ಪ್ರಿಯಾಂಕ್ ಖರ್ಗೆ 
ರಾಜ್ಯ

ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ 1,138 ಗ್ರಾಮಗಳಿಗೆ ತುಂಗಭದ್ರ ಹಿನ್ನೀರು ಬಳಸಿ ನೀರು ಪೂರೈಕೆ- ಪ್ರಿಯಾಂಕ್ ಖರ್ಗೆ

ತುಂಗಭದ್ರ ಹಿನ್ನೀರು ಬಳಸಿ ಚಿಲಕನಹಟ್ಟಿ, ಕೂಡ್ಲಿಗಿ, ಮೊಳಕಾಲ್ಮೂರು, ಚಳ್ಳಕೆರೆ, ತುರವನೂರು ತಾಲ್ಲೂಕುಗಳ 1,138 ಗ್ರಾಮಗಳು ಹಾಗೂ ಎರಡು ಪಟ್ಟಣಗಳ 17.21 ಲಕ್ಷ ಜನಕ್ಕೆ ನೀರು ಪೂರೈಕೆ

ಪಾವಗಡ : ಪಾವಗಡ ಬಹುಗ್ರಾಮ ನೀರು ಪೂರೈಕೆ ಕಾರ್ಯಕ್ರಮದಡಿ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿನ 1,138 ಗ್ರಾಮಗಳು ಹಾಗೂ 2 ಪಟ್ಟಣಗಳಿಗೆ ಶೀಘ್ರದಲ್ಲಿಯೇ ಕುಡಿಯುವ ನೀರು ಸರಬರಾಜು ಮಾಡುವ ಪ್ರಕ್ರಿಯೆಗೆ ಚಾಲನೆ ಸಿಗಲಿದ್ದು, ಈ ಭಾಗದ ಜನರ ಬಹು ದಿನಗಳ ಕನಸು ನನಸಾಗಲಿದೆ.

ತುಮಕೂರು ಜಿಲ್ಲೆಯ ಪಾವಗಡ ಹಾಗೂ ಕ್ವಾದಿಗುಂಟೆ ಬಳಿ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ, ಬಹುಗ್ರಾಮ ನೀರು ಸರಬರಾಜು ಯೋಜನೆಯಡಿ ತುಂಗಭದ್ರ ಹಿನ್ನೀರು ಬಳಸಿ ಚಿಲಕನಹಟ್ಟಿ, ಕೂಡ್ಲಿಗಿ, ಮೊಳಕಾಲ್ಮೂರು, ಚಳ್ಳಕೆರೆ, ತುರವನೂರು ತಾಲ್ಲೂಕುಗಳ 1,138 ಗ್ರಾಮಗಳು ಹಾಗೂ ಎರಡು ಪಟ್ಟಣಗಳ 17.21 ಲಕ್ಷ ಜನಕ್ಕೆ ನೀರು ಪೂರೈಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಚಿಲಕನಹಟ್ಟಿ ಮತ್ತು 14 ಗ್ರಾಮೀಣ ವಸತಿ ಪ್ರದೇಶಗಳು ಹಾಗೂ ಕೂಡ್ಲಿಗಿ ತಾಲ್ಲೂಕಿನ ಉಜ್ಜಿನಿ ಮತ್ತು 215 ಗ್ರಾಮೀಣ ವಸತಿ ಪ್ರದೇಶಗಳು; ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣ ಮತ್ತು 132 ಗ್ರಾಮೀಣ ವಸತಿ ಪ್ರದೇಶಗಳು, ಚಳ್ಳಕೆರೆ ತಾಲ್ಲೂಕಿನ 360 ಗ್ರಾಮೀಣ ವಸತಿ ಪ್ರದೇಶಗಳು ಹಾಗೂ ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ತಾಲ್ಲೂಕಿನ ತುರವನೂರು ಮತ್ತು 58 ಗ್ರಾಮೀಣ ವಸತಿ ಪ್ರದೇಶಗಳು ಹಾಗೂ ಪಾವಗಡ ಪಟ್ಟಣ ಹಾಗೂ ತಾಲ್ಲೂಕಿನ 357 ಗ್ರಾಮೀಣ ವಸತಿ ಪ್ರದೇಶಗಳು ಸೇರಿದಂತೆ 1,138 ಗ್ರಾಮಗಳು ಹಾಗೂ 2 ಪಟ್ಟಣಗಳು ತುಂಗಭದ್ರ ನೀರಿನ ಸೌಲಭ್ಯ ಪಡೆಯಲಿವೆ ಎಂದು ಸಚಿವರು ತಿಳಿಸಿದರು.

ಚಿಲಕನಹಟ್ಟಿ, ಕೂಡ್ಲಿಗಿ, ಮೊಳಕಾಲ್ಮೂರು, ಚಳ್ಳಕೆರೆ, ತುರವನೂರು ಹಾಗೂ ಪಾವಗಡ ನೀರು ಸರಬರಾಜು ಯೋಜನೆಯ ಕಾಮಗಾರಿಗಳು ಶೇ.95 ಭಾಗದಷ್ಟು ಮುಕ್ತಾಯಗೊಂಡಿದ್ದು, ಕೊಳವೆ ಮಾರ್ಗಗಳ ಅಳವಡಿಕೆ ಕಾಮಗಾರಿಗಳು ಪೂರ್ಣಗೊಂಡಿರುತ್ತದೆ. ಎಲ್ಲ ಯೋಜನೆಗಳ ವಿದ್ಯುತ್‌ ಸರಬರಾಜು ಮಂಜೂರಾತಿಗಳು (ಸಿಇಐಜಿ ಮತ್ತು ಬೆಸ್‌ಕಾಂ) ದೊರೆತಿದ್ದು, ಈ ಬೃಹತ್‌ ಯೋಜನೆಯಡಿ ಮೂರು ಜಿಲ್ಲೆಗಳ ಲಕ್ಷಾಂತರ ಜನರು ಶುದ್ಧ ನೀರು ಪಡೆಯಲಿದ್ದಾರೆ ಎಂದರು.

ರೂ. 2,132.02 ಕೋಟಿ ರೂ. ವೆಚ್ಚದ ಯೋಜನೆಯ ಕಾಮಗಾರಿಗಳು ಕಳೆದ ವರ್ಷದಿಂದ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಮೇ 2024ರವರೆಗೆ ರೂ. 1,852.15 ಕೋಟಿ ರೂ. ವೆಚ್ಚ ಮಾಡಲಾಗಿದೆ. ಗ್ರಾಮೀಣ ಭಾಗದ ಜನರಿಗೆ ಅಂತರರಾಷ್ಟ್ರೀಯ ಮಾನದಂಡಗಳಂತೆ ಪ್ರತಿಯೊಬ್ಬರಿಗೂ ಪ್ರತಿ ನಿತ್ಯ 85 ಲೀಟರ್‌ ನೀರು ಒದಗಿಸಲಾಗುವುದು, ಪಟ್ಟಣದ ಜನರು ಪ್ರತಿ ನಿತ್ಯ 135 ಲೀಟರ್‌ ನೀರು ಪಡೆಯುವರು ಎಂದು ಸಚಿವರು ತಿಳಿಸಿದ್ದಾರೆ.

ನೀರು ಸಂಸ್ಕರಣ ಘಟಕಗಳ ಕಾಮಗಾರಿಗಳು ಮುಕ್ತಾಯಗೊಂಡಿದ್ದು, ಕೊಳವೆ ಮಾರ್ಗಗಳನ್ನು ಅಳವಡಿಸುವ ಕಾಮಗಾರಿಗಳು ಮುಕ್ತಾಯಗೊಂಡಿವೆ ಎಂದೂ ಹೇಳಿರುವ ಸಚಿವರು 568 ಒವರ್‌ಹೆಡ್‌ ಟ್ಯಾಂಕ್‌ಗಳ ನಿರ್ಮಾಣ ಕಾಮಗಾರಿಗಳು ಮುಕ್ತಾಯ ಹಂತದಲ್ಲಿವೆ ಎಂದು ಅವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT