ಕಾಂಗ್ರೆಸ್ ಎಂಎಲ್ ಸಿ ಸುಧಾಮ್ ದಾಸ್  
ರಾಜ್ಯ

ಕಳೆದ ಬೆಳಗಾವಿ ಅಧಿವೇಶನದಲ್ಲಿಯೇ ಮುಡಾ ಅಕ್ರಮದ ಬಗ್ಗೆ ಪ್ರಸ್ತಾಪ ಆಗಿತ್ತು: ಸುಧಾಮ ದಾಸ್‌

ಮುಡಾ ಆಯುಕ್ತರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಇಡಿ ನಿವೃತ್ತ ಅಧಿಕಾರಿ ಸುಧಾಮ ದಾಸ್ ಅವರು ಮುಡಾ ಆಯುಕ್ತರ ವಿರುದ್ಧ ಸರ್ಕಾರ ಕೈಗೊಂಡಿರುವ ಕ್ರಮದ ಕುರಿತು ಸರ್ಕಾರದಿಂದ ಉತ್ತರ ಕೋರಿದ್ದರು.

ಬೆಂಗಳೂರು: ಮುಡಾದಿಂದ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ಬೆಳಕಿಗೆ ಬಂದ ಬೆನ್ನಲ್ಲೇ 2023ರ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ಎಂಎಲ್‌ಸಿ ಎಚ್‌ಪಿ ಸುಧಾಮ ದಾಸ್‌ ಅವರು ಈ ವಿಷಯವನ್ನು ಪ್ರಸ್ತಾಪಿಸಿರುವುದು ಬೆಳಕಿಗೆ ಬಂದಿದೆ.

ಆದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಅದರಲ್ಲೂ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಸರಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಮುಡಾ ಆಯುಕ್ತರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಇಡಿ ನಿವೃತ್ತ ಅಧಿಕಾರಿ ಸುಧಾಮ ದಾಸ್ ಅವರು ಮುಡಾ ಆಯುಕ್ತರ ವಿರುದ್ಧ ಸರ್ಕಾರ ಕೈಗೊಂಡಿರುವ ಕ್ರಮದ ಕುರಿತು ಸರ್ಕಾರದಿಂದ ಉತ್ತರ ಕೋರಿದ್ದರು.

ಮುಡಾ ಆಯುಕ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಏಕೆ ದಾಖಲಿಸಲಾಗಿಲ್ಲ ಅಥವಾ ಅಕ್ರಮಗಳಲ್ಲಿ ಭಾಗಿಯಾಗಿದ್ದರೂ ಅವರನ್ನು ಬದಲಿಸಲು ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದರು.

ಡಿಸೆಂಬರ್ 12, 2023 ರಂದು, ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವ ಬೈರತಿ ಸುರೇಶ್ ಅವರು ತಮ್ಮ ಉತ್ತರದಲ್ಲಿ, ಜುಲೈ 2, 2022 ರಂದು ತಾಂತ್ರಿಕ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದ್ದರು, ಅದು ನವೆಂಬರ್ 3, 2023 ರಂದು ತನ್ನ ವರದಿಯನ್ನು ಸಲ್ಲಿಸಿತು. ಮರುದಿನವೇ, ನವೆಂಬರ್ 4ರಂದು ಡಿಸಿಗೆ ವರದಿ ಕೇಳಲಾಗಿದ್ದು, ನ.27ರಂದು ಮಧ್ಯಂತರ ವರದಿ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದು ಅಪೂರ್ಣವಾಗಿರುವ ಕಾರಣ ಸಮಗ್ರ ಮತ್ತು ನಿಖರವಾದ ವರದಿಯನ್ನು ಸಲ್ಲಿಸುವಂತೆ ಡಿಸಿಗೆ ಡಿಸೆಂಬರ್ 4 ರಂದು ತಿಳಿಸಲಾಗಿದೆ ಎಂದು ಅವರು ಹೇಳಿದರು.

ನವೆಂಬರ್ 4 ಮತ್ತು 20, 2023 ರಂದು ಆಯುಕ್ತರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. "ಡಿಸಿ ಮತ್ತು ಸಮಿತಿಯ ವರದಿಯನ್ನು ಆಧರಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಬೈರತಿ ಸುರೇಶ್ ತಮ್ಮ ಉತ್ತರದಲ್ಲಿ ತಿಳಿಸಿದ್ದಾರೆ. ಆದರೆ ಅಂದಿನಿಂದ, ಆರೋಪಿ ಆಯುಕ್ತರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಎಂಎಲ್‌ಸಿ ಸುಧಾಮ್ ಾಸ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!