ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್  
ರಾಜ್ಯ

ಜುಲೈ 22 ರಿಂದ ಅಂಗನವಾಡಿಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿ ಆರಂಭ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಮೊದಲ ಹಂತದಲ್ಲಿ 20 ಸಾವಿರ ಸರ್ಕಾರಿ ಶಾಲೆಗಳಲ್ಲಿ ಮಾಂಟೆಸ್ಸರಿ ತರಗತಿಗಳನ್ನು ಪ್ರಾರಂಭಿಸಲು ಯೋಜಿಸಲಾಗಿದೆ. ಇದು ಅಂಗನವಾಡಿ ಕೇಂದ್ರಗಳ ಬೆಳವಣಿಗೆಗೆ ಅಡ್ಡಿಯಾಗಬಾರದು. ಆದ್ದರಿಂದ ನಾವು ಅವುಗಳನ್ನು ನವೀಕರಿಸಲು ನಿರ್ಧರಿಸಿದ್ದೇವೆ ಎಂದು ಸಚಿವೆ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಮಾಂಟೆಸ್ಸರಿ ತರಗತಿಗಳನ್ನು ಪ್ರಾರಂಭಿಸಲು ರಾಜ್ಯಸರ್ಕಾರ ಉದ್ದೇಶಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಈ ಯೋಜನೆಯ ಪ್ರಕಾರ, ಜುಲೈ 22 ರಂದು ಸಾಂಕೇತಿಕವಾಗಿ 250 ಅಂಗನವಾಡಿ ಕೇಂದ್ರಗಳಲ್ಲಿ ಕೆಳ ಶಿಶುವಿಹಾರ ಮತ್ತು ಮೇಲ್ಮಟ್ಟದ ಶಿಶುವಿಹಾರದ ತರಗತಿಗಳಿಗೆ ಅವಕಾಶ ಕಲ್ಪಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವ ವಿಮಾ ಯೋಜನೆಗಳನ್ನು ಸಹ ಜಾರಿಗೆ ತರಲಾಗುವುದು ಎಂದರು.

ರಾಜ್ಯದ ಅಂಗನವಾಡಿ ಕೇಂದ್ರಗಳು, ಅದರಲ್ಲೂ ವಿಶೇಷವಾಗಿ 30 ವರ್ಷ ಮತ್ತು ಅದಕ್ಕಿಂತ ಹಳೆಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಹೇಳಿದರು. ಆ ಯೋಜನೆಯ ಭಾಗವಾಗಿ, 250 ಕೇಂದ್ರಗಳನ್ನು ಅಖೈರು ಮಾಡಲಾಗಿದೆ, ಈ ವರ್ಷ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಜುಲೈ 22 ರಿಂದ ಪ್ರಾರಂಭಿಸಲಾಗುವುದು. ಇದರೊಂದಿಗೆ ಕರ್ನಾಟಕವು ಮಾದರಿ ರಾಜ್ಯವಾಗಿ ಹೊರಹೊಮ್ಮಲಿದೆ ಎಂದು ಹೇಳಿದರು.

ಅಂಗನವಾಡಿ ಕೇಂದ್ರಗಳಲ್ಲಿಯೂ ಶಿಶುವಿಹಾರದ ಪೂರ್ವ ತರಗತಿಗಳನ್ನು ಆರಂಭಿಸಲಾಗುವುದು ಎಂದರು. ಅದರಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಕ್ಕಳಿಗೆ ಪುಸ್ತಕ, ಬ್ಯಾಗ್ ಮತ್ತು ಸಮವಸ್ತ್ರಗಳನ್ನು ನೀಡಲಾಗುವುದು. ಇಲ್ಲಿನ ಮಾಂಟೆಸ್ಸರಿ ತರಗತಿಗಳು ಮಕ್ಕಳಿಗೆ ಹೆಚ್ಚು ಸುರಕ್ಷಿತವಾಗಿರುತ್ತವೆ ಎಂದು ಅವರು ಒತ್ತಿ ಹೇಳಿದರು.

ಮೊದಲ ಹಂತದಲ್ಲಿ 20 ಸಾವಿರ ಸರ್ಕಾರಿ ಶಾಲೆಗಳಲ್ಲಿ ಮಾಂಟೆಸ್ಸರಿ ತರಗತಿಗಳನ್ನು ಪ್ರಾರಂಭಿಸಲು ಯೋಜಿಸಲಾಗಿದೆ. ಇದು ಅಂಗನವಾಡಿ ಕೇಂದ್ರಗಳ ಬೆಳವಣಿಗೆಗೆ ಅಡ್ಡಿಯಾಗಬಾರದು. ಆದ್ದರಿಂದ ನಾವು ಅವುಗಳನ್ನು ನವೀಕರಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದರು.

ಯಾವುದೇ ಅಂಗನವಾಡಿ ಶಿಕ್ಷಕರನ್ನು ತೆಗೆದುಹಾಕುವುದಿಲ್ಲ ಎಂದ ಸಚಿವೆ, ಈ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡಲಾಗುತ್ತಿದ್ದು, ಶಿಕ್ಷಕಿಯರಿಗೆ ಸೀರೆ ನೀಡಲಾಗುತ್ತದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಇತರೆ ಸವಲತ್ತುಗಳ ಕುರಿತು ಮಾತನಾಡಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವ ವಿಮಾ ಸೌಲಭ್ಯ ಕಲ್ಪಿಸುವ ಕುರಿತು ಮನವಿ ಮಾಡಲಿದ್ದೇವೆ ಎಂದರು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಿದ್ದೇವೆ. ಗೌರವಧನ ಹೆಚ್ಚಿಸುವ ಬಗ್ಗೆ ಸಿಎಂ ಜತೆ ಚರ್ಚೆ ನಡೆಸಲಿದ್ದೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್‌ ಪಂದ್ಯ, ರಾಜ್ಯ ಸಚಿವ ಸಂಪುಟದ ಒಪ್ಪಿಗೆ? ಗೃಹ ಇಲಾಖೆಗೆ ಭದ್ರತೆಯ ಹೊಣೆ!

ಟ್ರಂಪ್ ಗೆ ಮೋದಿ ದೂರವಾಣಿ ಕರೆ: ಮಹತ್ವದ ಚರ್ಚೆ!

ಸಿಎಂ ಸಿದ್ದರಾಮಯ್ಯರ ವಿಮಾನ ಪ್ರಯಾಣ: 'ರಾಜ್ಯದ ಬೊಕ್ಕಸ'ದಿಂದ ಆದ ಖರ್ಚು ಎಷ್ಟು ಗೊತ್ತಾ?

KSCA ಗೆ ಹೊಸ ಸದಸ್ಯರ ಸೇರ್ಪಡೆ: ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನ- ವೆಂಕಟೇಶ್ ಪ್ರಸಾದ್

ಪಶ್ಚಿಮ ಬಂಗಾಳ ಬಿಟ್ಟು ಇನ್ನುಳಿದ 6 ರಾಜ್ಯಗಳಿಗೆ SIR ಗಡುವು ವಿಸ್ತರಿಸಿದ ಚುನಾವಣಾ ಆಯೋಗ!

SCROLL FOR NEXT