ಶಸ್ತ್ರಚಿಕಿತ್ಸೆಗೊಳಗಾದ ಬಾಲಕನೊಂದಿಗೆ ವೈದ್ಯರ ತಂಡ. 
ರಾಜ್ಯ

111 ಕೆಜಿ ತೂಕವಿದ್ದ ಬಾಲಕನಿಗೆ ಸಂಭಾವ್ಯ ಪಾರ್ಶ್ವವಾಯು ತಪ್ಪಿಸಿದ Spinal Disc Surgery!

ಫೋರ್ಟಿಸ್‌ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಸಲಹೆಗಾರ ಡಾ.ವಿ ಗಣೇಶ್ ನೇತೃತ್ವದ ತಂಡ ಬಾಲಕನಿಗೆ ಒಂದು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದೆ.

ಬೆಂಗಳೂರು: ಬೆನ್ನುಮೂಳೆಯ ಡಿಸ್ಕ್‌ಲೊಕೇಟ್ (ಬೆನ್ನು ಮೂಳೆ ಪಲ್ಲಟಗೊಳ್ಳುವುದು) ಆಗಿದ್ದ ಪರಿಣಾಮ, ಪಾರ್ಶ್ವವಾಯುಗೆ ಒಳಗಾಗಬೇಕಿದ್ದ 111 ಕೆ.ಜಿ. ತೂಕದ 15 ವರ್ಷದ ಬಾಲಕನಿಗೆ, ʻಮೈಕ್ರೋ-ಲುಂಬಾರ್ ಡಿಸ್ಸೆಕ್ಟಮಿʼ (Micro Lumbar Discectomy) ಎಂಬ ಕಾಲು ಉಳಿಸುವ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯನ್ನು ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ನಡೆಸಿದೆ.

ಫೋರ್ಟಿಸ್‌ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಸಲಹೆಗಾರ ಡಾ.ವಿ ಗಣೇಶ್ ನೇತೃತ್ವದ ತಂಡ ಒಂದು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದೆ.

ಈ ಕುರಿತು ಮಾತನಾಡಿರುವ ವೈದ್ಯ ಗಣೇಶ್ ಅವರು, 111 ಕೆ.ಜಿ. ತೂಕವಿದ್ದ 15 ವರ್ಷದ ಸೈಯದ್ ಸಲಾಹುದೀನ್ ಕ್ವಾದ್ರಿ ಎಂಬ ಬಾಲಕನಿಗೆ ಕಾರಣಾಂತರಗಳಿಂದ ಬೆನ್ನಿನ ಮೂಳೆಯ ಡಿಸ್‌ಲೊಕೇಟ್‌ ನಿಂದ ಅಸಾಧ್ಯ ನೋವು ಕಾಣಿಸಿಕೊಂಡಿತ್ತು. ಈ ನೋವು ಕ್ರಮೇಣ ಬೆನ್ನಿನಿಂದ ಕಣಕಾಲುವರೆಗೂ ಹಬ್ಬಿತ್ತು. 4 ತಿಂಗಳ ಕಾಲ ಈ ನೋವನ್ನು ಹಾಗೆಯೇ ನಿರ್ಲಕ್ಷಿಸಿದ್ದರು. ಇದರಿಂದಾಗಿ ಬಾಲಕ ನಡೆಯಲು ಹಾಗೂ ಕೂರಲು ಸಹ ಆಗದಷ್ಟು ಅಗಾಧ ನೋವಿಗೆ ಒಳಗಾಗಿದ್ದ.

ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದ ಬಳಿಕ ಅವರಿಗೆ MRI ಸ್ಕ್ಯಾನ್‌ ಮಾಡುವ ಮೂಲಕ ಅವರ ಬೆನ್ನುಮೂಳೆಯ L3-L4 ಮಟ್ಟದಲ್ಲಿ ತೀವ್ರವಾದ ಪೋಸ್ಟರೊಸೆಂಟ್ರಲ್ ಡಿಸ್ಕ್ ಎಕ್ಸ್‌ಟ್ರಶನ್ ಆಗಿರುವುದು ಬಹಿರಂಗವಾಯಿತು. ಹೀಗಾಗಿ ಬಾಲಕನ ಕಣಕಾಲಿನವರೆಗೂ ಡಿಸ್‌ಲೊಕೇಟ್‌ನ ಪರಿಣಾಮ ಸಂಭವಿಸಿತ್ತು. ಬಾಲಕ ಈ ನೋವನ್ನು ಹೀಗೆಯೇ ನಿರ್ಲಕ್ಷ್ಯ ಮಾಡಿದ್ದರೇ ಮುಂದೊಂದುದಿನ ಆ ಕಾಲು ಪಾರ್ಶ್ವವಾಯುವಿಗೆ ಒಳಗಾಗುವ ಸಾಧ್ಯತೆ ಹೆಚ್ಚಾಗಿಯೇ ಇತ್ತು.

ಬಾಲಕನ ಆರೋಗ್ಯದ ಗಂಭೀರತೆ ಪರಿಗಣಿಸಿ ಆತನಿಗೆ ಮೈಕ್ರೊ-ಲುಂಬರ್ ಡಿಸೆಕ್ಟಮಿ ಶಸ್ತ್ರಚಿಕಿತ್ಸೆಯನ್ನು ಶಿಫಾರಸು ಮಾಡಿದೆವು. ಇದು ನರಗಳ ಮೇಲಿನ ಒತ್ತಡ ನಿವಾರಿಸಲು ಡಿಸ್‌ಲೊಕೇಟ್‌ ಆಗಿರುವ ಡಿಸ್ಕ್ ಅನ್ನು ತೆಗೆದುಹಾಕುವ ಶಸ್ತ್ರಚಿಕಿತ್ಸಾ ವಿಧಾನವಾಗಿದೆ. ಬಾಲಕನ ತೂಕ ಅಧಿಕವಾಗಿದ್ದರಿಂದ ಈ ಶಸ್ತ್ರಚಿಕಿತ್ಸೆ ಸಾಕಷ್ಟು ಸವಾಲಾಗಿತ್ತು, ಆದರೂ ನಮ್ಮ ತಂಡ ಕಾರ್ಯಕ್ರಮತೆಯಿಂದ ಸುರಕ್ಷತೆಯಾಗಿ ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಈ ಶಸ್ತ್ರಚಿಕಿತ್ಸೆಯ ನಂತರ ಬಾಲಕನ ನೋವು ಸಂಪೂರ್ಣ ನಿವಾರಣೆಯಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹರ್ಷವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT