ನಿರೂಪಕಿ ಅಪರ್ಣ online desk
ರಾಜ್ಯ

ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣ ವಸ್ತಾರೆ ನಿಧನ!

ನಿರೂಪಣೆಯಷ್ಟೇ ಅಲ್ಲದೇ ಮಸಣದ ಹೂವು, ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲೂ ಅಪರ್ಣಾ ನಟಿಸಿದ್ದರು.

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ ಇಂದು ನಿಧನರಾದರು.

ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ, 3 ದಿನಗಳಿಂದ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬನಶಂಕರಿಯ ಸ್ವಗೃಹಕ್ಕೆ ಪಾರ್ಥಿವ ಶರೀರ ತರಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ನಿರೂಪಣೆಯಷ್ಟೇ ಅಲ್ಲದೇ ಮಸಣದ ಹೂವು, ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲೂ ಅಪರ್ಣಾ ನಟಿಸಿದ್ದರು.

ನಮ್ಮ ಮೆಟ್ರೋ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಧ್ವನಿ ನೀಡಿದ್ದ ಅಪರ್ಣಾ, ಮೂಡಲ ಮನೆ, ಮುಕ್ತ ಮುಕ್ತ ಮೊದಲಾದ ಧಾರಾವಾಹಿಗಳಲ್ಲೂ ನಟಿಸಿದ್ದರು. ದೀಪಾವಳಿ ಕಾರ್ಯಕ್ರಮದಲ್ಲಿ ಸತತ 8 ಗಂಟೆಗಳ ಕಾಲ ನಿರೂಪಣೆ ಮಾಡಿದ್ದ ಅಪರ್ಣಾ, 2013 ರಲ್ಲಿ ಬಿಗ್ ಬಾಸ್ ಶೋ ನಲ್ಲಿಯೂ ಭಾಗವಹಿಸಿದ್ದರು.

90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳ ನಿರೂಪಣೆ ಮಾಡಿದ ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಅಪರ್ಣ ಕಾರ್ಯ ನಿರ್ವಹಿಸಿದ್ದರು.

ಅಪರ್ಣಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರ ರಂಗದ ಅನೇಕ ನಟ/ನಟಿಯರು ಅಪರ್ಣಾ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT