ಸಾಂದರ್ಭಿಕ ಚಿತ್ರ 
ರಾಜ್ಯ

ಹಾವೇರಿ: ಮರಕ್ಕೆ ಕಾರು ಡಿಕ್ಕಿ, ನಾಲ್ವರು ಯುವಕರು ಸಾವು; ಮೂವರಿಗೆ ಗಾಯ

ಮೃತರನ್ನು ಸವಣೂರು ತಾಲ್ಲೂಕಿನ ಬೇವಿನಹಳ್ಳಿಯ ನೀಲಪ್ಪ ಮೂಲಿಮನಿ(23), ಸಂದೀಪ ಕೋಟಿ (18), ಶಿವನಗೌಡರ್ ಯಲ್ಲನಗೌಡರ್(20) ಮತ್ತು ಕಲ್ಮೇಶ ಮನೋಜಿ(26) ಎಂದು ಗುರುತಿಸಲಾಗಿದೆ.

ಹಾವೇರಿ: ಹಾವೇರಿ ಜಿಲ್ಲೆಯ ಶಿಗ್ಗಾಂವ್ ಪಟ್ಟಣದ ಸಮೀಪ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಸವಣೂರು ತಾಲ್ಲೂಕಿನ ಬೇವಿನಹಳ್ಳಿಯ ನೀಲಪ್ಪ ಮೂಲಿಮನಿ(23), ಸಂದೀಪ ಕೋಟಿ (18), ಶಿವನಗೌಡರ್ ಯಲ್ಲನಗೌಡರ್(20) ಮತ್ತು ಕಲ್ಮೇಶ ಮನೋಜಿ(26) ಎಂದು ಗುರುತಿಸಲಾಗಿದೆ.

ಬೇವಿನಹಳ್ಳಿಯ ಏಳು ಯುವಕರು ಶನಿವಾರ ಬೆಳಗ್ಗೆ ತಮ್ಮೂರಿನಿಂದ ಕೆಲಸ ನಿಮಿತ್ತ ಬೆಳಗಾವಿ‌ ಜಿಲ್ಲೆಯ ಖಾನಾಪುರ ಸಮೀಪದ ನಂದಗಡ‌ಕ್ಕೆ ಹೊರಟಿದ್ದರು. ಈ ವೇಳೆ ಕಾರು ಚಾಲಕನ ನಿಯಂತ್ರ ತಪ್ಪಿ ಹನುಮರಹಳ್ಳಿಯ ಬಳಿ‌ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ನಂತರ, ಕಾರು ಉರುಳಿ ರಸ್ತೆ ಪಕ್ಕದ ‌ತಗ್ಗಿನಲ್ಲಿ ಬಿದ್ದಿದೆ ಎಂದು ಪೊಲೀಸರು ಹೇಳಿದ್ದಾರೆ.

ಭೀಕರ ಅಪಘಾತದಲ್ಲಿ ನೀಲಪ್ಪ ಮತ್ತು ಸಂದೀಪ್ ಸ್ಥಳದಲ್ಲೇ ಮೃತಪಟ್ಟರೆ, ಶಿವನಗೌಡ ಮತ್ತು ಕಲ್ಮೇಶ್ ಶಿಗ್ಗಾಂವ ತಾಲೂಕು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಈ ಸಂಬಂಧ ಶಿಗ್ಗಾಂವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟದಲ್ಲಿ ಜೈಶ್‍ನ 22 ವೈಟ್-ಕಾಲರ್ ಭಯೋತ್ಪಾದಕರು ಭಾಗಿ: ವಿಮಾನ ನಿಲ್ದಾಣಗಳಿಗೆ ಲುಕ್ಔಟ್ ಎಚ್ಚರಿಕೆ

'RSSಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ; 100 ವರ್ಷಗಳಲ್ಲಿ ಮೊದಲ ಬಾರಿ ಕಾನೂನು ಪಾಲನೆ'

ಪುಣೆ: ವಾಹನಗಳಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಟ್ರಕ್; ಕನಿಷ್ಠ ಎಂಟು ಮಂದಿ ಸಾವು - Video

ಬೆಂಗಳೂರಿನಲ್ಲಿ ಕಸ ಗುಡಿಸುವ ಯಂತ್ರಗಳಿಗೆ 613 ಕೋಟಿ ರೂ. ಬಾಡಿಗೆ; ಸಂಪುಟ ಸಭೆಯ ಪ್ರಮುಖ ತೀರ್ಮಾನಗಳು ಹೀಗಿವೆ

ಕೆಂಪು ಕೋಟೆ ಬಳಿ ನಡೆದದ್ದು ಉಗ್ರ ದಾಳಿ ಎಂಬುದರಲ್ಲಿ ಅನುಮಾನ ಇಲ್ಲ- ಮಾರ್ಕೊ ರುಬಿಯೊ; ಭಾರತದ ತನಿಖಾ ವಿಧಾನಕ್ಕೆ ತಲೆದೂಗಿದ ಅಮೆರಿಕ ಸಚಿವ!

SCROLL FOR NEXT