ಬೆಳಗಾವಿ ಸುವರ್ಣ ಸೌಧ 
ರಾಜ್ಯ

ಬೆಳಗಾವಿ ಕಂಟೋನ್ಮೆಂಟ್ ಮಹಾನಗರ ಪಾಲಿಕೆಯೊಂದಿಗೆ ವಿಲೀನ

ಈ ಸಂಬಂಧ ಶೀಘ್ರದಲ್ಲೇ ಜಂಟಿ ಸಲಹಾ ಸಮಿತಿ ರಚಿಸಲಾಗುವುದು ಮತ್ತು ಈ ಸಮಿತಿಯು ಕಂಟೋನ್ಮೆಂಟ್ ವ್ಯಾಪ್ತಿಯಲ್ಲಿರುವ 1763.78 ಎಕರೆ ನಾಗರಿಕ ಭೂಮಿಯ ಸಮೀಕ್ಷೆ ನಡೆಸಿ ಮುಂದಿನ 15 ದಿನಗಳಲ್ಲಿ ವರದಿ ಸಲ್ಲಿಸಲಿದೆ.

ಬೆಳಗಾವಿ: ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬೆಳಗಾವಿ ಕಂಟೋನ್ಮೆಂಟ್ ನ ನಾಗರಿಕ ಪ್ರದೇಶವನ್ನು ಬೆಳಗಾವಿ ಮಹಾನಗರ ಪಾಲಿಕೆಯೊಂದಿಗೆ ವಿಲೀನಗೊಳಿಸುವ ಬಗ್ಗೆ ಸಮಗ್ರ ವರದಿ ಕೇಳಿದ್ದಾರೆ.

ಈ ಸಂಬಂಧ ಶೀಘ್ರದಲ್ಲೇ ಜಂಟಿ ಸಲಹಾ ಸಮಿತಿ ರಚಿಸಲಾಗುವುದು ಮತ್ತು ಈ ಸಮಿತಿಯು ಕಂಟೋನ್ಮೆಂಟ್ ವ್ಯಾಪ್ತಿಯಲ್ಲಿರುವ 1763.78 ಎಕರೆ ನಾಗರಿಕ ಭೂಮಿಯ ಸಮೀಕ್ಷೆ ನಡೆಸಿ ಮುಂದಿನ 15 ದಿನಗಳಲ್ಲಿ ವರದಿ ಸಲ್ಲಿಸಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಇಂದು ರಕ್ಷಣಾ ಸಚಿವಾಲಯದ ಜಂಟಿ ನಿರ್ದೇಶಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬೆನ್ನಲ್ಲೇ ಬೆಳಗಾವಿಯಲ್ಲಿ ಕಂಟೋನ್ಮೆಂಟ್ ನಾಗರಿಕ ಪ್ರದೇಶಗಳ ವಿಲೀನದ ವಿಷಯದ ಕುರಿತು ಸಭೆ ನಡೆಸಿದರು.

ಸಭೆಯಲ್ಲಿ ವಿಲೀನಕ್ಕೆ ಸಂಬಂಧಿಸಿದ ಹಲವಾರು ವಿಷಯಗಳ ಚರ್ಚಿಸಿದರು ಮತ್ತು ಅಂತಿಮವಾಗಿ ಕಂಟೋನ್ಮೆಂಟ್ ಬೋರ್ಡ್ ಪ್ರದೇಶಗಳ ಸಮೀಕ್ಷೆ ನಡೆಸಲು ಜಿಲ್ಲಾಧಿಕಾರಿ ನಿರ್ಧರಿಸಿದ್ದಾರೆ.

ವಿಲೀನಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಮುನ್ಸಿಪಲ್ ಅಡ್ಮಿನಿಸ್ಟ್ರೇಷನ್ ನಿರ್ದೇಶಕರಿಗೆ ಜಿಲ್ಲಾ ಮಟ್ಟದ ಜಂಟಿ ಸಲಹಾ ಸಮಿತಿ ರಚಿಸುವಂತೆ ಮನವಿ ಮಾಡಲಾಗಿದೆ.

ಜಿಲ್ಲಾಧಿಕಾರಿಗಳ ಪ್ರಕಾರ, ಈ ಸಲಹಾ ಸಮಿತಿಯು ಕಂಟೋನ್ಮೆಂಟ್ ವ್ಯಾಪ್ತಿಯ 1763.78 ಎಕರೆ ನಾಗರಿಕ ಪ್ರದೇಶದ ಸಮೀಕ್ಷೆ ನಡೆಸಲಿದೆ ಮತ್ತು ಮುಂದಿನ 15 ದಿನಗಳಲ್ಲಿ ವರದಿ ಸಲ್ಲಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT