ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ 
ರಾಜ್ಯ

ಮೈಸೂರು: ಆಷಾಢ ಶುಕ್ರವಾರ, ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ!

ಆಷಾಢ ಮಾಸದಲ್ಲಿ ಶಕ್ತಿ ದೇವತೆಗೆ ವಿಶೇಷ ಪೂಜೆ ಸಲ್ಲಿಸುವುದಕ್ಕಾಗಿ ಮೈಸೂರು, ಹಾಸನ, ಚಾಮರಾಜನಗರ, ಮಡಿಕೇರಿ ಸೇರಿದಂತೆ ತಮಿಳುನಾಡು ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರಗಳಿಂದ ಸಾವಿರಾರು ಭಕ್ತಾದಿಗಳು ಆಗಮಿಸಿದ್ದಾರೆ.

ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಮುಂಜಾನೆಯಿಂದಲೇ ಬೆಟ್ಟದ ಪಾದದಿಂದ ಸಾವಿರ ಮೆಟ್ಟಿಲು ಹತ್ತಿದ ಭಕ್ತರು, ದಾರಿಯುದ್ದಕ್ಕೂ ಜಯಘೋಷ ಮೊಳಗಿಸಿದರು. ಮೆಟ್ಟಿಲುಗಳಿಗೆ ಅರಿಶಿನ- ಕುಂಕುಮ ಹಚ್ಚಿ ಹರಕೆ ತೀರಿಸುತ್ತಿದ್ದಾರೆ.

ಆಷಾಢ ಮಾಸದಲ್ಲಿ ಶಕ್ತಿ ದೇವತೆಗೆ ವಿಶೇಷ ಪೂಜೆ ಸಲ್ಲಿಸುವುದಕ್ಕಾಗಿ ಮೈಸೂರು, ಹಾಸನ, ಚಾಮರಾಜನಗರ, ಮಡಿಕೇರಿ ಸೇರಿದಂತೆ ತಮಿಳುನಾಡು ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರಗಳಿಂದ ಸಾವಿರಾರು ಭಕ್ತಾದಿಗಳು ಸರತಿ ಸಾಲಿನಲ್ಲಿ ಆಗಮಿಸಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯುತ್ತಿದ್ದಾರೆ.

ಆಷಾಢ ಶುಕ್ರವಾರ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ

ಮುಂಜಾನೆ 1:30 ರಿಂದ ಚಾಮುಂಡೇಶ್ವರಿಗೆ ವಿಶೇಷ ಅಭಿಷೇಕ ನೆರವೇರಿಸಿದ್ದು, ನಾಲ್ಕು ವಾರಗಳು ಕಾಲ ಭಕ್ತರಿಗೆ ದೇವರ ದರ್ಶನವಾಗಲಿದೆ. ಭಕ್ತಾದಿಗಳು ಬೆಟ್ಟ ಹತ್ತಿ ದರ್ಶನ ಪಡೆಯುತ್ತಿದ್ದಾರೆ ಎಂದು ದೇವಸ್ಥಾನದ ಅರ್ಚಕರಾದ ಶಶಿಧರ್ ದೀಕ್ಷಿತ್ ತಿಳಿಸಿದ್ದಾರೆ.

ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧಿಸಿದ್ದರಿಂದ ಜನರು ವಾಹನಗಳನ್ನು ಲಲಿತ ಮಹಲ್ ಅರಮನೆ ಸಮೀಪದ ಜಾಗದಲ್ಲಿ ನಿಲ್ಲಿಸಿ, ಅಲ್ಲಿಂದ ಸಾರಿಗೆ ಬಸ್ ಗಳಲ್ಲಿ ಬೆಟ್ಟಕ್ಕೆ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ನಗರ ಬಸ್ ನಿಲ್ದಾಣದಿಂದಲೂ ಬಸ್ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷಿಕಾಂತ್ ರೆಡ್ಡಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT