ನಟ ಶಂಕರ್ ನಾಗ್ ಮತ್ತು ಅಪರ್ಣಾ 
ರಾಜ್ಯ

ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ಶಂಕರ್‌ ನಾಗ್‌, ಅಪರ್ಣಾ ಹೆಸರಿಡಿ: ಸರ್ಕಾರಕ್ಕೆ ಬಿಜೆಪಿ ಶಾಸಕ ಯತ್ನಾಳ್‌ ಆಗ್ರಹ

ಕನ್ನಡ ಚಿತ್ರರಂಗದ ಮೇರು ನಟ ಶಂಕರ್ ನಾಗ್ ಹಾಗೂ ಕನ್ನಡಿಗರ ಮನದಲ್ಲಿ ಅಚ್ಚಳಿಯದೆ ಉಳಿದಿರುವ ಅಪರ್ಣಾ ಅವರ ಕೊಡುಗೆ ಕರ್ನಾಟಕಕ್ಕೆ ಹಾಗೂ ಕನ್ನಡಕ್ಕೆ ಅಪಾರವಾದುದು...

ಬೆಂಗಳೂರು: ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ನಟ ಶಂಕರ್‌ ನಾಗ್‌ ಹಾಗೂ ಇತ್ತೀಚೆಗೆ ನಿಧನರಾದ ನಟಿ, ನಿರೂಪಕಿ ಅಪರ್ಣಾ ಹೆಸರು ನಾಮಕರಣ ಮಾಡುವಂತೆ ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಒತ್ತಾಯಿಸಿದ್ದಾರೆ.‌

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ''ಕನ್ನಡ ಚಿತ್ರರಂಗದ ಮೇರು ನಟ ಶಂಕರ್ ನಾಗ್ ಹಾಗೂ ಕನ್ನಡಿಗರ ಮನದಲ್ಲಿ ಅಚ್ಚಳಿಯದೆ ಉಳಿದಿರುವ ಅಪರ್ಣಾ ಅವರ ಕೊಡುಗೆ ಕರ್ನಾಟಕಕ್ಕೆ ಹಾಗೂ ಕನ್ನಡಕ್ಕೆ ಅಪಾರವಾದುದು.

ಶಂಕರ್ ನಾಗ್ (Shankar Nag) ಹಾಗೂ ಅಪರ್ಣಾ (Aparna) ಅವರ ಹೆಸರುಗಳನ್ನು ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ಸರ್ಕಾರ ನಾಮಕರಣ ಮಾಡಲಿ'' ಎಂದು ಒತ್ತಾಯಿಸಿದ್ದಾರೆ.

ಇತ್ತೀಚೆಗೆ ನಿಧನರಾಗಿದ್ದ ಅಪರ್ಣಾ

ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಿರೂಪಕಿ ಅಪರ್ಣಾ ಈಚೆಗೆ ನಿಧನರಾದರು. ಅಪರ್ಣಾ ಅವರ ನಿಧನಕ್ಕೆ ಗಣ್ಯರು, ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ನಮ್ಮ ಮೆಟ್ರೋ ದನಿಯಾಗಿದ್ದ ನಿರೂಪಕಿಗೆ ಮೆಟ್ರೋ ಕೂಡ ಗೌರವ ಸಲ್ಲಿಸಿತ್ತು. ರಾಜ್ಯ ಸರ್ಕಾರ ಸಕಲ ಗೌರವಗಳೊಂದಿಗೆ ಅಪರ್ಣಾ ಅಂತ್ಯ ಕ್ರಿಯೆ ನಡೆಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT