ಹೂತಿದ್ದ ಬಾಲಕಿ ಮೃತದೇಹ ಹೊರಗೆ ತೆಗೆದ ಪೊಲೀಸರು 
ರಾಜ್ಯ

ಹಾವೇರಿ: ಹೂತಿದ್ದ ಬಾಲಕಿ ಮೃತದೇಹ ಹೊರಗೆ ತೆಗೆದ ಪೊಲೀಸರು; ಪೋಸ್ಟ್ ಮಾರ್ಟಂ ನಂತರ ಮರ ಸಂಸ್ಕಾರ

ಜುಲೈ 2 ರಂದು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಆಲದಕಟ್ಟಿ ಗ್ರಾಮದ ತನ್ನ ನಿವಾಸದಲ್ಲಿ 14 ವರ್ಷದ ಅರ್ಚನಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಮೊರಾರ್ಜಿ ದೇಸಾಯಿ ಸರ್ಕಾರಿ ವಸತಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದ ಒಂದು ದಿನದ ನಂತರ, ಪೊಲೀಸರು ಮತ್ತು ವೈದ್ಯಕೀಯ ತಂಡವು ಮೃತರ ಶವವನ್ನು ಹೊರತೆಗೆದು ಶುಕ್ರವಾರ ಮರಣೋತ್ತರ ಪರೀಕ್ಷೆ ನಡೆಸಿತು.

ಜುಲೈ 2 ರಂದು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಆಲದಕಟ್ಟಿ ಗ್ರಾಮದ ತನ್ನ ನಿವಾಸದಲ್ಲಿ 14 ವರ್ಷದ ಅರ್ಚನಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಆಕೆ ಬರೆದ ಡೆತ್ ನೋಟ್‌ನಲ್ಲಿ, ತನ್ನ ಸಹಪಾಠಿ ಮತ್ತು ಆಕೆಯ ತಾಯಿ ವಿರುದ್ಧಕಿರುಕುಳದ ಆರೋಪ ಮಾಡಿದ್ದಳು.

ಆದರೆ, ಆಕೆಯ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡದೆ ಅಂತಿಮ ವಿಧಿವಿಧಾನಗಳನ್ನು ನಡೆಸಿದ್ದರು. ಅದಾದ ನಂತರ ಕೆಲವು ಗ್ರಾಮಸ್ಥರ ಬೆಂಬಲದೊಂದಿಗೆ ಬಾಲಕಿಯ ಪೋಷಕರು ಆರೋಪಿ ವಿದ್ಯಾರ್ಥಿನಿ ಜೋಯಾ ಪೋಷಕರಿಂದ 5 ಲಕ್ಷ ರೂಪಾಯಿ ಪರಿಹಾರವನ್ನು ಕೋರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅರ್ಚನಾ ಪೋಷಕರಿಗೆ 1 ಲಕ್ಷ ಪರಿಹಾರ ನೀಡುವಂತೆ ಶಾಲಾ ಆಡಳಿತ ಮಂಡಳಿ ಮನವರಿಕೆ ಮಾಡಿಕೊಟ್ಟಿತ್ತು ಎನ್ನಲಾಗಿದೆ. ಗ್ರಾಮಸ್ಥರು ಮಾಧ್ಯಮಗಳಿಗೆ ಮಾಹಿತಿ ನೀಡಿದ ನಂತರ ಸುದ್ದಿ ಹಬ್ಬಿತ್ತು.

ಡೆತ್ ನೋಟ್ ಸಿಕ್ಕಿದ ಬಳಿಕ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಎಲ್ಲಾ ಕೋನಗಳಿಂದ ಪ್ರಕರಣದ ತನಿಖೆ ನಡೆಸುತ್ತೇವೆ. ಸ್ಮಶಾನದಲ್ಲಿ ಶವಪರೀಕ್ಷೆ ಪೂರ್ಣಗೊಂಡ ನಂತರ ಹೊರತೆಗೆಯಲಾದ ದೇಹವನ್ನು ಕುಟುಂಬಕ್ಕೆ ಮರುಸಂಸ್ಕಾರಕ್ಕಾಗಿ ಹಸ್ತಾಂತರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶವ ಪರೀಕ್ಷೆ ನಡೆಸಿದ ಸ್ಮಶಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಜಮಾಯಿಸಿದ್ದರು. ಹಾವೇರಿ ಜಿಲ್ಲೆಯ ಹಿರಿಯ ಸರ್ಕಾರಿ ಅಧಿಕಾರಿಗಳ ಸಮ್ಮುಖದಲ್ಲಿ ಬಾಲಕಿಯ ಶವವನ್ನು ಹೊರತೆಗೆಯಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಹರಿಬಿಟ್ಟ ಆರೋಪಿಗಳು: ಹುಬ್ಬಳ್ಳಿ ಪೊಲೀಸರಿಂದ ಮೂವರ ಬಂಧನ!

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

SCROLL FOR NEXT