ಹೂತಿದ್ದ ಬಾಲಕಿ ಮೃತದೇಹ ಹೊರಗೆ ತೆಗೆದ ಪೊಲೀಸರು 
ರಾಜ್ಯ

ಹಾವೇರಿ: ಹೂತಿದ್ದ ಬಾಲಕಿ ಮೃತದೇಹ ಹೊರಗೆ ತೆಗೆದ ಪೊಲೀಸರು; ಪೋಸ್ಟ್ ಮಾರ್ಟಂ ನಂತರ ಮರ ಸಂಸ್ಕಾರ

ಜುಲೈ 2 ರಂದು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಆಲದಕಟ್ಟಿ ಗ್ರಾಮದ ತನ್ನ ನಿವಾಸದಲ್ಲಿ 14 ವರ್ಷದ ಅರ್ಚನಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಮೊರಾರ್ಜಿ ದೇಸಾಯಿ ಸರ್ಕಾರಿ ವಸತಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದ ಒಂದು ದಿನದ ನಂತರ, ಪೊಲೀಸರು ಮತ್ತು ವೈದ್ಯಕೀಯ ತಂಡವು ಮೃತರ ಶವವನ್ನು ಹೊರತೆಗೆದು ಶುಕ್ರವಾರ ಮರಣೋತ್ತರ ಪರೀಕ್ಷೆ ನಡೆಸಿತು.

ಜುಲೈ 2 ರಂದು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಆಲದಕಟ್ಟಿ ಗ್ರಾಮದ ತನ್ನ ನಿವಾಸದಲ್ಲಿ 14 ವರ್ಷದ ಅರ್ಚನಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಆಕೆ ಬರೆದ ಡೆತ್ ನೋಟ್‌ನಲ್ಲಿ, ತನ್ನ ಸಹಪಾಠಿ ಮತ್ತು ಆಕೆಯ ತಾಯಿ ವಿರುದ್ಧಕಿರುಕುಳದ ಆರೋಪ ಮಾಡಿದ್ದಳು.

ಆದರೆ, ಆಕೆಯ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡದೆ ಅಂತಿಮ ವಿಧಿವಿಧಾನಗಳನ್ನು ನಡೆಸಿದ್ದರು. ಅದಾದ ನಂತರ ಕೆಲವು ಗ್ರಾಮಸ್ಥರ ಬೆಂಬಲದೊಂದಿಗೆ ಬಾಲಕಿಯ ಪೋಷಕರು ಆರೋಪಿ ವಿದ್ಯಾರ್ಥಿನಿ ಜೋಯಾ ಪೋಷಕರಿಂದ 5 ಲಕ್ಷ ರೂಪಾಯಿ ಪರಿಹಾರವನ್ನು ಕೋರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅರ್ಚನಾ ಪೋಷಕರಿಗೆ 1 ಲಕ್ಷ ಪರಿಹಾರ ನೀಡುವಂತೆ ಶಾಲಾ ಆಡಳಿತ ಮಂಡಳಿ ಮನವರಿಕೆ ಮಾಡಿಕೊಟ್ಟಿತ್ತು ಎನ್ನಲಾಗಿದೆ. ಗ್ರಾಮಸ್ಥರು ಮಾಧ್ಯಮಗಳಿಗೆ ಮಾಹಿತಿ ನೀಡಿದ ನಂತರ ಸುದ್ದಿ ಹಬ್ಬಿತ್ತು.

ಡೆತ್ ನೋಟ್ ಸಿಕ್ಕಿದ ಬಳಿಕ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಎಲ್ಲಾ ಕೋನಗಳಿಂದ ಪ್ರಕರಣದ ತನಿಖೆ ನಡೆಸುತ್ತೇವೆ. ಸ್ಮಶಾನದಲ್ಲಿ ಶವಪರೀಕ್ಷೆ ಪೂರ್ಣಗೊಂಡ ನಂತರ ಹೊರತೆಗೆಯಲಾದ ದೇಹವನ್ನು ಕುಟುಂಬಕ್ಕೆ ಮರುಸಂಸ್ಕಾರಕ್ಕಾಗಿ ಹಸ್ತಾಂತರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶವ ಪರೀಕ್ಷೆ ನಡೆಸಿದ ಸ್ಮಶಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಜಮಾಯಿಸಿದ್ದರು. ಹಾವೇರಿ ಜಿಲ್ಲೆಯ ಹಿರಿಯ ಸರ್ಕಾರಿ ಅಧಿಕಾರಿಗಳ ಸಮ್ಮುಖದಲ್ಲಿ ಬಾಲಕಿಯ ಶವವನ್ನು ಹೊರತೆಗೆಯಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel