ಸಿಎಂ ಸಿದ್ದರಾಮಯ್ಯ - ಡಿಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ತಮಿಳುನಾಡಿಗೆ ಕಾವೇರಿ ನೀರು: CWRC ನಿರ್ದೇಶನದ ವಿರುದ್ಧ ಮೇಲ್ಮನವಿ; ಸರ್ವಪಕ್ಷ ಸಭೆ ಕರೆದ ಸಿಎಂ

ಜುಲೈ 14ರಂದು ಸರ್ವಪಕ್ಷಗಳ ಸಭೆ ನಡೆಸಿ ರಾಜ್ಯದ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು: ತಮಿಳುನಾಡಿಗೆ ಪ್ರತಿದಿನ ಒಂದು ಟಿಎಂಸಿ ಕಾವೇರಿ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ(ಸಿಡಬ್ಲ್ಯುಆರ್‌ಸಿ) ರಾಜ್ಯಕ್ಕೆ ನೀಡಿರುವ ನಿರ್ದೇಶನದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾವೇರಿ ನದಿ ಪಾತ್ರದ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಜುಲೈ 14ರಂದು ಸರ್ವಪಕ್ಷಗಳ ಸಭೆ ನಡೆಸಿ ರಾಜ್ಯದ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

"ಈ ಬಾರಿ ಸಾಮಾನ್ಯ ಮಳೆಯಾಗುವ ಮುನ್ಸೂಚನೆಗಳ ಹೊರತಾಗಿಯೂ, ಒಳಹರಿವಿನಲ್ಲಿ ಇದುವರೆಗೆ ಶೇ.28 ರಷ್ಟು ಕೊರತೆಯಿದೆ. ಇದನ್ನು ನಾವು ಸಿಡಬ್ಲ್ಯೂಆರ್‌ಸಿ ಮುಂದೆ ಸ್ಪಷ್ಟವಾಗಿ ಹೇಳಿದ್ದೇವೆ. ಅಲ್ಲದೆ, ಜುಲೈ ಅಂತ್ಯದವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳದಂತೆ ನಾವು ವಿನಂತಿಸಿದ್ದೇವೆ. ಆದರೂ ಜುಲೈ 12ರಿಂದ ಪ್ರತಿದಿನ ಒಂದು ಟಿಎಂಸಿ ನೀರು ಬಿಡುವಂತೆ ಸಿಡಬ್ಲ್ಯುಆರ್‌ಸಿ ಸೂಚಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು.

CWRC ನಿರ್ದೇಶನದ ವಿರುದ್ಧ ವಿರುದ್ಧ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ(ಸಿಡಬ್ಲ್ಯುಎಂಎ) ಮುಂದೆ ಮೇಲ್ಮನವಿ ಸಲ್ಲಿಸಬೇಕು ಎಂದು ಇಂದಿನ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

"ಕರ್ನಾಟಕದ ನೀರಿನ ವಿಷಯದಲ್ಲಿ ಎಲ್ಲಾ ಪಕ್ಷಗಳು ಒಟ್ಟಾಗಿವೆ. ಆದ್ದರಿಂದ, (ಜುಲೈ 14 ರಂದು) ಸರ್ವಪಕ್ಷ ಸಭೆ ನಡೆಸಲಾಗುವುದು" ಎಂದು ಮುಖ್ಯಮಂತ್ರಿಗಳು ಹೇಳಿದರು.

ಕೇಂದ್ರ ಸಚಿವರು, ರಾಜ್ಯದ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು, ಕಾವೇರಿ ನದಿ ಜಲಾನಯನ ಪ್ರದೇಶದ ಶಾಸಕರನ್ನೂ ಈ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ತನ್ನ ಮುಂದಿನ ನಡೆಯನ್ನು ನಿರ್ಧರಿಸುತ್ತದೆ.

ಬಿಳಿಗುಂಡ್ಲುವಿನಲ್ಲಿ ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಬಿಡಲಾಗುತ್ತಿದ್ದು, ಇದು ಕಬಿನಿ ಅಣೆಕಟ್ಟಿನ ಒಳಹರಿವಿಗೆ ಸಮನಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದ ಕಾವೇರಿ ಜಲಾನಯನ ಪ್ರದೇಶದ ನಾಲ್ಕೂ ಜಲಾಶಯಗಳಲ್ಲಿ ಒಟ್ಟು 60 ಟಿಎಂಸಿ ಅಡಿ ನೀರು ಮಾತ್ರ ಲಭ್ಯವಿದ್ದು, ಕೃಷಿ ಚಟುವಟಿಕೆಗಳಿಗೂ ನೀರು ಒದಗಿಸಬೇಕಿದೆ.

ಹೀಗಾಗಿ ಮಳೆ ಕೊರತೆಯನ್ನು ಗಮನದಲ್ಲಿಟ್ಟುಕೊಂಡು ಜುಲೈ ಅಂತ್ಯದವರೆಗೆ ಕಾಯುವಂತೆ ತಮಿಳುನಾಡಿಗೆ ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT