ಮಾಜಿ ಸಚಿವ ಬಿ ನಾಗೇಂದ್ರರನ್ನು ವಿಚಾರಣೆಗೆ ಕರೆದೊಯ್ಯುತ್ತಿರುವುದು  
ರಾಜ್ಯ

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರ ಜುಲೈ 18 ವರೆಗೆ ED ಕಸ್ಟಡಿಗೆ; ಪ್ರಕರಣದಲ್ಲಿ ನನ್ನ ಪಾತ್ರವೇನೂ ಇಲ್ಲ ಶಾಸಕ

ಹಗರಣಕ್ಕೆ ಸಂಬಂಧಿಸಿದಂತೆ ಶೋಧ ಹಾಗೂ ಜಪ್ತಿ ಕಾರ್ಯಾಚರಣೆ ನಡೆಸಿರುವ ಇಡಿ ಅಧಿಕಾರಿಗಳು ಬುಧವಾರ ಬೆಳಗ್ಗೆಯಿಂದಲೇ ನಾಗೇಂದ್ರ ಅವರ ಮನೆಯಲ್ಲಿ ಮೊಕ್ಕಾಂ ಹೂಡಿದ್ದರು.

ಬೆಂಗಳೂರು: ಮಾಜಿ ಸಚಿವ, ಬಳ್ಳಾರಿ ಶಾಸಕ ಬಿ ನಾಗೇಂದ್ರ ಅವರನ್ನು ವಿಶೇಷ ನ್ಯಾಯಾಲಯವು ಶನಿವಾರ ಐದು ದಿನ ಜಾರಿ ನಿರ್ದೇಶನಾಲಯದ (ED) ಕಸ್ಟಡಿಗೆ ಒಪ್ಪಿಸಿದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ (Enforcement Directorate) ಶುಕ್ರವಾರ ರಾತ್ರಿ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಂಧಿಸಿತ್ತು.

ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು ನಾಗೇಂದ್ರ ಅವರನ್ನು ಜುಲೈ 18 ರವರೆಗೆ ಕಸ್ಟಡಿಗೆ ಒಪ್ಪಿಸಿದರು.

ಬಹಳ ದಿನಗಳ ವಿಚಾರಣೆಯ ನಂತರ ಕೇಂದ್ರ ಸಂಸ್ಥೆ ಇಡಿ ನಾಗೇಂದ್ರನನ್ನು ತನ್ನ ವಶಕ್ಕೆ ತೆಗೆದುಕೊಂಡಿತು. ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಿಂದ ನಿನ್ನೆ ಬೆಳಿಗ್ಗೆ ಅವರನ್ನು ವಶಕ್ಕೆ ಪಡೆದು ಬೆಂಗಳೂರಿನ ಶಾಂತಿನಗರದಲ್ಲಿರುವ ಕೇಂದ್ರೀಯ ಸಂಸ್ಥೆ ಕಚೇರಿಗೆ ಕರೆದೊಯ್ಯಲಾಯಿತು.

ಹಗರಣಕ್ಕೆ ಸಂಬಂಧಿಸಿದಂತೆ ಶೋಧ ಹಾಗೂ ಜಪ್ತಿ ಕಾರ್ಯಾಚರಣೆ ನಡೆಸಿರುವ ಇಡಿ ಅಧಿಕಾರಿಗಳು ಬುಧವಾರ ಬೆಳಗ್ಗೆಯಿಂದಲೇ ನಾಗೇಂದ್ರ ಅವರ ಮನೆಯಲ್ಲಿ ಮೊಕ್ಕಾಂ ಹೂಡಿದ್ದರು. ಅಧಿಕಾರಿಗಳು ಮಾಜಿ ಸಚಿವರ ಪಿಎ ಹರೀಶ್ ಅವರನ್ನು ಸಹ ಪ್ರಶ್ನಿಸಿದರು. ನಾಗೇಂದ್ರ ಅವರ ಆಪ್ತ ಚೇತನ್ ಮತ್ತು ಮಾಧ್ಯಮ ಸಂಯೋಜಕ ನಾಗರಾಜ್ ಅವರನ್ನೂ ಪ್ರಶ್ನಿಸಿದ್ದಾರೆ.

ರಾಯಚೂರು ಗ್ರಾಮಾಂತರ ಶಾಸಕ ಹಾಗೂ ಪಾಲಿಕೆ ಅಧ್ಯಕ್ಷ ಬಸವನಗೌಡ ದಡ್ಡಲ್ ಅವರ ಮನೆ ಮೇಲೂ ದಾಳಿ ನಡೆದಿದ್ದು, ಮಾಜಿ ಪಿಎ ಪಂಪಣ್ಣ ಅವರನ್ನು ಗುರುವಾರ ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿ ರಾತ್ರಿ ಬಿಡುಗಡೆಗೊಳಿಸಲಾಯಿತು. ಹಗರಣದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಬೆಳಿಗ್ಗೆಯಿಂದ ಸಂಜೆಯವರೆಗೂ ಸಹ ದದ್ದಲ್ ಅವರನ್ನು ವಿಚಾರಣೆಗೆ ಒಳಪಡಿಸಿತು.

ಕೇಂದ್ರ ಸಂಸ್ಥೆಯು ಕರ್ನಾಟಕ, ತೆಲಂಗಾಣ ಮತ್ತು ಆಂಧ್ರ ಪ್ರದೇಶದಾದ್ಯಂತ ಅನೇಕ ಸ್ಥಳಗಳಲ್ಲಿ ವ್ಯಾಪಕ ಶೋಧಗಳನ್ನು ನಡೆಸಿತು ಮತ್ತು ಹಲವಾರು ದಾಖಲೆಗಳನ್ನು ವಶಪಡಿಸಿಕೊಂಡಿದೆ, ಜೊತೆಗೆ ಹಗರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಪ್ರಶ್ನಿಸಿದೆ.

ಪಾಲಿಕೆಯ ಅಧೀಕ್ಷಕರಾಗಿದ್ದ ಚಂದ್ರಶೇಖರನ್ ಅವರು ಶಿವಮೊಗ್ಗದ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ಬರೆದ ನಂತರ ಈ ಘಟನೆ ಬೆಳಕಿಗೆ ಬಂದಿದೆ. 94.7 ಕೋಟಿ ಮೊತ್ತದ ನಿಗಮದ ಹಣವನ್ನು ಅನಧಿಕೃತವಾಗಿ ವರ್ಗಾವಣೆ ಮಾಡಲಾಗಿದೆ ಎಂದು ಅವರು ಡೆತ್ ನೋಟ್ ನಲ್ಲಿ ಆರೋಪಿಸಿದ್ದರು.

ನನ್ನ ಪಾತ್ರವೇನೂ ಇಲ್ಲ: ಜಾರಿ ನಿರ್ದೇಶನಾಲಯ ಕಸ್ಟಡಿಗೆ ಕೊಟ್ಟ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿರುವ ನಾಗೇಂದ್ರ ಅವರು, ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲವೇ ಇಲ್ಲ, ನನ್ನ ಬಂಧನ ಏಕೆ ಆಗಿದೆ ಎಂದು ಗೊತ್ತಿಲ್ಲ ಎಂದರು. ನಿಮ್ಮ ಅಧಿಕಾರಿಗಳು ನಿಮಗೆ ಅರಿವಿಲ್ಲದೇ ಏನಾದ್ರು ಮಾಡಿದ್ರಾ ಎಂಬ ಪ್ರಶ್ನೆಗೆ ಯಾವುದೇ ಉತ್ತರ ನೀಡದೇ ತೆರಳಿದರು.

ಶಾಸಕ ದದ್ದಲ್ ಗೂ ಬಂಧನ ಭೀತಿ: ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್​ಗೂ ಬಂಧನ ಭೀತಿ ಉಂಟಾಗಿದೆ. ಶಾಸಕ ದದ್ದಲ್​ರನ್ನೂ ಸಹ ಇಡಿ ಅಧಿಕಾರಿಗಳು ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ. ಈ ಮಧ್ಯೆ ನಿನ್ನೆ ಎಸ್​ಐಟಿ ಕಚೇರಿಗೆ ತೆರಳಿದ್ದ ಶಾಸಕ ಬಸನಗೌಡ ದದ್ದಲ್, ವಿಚಾರಣೆ ಬಿಸಿ ಎದುರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅನ್ನಭಾಗ್ಯ: 5 ಕೆಜಿ ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ದೇಶದಲ್ಲೇ ಮೊದಲು: ಉದ್ಯೋಗಸ್ಥ ಮಹಿಳೆಯರಿಗೆ ಗುಡ್ ನ್ಯೂಸ್; ವೇತನ ಸಹಿತ 'ಋತುಚಕ್ರ ರಜೆ'ಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ!

ನ. 25 ರಂದು ಪ್ರಧಾನಿ ಮೋದಿಯಿಂದ ರಾಮ ಮಂದಿರದ ಮೇಲೆ 21 ಅಡಿ ಎತ್ತರದ ಧರ್ಮ ಧ್ವಜಾರೋಹಣ

'ಮೂರ್ನಾಲ್ಕು ದಿನದಲ್ಲಿ ಡಿಸ್ಚಾರ್ಜ್ ಆಗ್ತಾರೆ': ದೇವೇಗೌಡರ ಆರೋಗ್ಯದ ಕುರಿತು ಎಚ್.ಡಿ ಕುಮಾರಸ್ವಾಮಿ ಹೇಳಿಕೆ

Op Sindoor ನಿಂದ ಭಾರಿ ನಷ್ಟ, ಭಾರತದ ವಿರುದ್ಧ ಪ್ರತೀಕಾರಕ್ಕೆ ಸಜ್ಜು: ಮೊದಲ ಬಾರಿಗೆ 'ಮಹಿಳಾ ವಿಂಗ್ ' ರಚಿಸಿದ ಉಗ್ರ ಸಂಘಟನೆ JeM!

SCROLL FOR NEXT