ಲೋಕಾಯುಕ್ತ  online desk
ರಾಜ್ಯ

11 ಸರ್ಕಾರಿ ಅಧಿಕಾರಿಗಳ ಬಳಿ 45.14 ಕೋಟಿ ರೂ ಅಕ್ರಮ ಸಂಪತ್ತು!: ಲೋಕಾಯುಕ್ತ ದಾಳಿಯಲ್ಲಿ ಪತ್ತೆ!

ಒಟ್ಟಾರೆಯಾಗಿ, 11 ಅಧಿಕಾರಿಗಳು 45.14 ಕೋಟಿ ರೂಪಾಯಿ ಮೌಲ್ಯದ ಡಿಎ ಹೊಂದಿರುವುದು ಕಂಡುಬಂದಿದೆ ಎಂದು ಲೋಕಾಯುಕ್ತ ಹೇಳಿಕೆ ತಿಳಿಸಿದೆ.

ಬೆಂಗಳೂರು: ರಾಜ್ಯದ 9 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, 56 ಪ್ರದೇಶಗಳಲ್ಲಿ 11 ಸರ್ಕಾರಿ ಅಧಿಕಾರಿಗಳು ಹಾಗೂ ಇಂಜಿನಿಯರ್ ಗಳ ಮನೆಗಳಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ. ದಾಳಿ ವೇಳೆ ಒಟ್ಟು 45.14 ಕೋಟಿ ರೂಪಾಯಿ ಅಕ್ರಮ ಸಂಪತ್ತು ಪತ್ತೆಯಾಗಿದೆ.

ಸುಮಾರು 100 ಮಂದಿ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳ ಅಕ್ರಮ ಆದಾಯವನ್ನು ಬಯಲಿಗೆಳೆದಿದ್ದಾರೆ.

ಬೆಳಗಾವಿಯ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಡಿ ಮಹದೇವ್ ಬನ್ನೂರು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಕಾರ್ಯಪಾಲಕ ಇಂಜಿನಿಯರ್ ಡಿ.ಹೆಚ್ ಉಮೇಶ್, ದಾವಣಗೆರೆಯ ಬೆಸ್ಕಾಂ ವಿಜಿಲೆನ್ಸ್ ಪೊಲೀಸ್ ಠಾಣೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಂ ಎಸ್ ಪ್ರಭಾಕರ್, ಬೆಳಗಾವಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರ್ ಗೌಡ, ಕುರಡಗಿ, ನಿವೃತ್ತ ಪಿಡಬ್ಲ್ಯುಡಿ ಮುಖ್ಯ ಎಂಜಿನಿಯರ್ ಎಂ.ರವೀಂದ್ರ ಮತ್ತು ಲೋಕಾಯುಕ್ತ ಮುಖ್ಯ ಎಂಜಿನಿಯರ್ ಕೆ.ಜಿ.ಜಗದೀಶ ಸೇರಿದಂತೆ ಇನ್ನಿತರ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಿದೆ.

ಮಂಡ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ನಿವೃತ್ತ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಶಿವರಾಜು, ರಾಮನಗರದ ಹಾರೋಹಳ್ಳಿ ತಹಶೀಲ್ದಾರ್ ವಿಜಯಣ್ಣ, ನೀರಾವರಿ ಇಲಾಖೆಯ ಅಧೀಕ್ಷಕ ಎಂಜಿನಿಯರ್ ಮಹೇಶ್ ಕೆ, ಪಂಚಾಯಿತಿ ಕಾರ್ಯದರ್ಶಿ ಎನ್.ಎಂ.ಜಗದೀಶ್ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಹದೇವಪುರ ವಿಭಾಗದ ಕಂದಾಯ ಅಧಿಕಾರಿ ಬಸವರಾಜ ಮಾಗಿ ಲೋಕಾಯುಕ್ತ ದಾಳಿ ಎದುರಿಸಿದ ಅಧಿಕಾರಿಗಳಾಗಿದ್ದಾರೆ.

ಲೋಕಾಯುಕ್ತ ಕಚೇರಿಯ ಪ್ರಕಾರ, ಗುರುವಾರ ದಾಳಿ ನಡೆಸಿದವರಲ್ಲಿ ಶೇಖರ್ ಗೌಡ ಕುರಡಗಿ ಅವರು ತಮ್ಮ ಘೋಷಿತ ಆದಾಯದ ಪ್ರಮಾಣಕ್ಕಿಂತ ಹೆಚ್ಚಾದ 7.88 ಕೋಟಿ ರೂಪಾಯಿ ಮೌಲ್ಯದ ಅತ್ಯಧಿಕ ಆಸ್ತಿಯನ್ನು ಹೊಂದಿದ್ದಾರೆ ಎಂಬುದು ಕಂಡುಬಂದಿದೆ.

ಉಮೇಶ್, ರವೀಂದ್ರ, ಕೆ ಜಿ ಜಗದೀಶ್ ಮತ್ತು ಶಿವರಾಜು ಅವರು ಐದು ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂದು ಅದು ಹೇಳಿದೆ.

ಒಟ್ಟಾರೆಯಾಗಿ, 11 ಅಧಿಕಾರಿಗಳು 45.14 ಕೋಟಿ ರೂಪಾಯಿ ಮೌಲ್ಯದ ಡಿಎ ಹೊಂದಿರುವುದು ಕಂಡುಬಂದಿದೆ ಎಂದು ಲೋಕಾಯುಕ್ತ ಹೇಳಿಕೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT