ಲಂಚ (ಸಾಂಕೇತಿಕ ಚಿತ್ರ) online desk
ರಾಜ್ಯ

ಮಾಸಿಕ 6,000 ರೂ ಲಂಚಕ್ಕೆ ಪೇದೆ ಡಿಮ್ಯಾಂಡ್: KSRP ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

ಪೊಲೀಸ್ ಪೇದೆ ಪ್ರತಿ ತಿಂಗಳು ಇನ್ಸ್ಪೆಕ್ಟರ್ ಗೆ 6,000 ರೂಪಾಯಿ ಲಂಚ ನೀಡುತ್ತಿದ್ದ ಈ ವರೆಗೂ 50,000 ರೂಪಾಯಿ ನೀಡಿದ್ದಾನೆ ಎಂದು ತಿಳಿದುಬಂದಿದೆ.

ಮಂಗಳೂರು: ಕೆಎಸ್ ಆರ್ ಪಿ ಇನ್ಸ್ಪೆಕ್ಟರ್ ಓರ್ವ ಪೇದೆಯಿಂದ ಲಂಚ ಪಡೆಯುತ್ತಿದ್ದಾಗ ಬಲೆಗೆ ಬಿದ್ದಿದ್ದಾರೆ.

ಮಂಗಳೂರಿನಲ್ಲಿ ಈ ಘಟನೆ ವರದಿಯಾಗಿದ್ದು ಕೆಎಸ್ ಆರ್ ಪಿ ಇನ್ಸ್ಪೆಕ್ಟರ್ 18,000 ರೂಪಾಯಿ ಲಂಚ ಪಡೆಯುತ್ತಿದ್ದರು.

ಆರೋಪಿ ಇನ್ಸ್ಪೆಕ್ಟರ್ ಮೊಹಮ್ಮದ್ ಆರಿಸ್ ಹಾಗೂ ದೂರು ನೀಡಿದ ಪೇದೆ ಅನಿಲ್ ಕುಮಾರ್ ಕೊಣಾಜೆಯಲ್ಲಿರುವ ಕೆಎಸ್ ಆರ್ ಪಿಯ 7 ನೇ ಬ್ಯಟಾಲಿಯನ್ ಗೆ ಸೇರಿದ ಸಿಬ್ಬಂದಿಗಳಾಗಿದ್ದಾರೆ.

ಲೋಕಾಯುಕ್ತ ಎಸ್ ಪಿ ನಟರಾಜ್ ಎಂಎ ಪ್ರಕಾರ, ಆರೋಪಿ ಇನ್ಸ್ಪೆಕ್ಟರ್, ಪೊಲೀಸ್ ಪೇದೆಗೆ ಪೊಲೀಸ್ ಅತಿಥಿ ಗೃಹದಲ್ಲಿ, ಕೆಲಸ ಮಾಡಲು ಮುಂದುವರೆಸುವುದಕ್ಕಾಗಿ, ಒಮ್ಮೆ 20,000 ರೂಪಾಯಿ ಹಾಗೂ ಮಾಸಿಕ 6,000 ರೂಪಾಯಿಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದ.

ಪೊಲೀಸ್ ಪೇದೆ ಪ್ರತಿ ತಿಂಗಳು ಇನ್ಸ್ಪೆಕ್ಟರ್ ಗೆ 6,000 ರೂಪಾಯಿ ಲಂಚ ನೀಡುತ್ತಿದ್ದ ಈ ವರೆಗೂ 50,000 ರೂಪಾಯಿ ನೀಡಿದ್ದಾನೆ ಎಂದು ತಿಳಿದುಬಂದಿದೆ.

ಆದರೆ ಪೇದೆಯ ತಂದೆಗೆ ಅನಾರೋಗ್ಯ ಇದ್ದ ಕಾರಣ ಕಳೆದ 3 ತಿಂಗಳಿನಿಂದ ಪೇದೆಗೆ ಲಂಚ ನೀಡಲು ಸಾಧ್ಯವಾಗಿರಲಿಲ್ಲ. ಬಾಕಿ ಉಳಿದಿರುವ 18,000 ರೂಪಾಯಿ ಲಂಚ ನೀಡುವಂತೆ ಮೊಹಮ್ಮದ್ ಆರಿಸ್ ಪ್ರತಿದಿನ ಪೀಡಿಸುತ್ತಿದ್ದ ಮತ್ತು ಪಾವತಿಸಲು ವಿಫಲವಾದರೆ ಕರ್ತವ್ಯವನ್ನು ಬದಲಾಯಿಸುವುದಾಗಿ ಬೆದರಿಕೆ ಹಾಕುತ್ತಿದ್ದರು. ಈ ವೇಳೆ ಕಾನ್‌ಸ್ಟೆಬಲ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಲೋಕಾಯುಕ್ತ ಡಿವೈಎಸ್ಪಿಗಳಾದ ಗಣ ಪಿ.ಕುಮಾರ್ ಮತ್ತು ಚೆಲುವರಾಜು ಬಿ.ಇನ್ಸ್‌ಪೆಕ್ಟರ್‌ಗಳಾದ ಅಮಾನುಲ್ಲಾ ಎ, ಸುರೇಶ್ ಕುಮಾರ್, ಚಂದ್ರಶೇಖರ್ ಸಿಎಲ್ ನೇತೃತ್ವದ ತಂಡ ಮಹಮ್ಮದ್ ಆರಿಸ್ ಗಾಗಿ ಬಲೆ ಬೀಸಿ ಅನಿಲ್ ಕುಮಾರ್ ಅವರಿಂದ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

SCROLL FOR NEXT