ಡಿ ಕೆ ಶಿವಕುಮಾರ್  
ರಾಜ್ಯ

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ FIR ರದ್ದತಿಗೆ ಸುಪ್ರೀಂ ಕೋರ್ಟ್ ನಕಾರ

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಎಸ್ ಸಿ ಶರ್ಮಾ ಅವರನ್ನೊಳಗೊಂಡ ನ್ಯಾಯಪೀಠವು ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದೆ.

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿರುವುದನ್ನು ಪ್ರಶ್ನಿಸಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾಗೊಳಿಸಿದೆ. ಈ ಮೂಲಕ ಡಿ ಕೆ ಶಿವಕುಮಾರ್ ಅವರಿಗೆ ಹಿನ್ನಡೆಯಾಗಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಎಸ್ ಸಿ ಶರ್ಮಾ ಅವರನ್ನೊಳಗೊಂಡ ನ್ಯಾಯಪೀಠವು ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದೆ.

ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠ ಕೊನೆಯಲ್ಲಿ, ಕ್ಷಮಿಸಿ ಅರ್ಜಿ ವಜಾಗೊಳಿಸಲಾಗಿದೆ ಎಂದು ಹೇಳಿದೆ.

ಕಳೆದ ವರ್ಷ ಅಕ್ಟೋಬರ್ 19, 2023ರಲ್ಲಿ ಹೈಕೋರ್ಟ್ ತನ್ನ ಮನವಿಯನ್ನು ತಿರಸ್ಕರಿಸಿದ ಆದೇಶದ ವಿರುದ್ಧ ಡಿ ಕೆ ಶಿವಕುಮಾರ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇನ್ನು ಮೂರು ತಿಂಗಳೊಳಗೆ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಕೇಂದ್ರೀಯ ತನಿಖಾ ದಳಕ್ಕೆ (CBI) ಹೈಕೋರ್ಟ್ ನಿರ್ದೇಶನ ನೀಡಿದೆ.

ಏನಿದು ಪ್ರಕರಣ?: ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದಾಗ, 2013 ರ ಏಪ್ರಿಲ್ 1 ರಿಂದ 2018 ರ ಏಪ್ರಿಲ್ 30 ಅವಧಿಯಲ್ಲಿ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ. 74.93 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.

2017 ರಲ್ಲಿ ಶಿವಕುಮಾರ್ ಮನೆ ಮತ್ತು ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧ ಕಾರ್ಯಾಚರಣೆಗಳ ಆಧಾರದ ಮೇಲೆ, ಜಾರಿ ನಿರ್ದೇಶನಾಲಯ ಕೂಡ ಡಿಕೆ ಶಿವಕುಮಾರ್ ವಿರುದ್ಧ ತನಿಖೆಯನ್ನು ಪ್ರಾರಂಭಿಸಿತ್ತು. ಇ.ಡಿ ತನಿಖೆಯ ಆಧಾರದ ಮೇಲೆ ಸಿಬಿಐ ಅವರ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ರಾಜ್ಯ ಸರ್ಕಾರವು 2019 ರ ಸೆಪ್ಟೆಂಬರ್ 25 ರಂದು ಅನುಮತಿ ನೀಡಿತ್ತು. ಅದರಂತೆ, ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ 2020 ರ ಅಕ್ಟೋಬರ್ 3 ರಂದು ಎಫ್ಐಆರ್ ದಾಖಲಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT