ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಬಳಿ ಬೆನ್ನಟ್ಟಿ ಯುವಕನ ಬರ್ಬರ ಹತ್ಯೆ..!

ಜೂನ್ 16 ರಂದು ಗಂಗಾಪುರ ಗ್ರಾಮದ 27 ವರ್ಷದ ನವೀನ್ ನಾಯ್ಕ್ ಎಂಬಾತನನ್ನು ಇದೇ ರೀತಿಯಲ್ಲಿ ಹತ್ಯೆ ಮಾಡಲಾಗಿತ್ತು.

ಬೆಂಗಳೂರು: ನಗರದ ಹೊರವಲಯದಲ್ಲಿರುವ ಬೆಂಗಳೂರು-ಕೋಲಾರ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಯುವಕನ ಬೆನ್ನಟ್ಟಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಶುಕ್ರವಾರ ರಾತ್ರಿ ನಡೆದಿದೆ.

ಮೃತ ಯುವಕನನ್ನು 24 ವರ್ಷದ ಭಾರ್ಗವ್ ಎಂದು ಗುರ್ತಿಸಲಾಗದ್ದು, ಈತ ಕೋಲಾರ ಮೂಲದವರು ಎಂದು ಹೇಳಲಾಗುತ್ತಿದೆ. ವಾಹನ ವಶಪಡಿಸಿಕೊಳ್ಳುವ ಸಂಸ್ಥೆಯಲ್ಲಿ ಈತ ಕೆಲಸ ಮಾಡುತ್ತಿದ್ದ.

ಶುಕ್ರವಾರ ರಾತ್ರಿ ಭಾರ್ಗವ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಹಿಂಬಾಲಿಸಿಕೊಂಡು ಬಂದಿರುವ ದುಷ್ಕರ್ಮಿಗಳು ಮಸಂದ್ರ-ಗಂಗಾಪುರ ಗ್ರಾಮದ ನಡುವಿನ ಮೈಲಾಪುರ ಗೇಟ್‌ನಲ್ಲಿ ಕಾರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಕೋಲಾರದಿಂದ ಕಾರೊಂದು ತಮ್ಮ ವಾಹನವನ್ನು ಹಿಂಬಾಲಿಸುತ್ತಿರುವುದನ್ನು ಭಾರ್ಗವ್ ಗಮನಿಸಿದ್ದಾರೆ. ಅಪಾಯವನ್ನು ಗ್ರಹಿಸಿದ ಅವರು ವೇಗವಾಗಿ ಓಡಲು ಪ್ರಾರಂಭಿಸಿದ್ದಾರೆ. ಆದರೆ, ಮೈಲಾಪುರ ಗೇಟ್‌ ಬಳಿ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿದ್ದಾರೆ. ಬಳಿಕ ಭಾರ್ಗವ್ ಕಾರಿನಿಂದ ಹೊರಬಂದು ಓಡಲು ಪ್ರಾರಂಭಿಸಿದ್ದು, ಈ ವೇಳೆ ಬೆನ್ನಟ್ಟಿರುವ ಆರೋಪಿಗಳು, ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಈ ಸಂಬಂಧ ನಂದಗುಡಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

ಜೂನ್ 16 ರಂದು ಗಂಗಾಪುರ ಗ್ರಾಮದ 27 ವರ್ಷದ ನವೀನ್ ನಾಯ್ಕ್ ಎಂಬಾತನನ್ನು ಇದೇ ರೀತಿಯಲ್ಲಿ ಹತ್ಯೆ ಮಾಡಲಾಗಿತ್ತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT