ನಟ ದರ್ಶನ್ ಬಂಧನ ಸಂದರ್ಭದ ಚಿತ್ರ, ಒಳಚಿತ್ರದಲ್ಲಿ ಮೃತ ರೇಣುಕಾಸ್ವಾಮಿ ಸಂಗ್ರಹ ಚಿತ್ರ  
ರಾಜ್ಯ

ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ: ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ನೀಡುತ್ತಿರುವ ಆಹಾರ ಜೀರ್ಣವಾಗುತ್ತಿಲ್ಲ, ದೇಹದ ತೂಕ ಕಳೆದುಕೊಂಡು ವಾಂತಿ-ಭೇದಿಯಾಗುತ್ತಿದೆ, ಇದಕ್ಕಾಗಿ ಮನೆ ಊಟಕ್ಕೆ ಅವಕಾಶ ನೀಡಬೇಕು ಎಂದು ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು: ಮನೆ ಊಟ, ಹಾಸಿಗೆ, ಪುಸ್ತಕಗಳನ್ನು ಪಡೆಯಲು ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆಗಳಿದ್ದರೆ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ನಟ ದರ್ಶನ್ ಮಾಡಿರುವಂತಹ ಮನವಿಯನ್ನು ಜೈಲು ನಿಯಮಗಳು ಅನುಮತಿಸುತ್ತವೆಯೇ, ಅರ್ಜಿದಾರರ ಮನವಿಯನ್ನು ಬೆಂಬಲಿಸುವ ಯಾವುದೇ ತೀರ್ಪುಗಳು ಮತ್ತು ಆರೋಪಿಗಳು ನೇರವಾಗಿ ಹೈಕೋರ್ಟ್‌ಗೆ ಹೋಗಬಹುದೇ ಎಂದು ಪರಿಶೀಲಿಸುವಂತೆ ಅರ್ಜಿದಾರರ ಪರ ವಕೀಲರು ಮತ್ತು ವಿಶೇಷ ಸರ್ಕಾರಿ ಅಭಿಯೋಜಕರನ್ನು ಕೋರಿದ ನ್ಯಾಯಮೂರ್ತಿ ಎಸ್‌ಆರ್ ಕೃಷ್ಣ ಕುಮಾರ್, ಜುಲೈ 18 ಕ್ಕೆ ವಿಚಾರಣೆಯನ್ನು ಮುಂದೂಡಿದರು.

ಇದಕ್ಕೂ ಮೊದಲು, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್, ಕೊಲೆಯಂತಹ ಘೋರ ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳು ಮನೆಯಿಂದ ಬಟ್ಟೆ ಮತ್ತು ಹಾಸಿಗೆಗೆ ಅರ್ಹರಲ್ಲ ಎಂದು ವಾದಿಸಿದರು. ಮನೆಯ ಆಹಾರಕ್ಕಾಗಿ, ಅವರು ಮೊದಲು ಕಾರಾಗೃಹಗಳ ಪೊಲೀಸ್ ಮಹಾನಿರೀಕ್ಷಕರಿಗೆ ಪ್ರಾತಿನಿಧ್ಯವನ್ನು ಸಲ್ಲಿಸಬೇಕು, ಅದನ್ನು ಪರಿಗಣಿಸದಿದ್ದರೆ, ಅವರು ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸಬೇಕು ಎಂದು ವಾದಿಸಿದರು.

ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ನೀಡುತ್ತಿರುವ ಆಹಾರ ಜೀರ್ಣವಾಗುತ್ತಿಲ್ಲ, ದೇಹದ ತೂಕ ಕಳೆದುಕೊಂಡು ವಾಂತಿ-ಭೇದಿಯಾಗುತ್ತಿದೆ, ಇದಕ್ಕಾಗಿ ಮನೆ ಊಟಕ್ಕೆ ಅವಕಾಶ ನೀಡಬೇಕು ಎಂದು ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT