂಗ್ಯೂ ಹರಡುವಿಕೆಯ ಬಗ್ಗೆ ನಾಡಿನ ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡ ವರದಿಗಳನ್ನು ಉಲ್ಲೇಖಿಸಿದೆ.

ಇದುವರೆಗೆ ಅನೇಕ ಜೀವಗಳನ್ನು ಬಲಿ ಪಡೆದ ಡೆಂಗ್ಯೂ ಏಕಾಏಕಿ ಹೆಚ್ಚಾಗಿದ್ದು ರಾಜ್ಯ ಸರ್ಕಾರ ವೈದ್ಯಕೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಬೇಕೆಂದು ವಿಜಯ ಕುಮಾರ್ ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ. ರೋಗ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆಯೂ ವಿವರಿಸಿದ ಅವರು, ಆರೋಗ್ಯ ಇಲಾಖೆಯ ನಿಧಾನಗತಿಯ ಸ್ಪಂದನೆ ರಾಜ್ಯದ ಜನರ ಪರಿಸ್ಥಿತಿಯನ್ನು ಹದಗೆಡಿಸಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT