ಕೊಕೇನ್ (ಸಂಗ್ರಹ ಚಿತ್ರ) online desk
ರಾಜ್ಯ

30 ಕೋಟಿ ರೂ. ಮೌಲ್ಯದ ಕೊಕೇನ್ ಹೊಂದಿದ್ದ ಕೀನ್ಯಾ ಪ್ರಜೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಶಕ್ಕೆ!

ತಪಾಸಣೆ ವೇಳೆ ಪ್ರಯಾಣಿಕಳ ಬ್ಯಾಗೇಜ್ ನಲ್ಲಿ ಬಿಳಿ ಬಣ್ಣದ ಪುಡಿ ಪದಾರ್ಥ ಪತ್ತೆಯಾಗಿದ್ದು 3 ಕೆಜಿಗಳಷ್ಟಿತ್ತು.

ಬೆಂಗಳೂರು: 30 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಹೊಂದಿದ್ದ ಕೀನ್ಯಾ ಪ್ರಜೆಯನ್ನು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಬೆಂಗಳೂರು ವಿಭಾಗದ ಕಂದಾಯ ಗುಪ್ತಚರ ನಿರ್ದೇಶನಾಲಯ (DRI)ದ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿ ಕೀನ್ಯಾ ಪ್ರಜೆಯನ್ನು ಬಂಧಿಸಲಾಗಿದೆ.

ಅಧಿಕಾರಿಗಳ ಪ್ರಕಾರ, ಇಂಡಿಗೋ ವಿಮಾನದ ಮೂಲಕ ಶುಕ್ರವಾರ ದೋಹಾದಿಂದ ಬೆಂಗಳೂರಿಗೆ ಪ್ರಯಾಣಿಸಿದ ಕೀನ್ಯಾದ ಪ್ರಜೆಯನ್ನು ಡಿಆರ್‌ಐ ಅಧಿಕಾರಿಗಳು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಡೆದಿದ್ದಾರೆ.

ಅಧಿಕಾರಿಗಳ ಪ್ರಕಾರ, ಇಂಡಿಗೋ ವಿಮಾನದ ಮೂಲಕ ಶುಕ್ರವಾರ ದೋಹಾದಿಂದ ಬೆಂಗಳೂರಿಗೆ ಪ್ರಯಾಣಿಸಿದ ಕೀನ್ಯಾದ ಪ್ರಜೆಯನ್ನು ಡಿಆರ್‌ಐ ಅಧಿಕಾರಿಗಳು ವಿಸ್ತಾರವಾದ ಕಣ್ಗಾವಲು ನಂತರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಡೆದರು. ತಪಾಸಣೆ ವೇಳೆ ಪ್ರಯಾಣಿಕಳ ಬ್ಯಾಗೇಜ್ ನಲ್ಲಿ ಬಿಳಿ ಬಣ್ಣದ ಪುಡಿ ಪದಾರ್ಥ ಪತ್ತೆಯಾಗಿದ್ದು 3 ಕೆಜಿಗಳಷ್ಟಿತ್ತು. ಇದು 30 ಕೋಟಿ ರೂಪಾಯಿ ಮೌಲ್ಯದ್ದಾಗದ್ದ ಕೊಕೇನ್ ಎಂದು ತಿಳಿದುಬಂದಿದೆ.

"ಫೀಲ್ಡ್ ಟೆಸ್ಟಿಂಗ್ ಕಿಟ್‌ನ ಪ್ರಕಾರ ಪುಡಿಮಾಡಿದ ವಸ್ತುವು ಕೊಕೇನ್‌ ಎಂದು ಪರೀಕ್ಷೆಯಲ್ಲಿ ಸಾಬೀತಾಗಿದೆ. ಪ್ರಯಾಣಿಕಳನ್ನು ಎನ್‌ಡಿಪಿಎಸ್ (ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್) ಕಾಯ್ದೆ, 1985 ರ ನಿಬಂಧನೆಗಳ ಅಡಿಯಲ್ಲಿ ಬಂಧಿಸಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ" ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನೊಂದು ಘಟನೆಯಲ್ಲಿ, ಜುಲೈ 5 ರಂದು ಬ್ಯಾಂಕಾಕ್‌ನಿಂದ ಬರುತ್ತಿದ್ದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಷಿದ್ಧ ವಸ್ತುಗಳನ್ನು ಸಾಗಿಸುತ್ತಿದ್ದ ಶಂಕಿತ ಇಬ್ಬರು ಭಾರತೀಯ ಮಹಿಳಾ ಪ್ರಯಾಣಿಕರನ್ನು ಡಿಆರ್‌ಐ ಅಧಿಕಾರಿಗಳು ತಡೆದರು.

ಇನ್ನೊಂದು ಘಟನೆಯಲ್ಲಿ, ಜುಲೈ 5 ರಂದು ಬ್ಯಾಂಕಾಕ್‌ನಿಂದ ಬರುತ್ತಿದ್ದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಷಿದ್ಧ ವಸ್ತುಗಳನ್ನು ಸಾಗಿಸುತ್ತಿದ್ದ ಶಂಕಿತ ಇಬ್ಬರು ಭಾರತೀಯ ಮಹಿಳಾ ಪ್ರಯಾಣಿಕರನ್ನು ಡಿಆರ್‌ಐ ಅಧಿಕಾರಿಗಳು ತಡೆದಿದ್ದರು.

3.2 ಕೆ.ಜಿಯಷ್ಟು ಹೈಡ್ರೋನಿಕ್ ಮತ್ತು ಬರುವ ಪದಾರ್ಥ ಪತ್ತೆಯಾಗಿದ್ದು 3 ಕೋಟಿ ರೂಪಾಯಿ ಮೌಲ್ಯದ್ದಾಗಿದೆ ಎಂದು ಅಂದಾಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT