ತನ್ವೀರ್ ಸೇಠ್ 
ರಾಜ್ಯ

ಮುಡಾ ಅಕ್ರಮದಲ್ಲಿ ಎಲ್ಲಾ ಪಕ್ಷಗಳ ನಾಯಕರೂ ಭಾಗಿಯಾಗಿದ್ದಾರೆ: ತನ್ವೀರ್ ಸೇಠ್

ಮುಡಾ ಅಕ್ರಮ ವಿಚಾರವಾಗಿ ತನಿಖೆ ನಡೆಯುತ್ತಿದೆ. ನಾನು ಪ್ರಾಧಿಕಾರದ ಸದಸ್ಯನಾಗಿದ್ದೇನೆ. ತನಿಖೆ ನಡೆಯುತ್ತಿರುವಾಗ ಆರೋಪದ ಬಗ್ಗೆ ನಾನು ಈಗ ಹೇಳಲು ಆಗಲ್ಲ. ನಿರಂತರ 15 ವರ್ಷದಿಂದ ಪ್ರಾಧಿಕಾರದ ಸದಸ್ಯನಾಗಿದ್ದೇನೆ. ಮುಡಾದಲ್ಲಿ ಅಧಿಕಾರಿಗಳು ಅಧಿಕಾರ ಮೀರಿ ಏನಾದರು ಮಾಡಿದ್ದರೆ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು.

ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಅಕ್ರಮದಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ನಾಯಕರೂ ಶಾಮೀಲಾಗಿದ್ದಾರೆ, ಆದರೆ, ಅವರ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಚಿವ ತನ್ವೀರ್ ಸೇಠ್ ಅವರು ಶನಿವಾರ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಅಕ್ರಮ ವಿಚಾರವಾಗಿ ತನಿಖೆ ನಡೆಯುತ್ತಿದೆ. ನಾನು ಪ್ರಾಧಿಕಾರದ ಸದಸ್ಯನಾಗಿದ್ದೇನೆ. ತನಿಖೆ ನಡೆಯುತ್ತಿರುವಾಗ ಆರೋಪದ ಬಗ್ಗೆ ನಾನು ಈಗ ಹೇಳಲು ಆಗಲ್ಲ. ನಿರಂತರ 15 ವರ್ಷದಿಂದ ಪ್ರಾಧಿಕಾರದ ಸದಸ್ಯನಾಗಿದ್ದೇನೆ. ಮುಡಾದಲ್ಲಿ ಅಧಿಕಾರಿಗಳು ಅಧಿಕಾರ ಮೀರಿ ಏನಾದರು ಮಾಡಿದ್ದರೆ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು.

ಪ್ರಾಧಿಕಾರ ಮಾಡಿದ ತೀರ್ಮಾನ ಕಾನೂನು ಬದ್ಧ ಆಗಿಲ್ಲ ಅಂದಾಗ ಆಯುಕ್ತರು ಸರ್ಕಾರಕ್ಕೆ ಪತ್ರ ಬರೆಯಬೇಕು. ಮುಡಾ ಸಂಬಂಧ ಹಿಂದಿನ ಸರ್ಕಾರದಿಂದ ಈವರೆಗೆ ಸುಮಾರು 12 ಪತ್ರಗಳನ್ನು ಬರೆದಿದ್ದಾರೆ. ನಾನೂ ಅನೇಕ ಪತ್ರಗಳನ್ನು ಬರೆದಿದ್ದೇನೆ. ಮಂಡಳಿ ಸಭೆ ನಡೆಸದೇ ಇರುವುದು, ಅಭಿವೃದ್ಧಿ ಕೆಲಸ ವಿಳಂಬ ಬಗ್ಗೆ ನಾನು ಪತ್ರಗಳನ್ನು ಬರೆದಿದ್ದೇನೆ. ಮುಡಾ ಸಂಬಂಧ ತನಿಖಾ ಹಂತದಲ್ಲಿರುವಾಗ ನಾನು ಮಾತನಾಡುವುದು ಸರಿಯಲ್ಲ ಎಂದು ತಿಳಿಸಿದರು.

ಪ್ರಾಧಿಕಾರದ ಸದಸ್ಯರಾಗಲು ಪರಿಷತ್, ವಿಧಾನಸಭೆ ಸದಸ್ಯತ್ವ ಇರಬೇಕು. ಇದನ್ನು ಸರ್ಕಾರ ಸರಿಪಡಿಸುವ ಕೆಲಸ ಮಾಡಬೇಕು. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮುಖಂಡರ ಹೆಸರು ಕೇಳಿ ಬರುತ್ತಿದೆ. ಮುಡಾ ನಿವೇಶನ ಹಂಚಿಕೆ ವಿಚಾರವಾಗಿ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಎಸ್.ಟಿ.ಸೋಮಶೇಖರ್ ಹೆಸರು ಕೇಳಿ ಬರುತ್ತಿದೆ. ಎಲ್ಲರ ಹೆಸರು ಕೇಳಿ ಬರುತ್ತಿದೆ. ಯಾರು ಇದ್ದಾರೆ, ಯಾರು ಇಲ್ಲ ಎಂಬ ಬಗ್ಗೆ ನಾನು ಹೇಳಲು ಆಗುವುದಿಲ್ಲ ಎಂದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT