ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ವಾಹನ ಖರೀದಿಗೆ ಹಣ ನೀಡದ ತಾಯಿಗೆ ಕೀಟನಾಶಕ ಕುಡಿಸಿ ಹತ್ಯೆಗೆ ಮಗಳು-ಅಳಿಯ ಯತ್ನ!

ದಂಪತಿಗಳಿಬ್ಬರೂ ಆಶಾ ಜೊತೆಯಲ್ಲೇ ಇದ್ದು, ಶುಕ್ರವಾರ ರಾತ್ರಿ ವಾಹನ ಖರೀದಿಗೆ ಹಣ ನೀಡಿಲ್ಲ ಎಂಬ ಕಾರಣಕ್ಕೆ ಜಗಳವಾಡಿದ್ದಾರೆ. ಮರುದಿನ ಬೆಳಿಗ್ಗೆ ಆಶಾ ಅವರಿಗೆ ಬಲವಂತವಾಗಿ ಕೀಟನಾಶಕ ಕುಡಿಸಿದ್ದಾರೆ.

ಬೆಂಗಳೂರು: ವಾಹನ ಖರೀದಿಸಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಮಗಳು ಮತ್ತು ಅಳಿಯ ತಾಯಿಗೆ ಕೀಟನಾಶ ಕುಡಿಸಿ ಹತ್ಯೆಗೆ ಯತ್ನಗೆ ಯತ್ನ ನಡೆಸಿರುವ ಘಟನೆಯೊಂದು ಕೆಂಗೇರಿ ಸಮೀಪದ ಅಂಚೆಪಾಳ್ಯದಲ್ಲಿ ನಡೆದಿದೆ.

ವಿ ಆಶಾ (37) ಅವರು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳನ್ನು ಸುಶ್ಮಿತಾ ಹಾಗೂ ಆಕೆಯ ಪತಿ ಗಿರೀಶ್ ಎಂದು ಗುರ್ತಿಸಲಾಗಿದೆ.

ಗಿರೀಶ್ ನ್ಯಾಯಾಂಗ ಬಂಧನದಲ್ಲಿದ್ದು, ಸುಶ್ಮಿತಾ ಮೂರು ತಿಂಗಳ ಹಿಂದೆಯಷ್ಟೇ ಹೆಣ್ಣು ಮಗುವಿಗೆ ಜನ್ಮ ನೀಡಿರುವುದರಿಂದ ಬಂಧನ ಪ್ರಕ್ರಿಯೆ ನಡೆದಿಲ್ಲ.

ದಂಪತಿಗಳಿಬ್ಬರೂ ಆಶಾ ಜೊತೆಯಲ್ಲೇ ಇದ್ದು, ಶುಕ್ರವಾರ ರಾತ್ರಿ ವಾಹನ ಖರೀದಿಗೆ ಹಣ ನೀಡಿಲ್ಲ ಎಂಬ ಕಾರಣಕ್ಕೆ ಜಗಳವಾಡಿದ್ದಾರೆ. ಮರುದಿನ ಬೆಳಿಗ್ಗೆ ಆಶಾ ಅವರಿಗೆ ಬಲವಂತವಾಗಿ ಕೀಟನಾಶಕ ಕುಡಿಸಿದ್ದಾರೆ. ಬಳಿಕ ಬಾಗಿಲನ್ನು ಹೊರಗಿನಿಂದ ಲಾಕ್ ಮಾಡಿ, ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಬಳಿಕ ಆಶಾ ಅವರು ತನ್ನ ಸಹೋದರಿಗೆ ಕರೆ ಮಾಡಿ, ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ಬಂದ ಕುಟುಂಬಸ್ಥರು ಬಾಗಿಲು ಒಡೆದು ಆಶಾ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದು ಮೆಡಿಕೋ-ಲೀಗಲ್ ಪ್ರಕರಣವಾದ್ದರಿಂದ, ಆಸ್ಪತ್ರೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

ಸಂತ್ರಸ್ತ ಮಹಿಳೆ ಕೆ.ಆರ್.ಮಾರುಕಟ್ಟೆಯಲ್ಲಿ ಅಂಗಡಿ ಹೊಂದಿದ್ದು, ಪ್ರತಿದಿನ ಮುಂಜಾನೆ 4.30ಕ್ಕೆ ಮನೆಯಿಂದ ಹೊರಡುತ್ತಿದ್ದರು. ಶನಿವಾರ ಕೆಲಸ ಮುಗಿಸಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಈ ವೇಳೆ ಗಿರೀಶ್ ಆಕೆಯ ಮೇಲೆ ಹಲ್ಲೆ ನಡೆಸಿರುವ ಆರೋಪವಿದೆ.

ಆರೋಪಿಗಳು ಆಕೆಯನ್ನು ಬಿಗಿಯಾಗಿ ಹಿಡಿದುಕೊಂಡು ವಿಷ ಕುಡಿಸಿದ್ದಾರೆಂದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಎನ್‌ಎಸ್‌ನ ಸೆಕ್ಷನ್ 109 ರ ಅಡಿಯಲ್ಲಿ ಕೊಲೆ ಯತ್ನದ ಪ್ರಕರಣವನ್ನು ಕುಮಲಗೂಡು ಪೊಲೀಸರು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT