ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ವಾಹನ ಖರೀದಿಗೆ ಹಣ ನೀಡದ ತಾಯಿಗೆ ಕೀಟನಾಶಕ ಕುಡಿಸಿ ಹತ್ಯೆಗೆ ಮಗಳು-ಅಳಿಯ ಯತ್ನ!

ದಂಪತಿಗಳಿಬ್ಬರೂ ಆಶಾ ಜೊತೆಯಲ್ಲೇ ಇದ್ದು, ಶುಕ್ರವಾರ ರಾತ್ರಿ ವಾಹನ ಖರೀದಿಗೆ ಹಣ ನೀಡಿಲ್ಲ ಎಂಬ ಕಾರಣಕ್ಕೆ ಜಗಳವಾಡಿದ್ದಾರೆ. ಮರುದಿನ ಬೆಳಿಗ್ಗೆ ಆಶಾ ಅವರಿಗೆ ಬಲವಂತವಾಗಿ ಕೀಟನಾಶಕ ಕುಡಿಸಿದ್ದಾರೆ.

ಬೆಂಗಳೂರು: ವಾಹನ ಖರೀದಿಸಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮಗಳು ಮತ್ತು ಅಳಿಯ ತಾಯಿಗೆ ಕೀಟನಾಶ ಕುಡಿಸಿ ಹತ್ಯೆಗೆ ಯತ್ನಗೆ ಯತ್ನ ನಡೆಸಿರುವ ಘಟನೆಯೊಂದು ಕೆಂಗೇರಿ ಸಮೀಪದ ಅಂಚೆಪಾಳ್ಯದಲ್ಲಿ ನಡೆದಿದೆ.

ವಿ ಆಶಾ (37) ಅವರು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳನ್ನು ಸುಶ್ಮಿತಾ ಹಾಗೂ ಆಕೆಯ ಪತಿ ಗಿರೀಶ್ ಎಂದು ಗುರ್ತಿಸಲಾಗಿದೆ.

ಗಿರೀಶ್ ನ್ಯಾಯಾಂಗ ಬಂಧನದಲ್ಲಿದ್ದು, ಸುಶ್ಮಿತಾ ಮೂರು ತಿಂಗಳ ಹಿಂದೆಯಷ್ಟೇ ಹೆಣ್ಣು ಮಗುವಿಗೆ ಜನ್ಮ ನೀಡಿರುವುದರಿಂದ ಬಂಧನ ಪ್ರಕ್ರಿಯೆ ನಡೆದಿಲ್ಲ.

ದಂಪತಿಗಳಿಬ್ಬರೂ ಆಶಾ ಜೊತೆಯಲ್ಲೇ ಇದ್ದು, ಶುಕ್ರವಾರ ರಾತ್ರಿ ವಾಹನ ಖರೀದಿಗೆ ಹಣ ನೀಡಿಲ್ಲ ಎಂಬ ಕಾರಣಕ್ಕೆ ಜಗಳವಾಡಿದ್ದಾರೆ. ಮರುದಿನ ಬೆಳಿಗ್ಗೆ ಆಶಾ ಅವರಿಗೆ ಬಲವಂತವಾಗಿ ಕೀಟನಾಶಕ ಕುಡಿಸಿದ್ದಾರೆ. ಬಳಿಕ ಬಾಗಿಲನ್ನು ಹೊರಗಿನಿಂದ ಲಾಕ್ ಮಾಡಿ, ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಬಳಿಕ ಆಶಾ ಅವರು ತನ್ನ ಸಹೋದರಿಗೆ ಕರೆ ಮಾಡಿ, ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ಬಂದ ಕುಟುಂಬಸ್ಥರು ಬಾಗಿಲು ಒಡೆದು ಆಶಾ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದು ಮೆಡಿಕೋ-ಲೀಗಲ್ ಪ್ರಕರಣವಾದ್ದರಿಂದ, ಆಸ್ಪತ್ರೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

ಸಂತ್ರಸ್ತ ಮಹಿಳೆ ಕೆ.ಆರ್.ಮಾರುಕಟ್ಟೆಯಲ್ಲಿ ಅಂಗಡಿ ಹೊಂದಿದ್ದು, ಪ್ರತಿದಿನ ಮುಂಜಾನೆ 4.30ಕ್ಕೆ ಮನೆಯಿಂದ ಹೊರಡುತ್ತಿದ್ದರು. ಶನಿವಾರ ಕೆಲಸ ಮುಗಿಸಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಗಿರೀಶ್ ಆಕೆಯ ಮೇಲೆ ಹಲ್ಲೆ ನಡೆಸಿರುವ ಆರೋಪವಿದೆ.

ಆರೋಪಿಗಳು ಆಕೆಯನ್ನು ಬಿಗಿಯಾಗಿ ಹಿಡಿದುಕೊಂಡು ವಿಷ ಕುಡಿಸಿದ್ದಾರೆಂದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಎನ್‌ಎಸ್‌ನ ಸೆಕ್ಷನ್ 109 ರ ಅಡಿಯಲ್ಲಿ ಕೊಲೆ ಯತ್ನದ ಪ್ರಕರಣವನ್ನು ಕುಮಲಗೂಡು ಪೊಲೀಸರು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT