ಎಚ್ ಡಿ ರೇವಣ್ಣ 
ರಾಜ್ಯ

ದೇವಸ್ಥಾನದಲ್ಲಿ ಜಾರಿ ಬಿದ್ದ ಎಚ್.ಡಿ ರೇವಣ್ಣ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ಆಷಾಢಮಾಸ ನಿಮಿತ್ತ ಉಪವಾಸವಿದ್ದ ಎಚ್ ಡಿ ರೇವಣ್ಣ ಅವರು ಇಂದು ಹೊಳೆನರಸೀಪುರ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ತೆರಳಿದ್ದರು.

ಹಾಸನ: ಮಾಜಿ ಸಚಿವ ಹಾಗೂ ಹಾಲಿ ಜೆಡಿಎಸ್ ಶಾಸಕ ಎಚ್‌.ಡಿ. ರೇವಣ್ಣ ಅವರು ಬುಧವಾರ ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಆಸ್ಪತ್ರೆ ದಾಖಲಾಗಿದ್ದಾರೆ.

ಆಷಾಢಮಾಸ ನಿಮಿತ್ತ ಉಪವಾಸವಿದ್ದ ಎಚ್ ಡಿ ರೇವಣ್ಣ ಅವರು ಇಂದು ಹೊಳೆನರಸೀಪುರ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ಮನೆ ದೇವರು ಹರದನಹಳ್ಳಿಯ ಈಶ್ವರ ದೇವಾಲಯಕ್ಕೆ ತೆರಳಿದ್ದಾಗ ಕಾಲು ಜಾರಿಬಿದ್ದಿದ್ದು, ಪಕ್ಕೆಲುಬು ಮುರಿದಿದೆ ಎನ್ನಲಾಗಿದೆ.

ತಕ್ಷಣ ರೇವಣ್ಣ ಅವರನ್ನು ಹೊಳೆನರಸೀಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆದಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಾರಿನಲ್ಲಿಯೇ ಬೆಂಗಳೂರಿಗೆ ತೆರಳಿದರು.

ಎಚ್.ಡಿ. ರೇವಣ್ಣ ಅವರು ಮಂಗಳವಾರ ವಿಧಾನಸಭೆ ಕಲಾಪದಲ್ಲಿ ಪಾಲ್ಗೊಂಡಿದ್ದರು. ಅಪಾರ ದೈವ ಭಕ್ತರಾಗಿರುವ ರೇವಣ್ಣ ಅವರು ಇಂದು ಹೊಳೆನರಸೀಪುರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಬೇಕಿತ್ತು. ಹೀಗಾಗಿ ಹೊಳೆನರಸೀಪುರಕ್ಕೆ ತೆರಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran War: Hormuz ಕುರಿತು ಬಹ್ರೇನ್ ನೇತೃತ್ವದಲ್ಲಿ ಕರಡು ನಿರ್ಣಯ; ಇಂದು UNSC ಮತದಾನ!

ಸೋಲಿನಲ್ಲೂ RCB ದಾಖಲೆ ಮುರಿದ CSK: 210 ರನ್ ಬಾರಿಸಿ ಚೆನ್ನೈ ವಿರುದ್ಧ 5 ವಿಕೆಟ್ ಗಳಿಂದ ಗೆದ್ದ ಪಂಜಾಬ್‌!

ಹುಬ್ಬಳ್ಳಿ Love Jihad ಕೇಸ್‌ಗೆ ಟ್ವಿಸ್ಟ್: Gym ಟ್ರೈನರ್ Sameer Mulla ಮೊಬೈಲ್‌ನಲ್ಲಿ ಯುವತಿಯರ ಫೋಟೋಗಳು ಪತ್ತೆ!

'ನಿಮ್ದೊಂದೆರಡು ಕಿತ್ತೋದ ವಿಮಾನವಾಹಕ ನೌಕೆಗಳು ಇದ್ಯಲ್ಲಾ ಯುದ್ಧಕ್ಕೆ ಕಳಿಸ್ತೀರಾ?' ಅಂತ ಕೇಳಿದ್ದೆ, ಮ್ಯಾಕ್ರಾನ್ ಗೆ ಹೆಂಡ್ತಿ ಕಾಟ: ಬ್ರಿಟನ್, ಫ್ರಾನ್ಸ್ ಬಗ್ಗೆ ಟ್ರಂಪ್ ವ್ಯಂಗ್ಯ

Bengal polls: ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ರಾಜಕಾರಣಿಗಳಿಗೆ ಸೆಕ್ಯೂರಿಟಿ ವಾಪಸ್, ಚುನಾವಣಾ ಆಯೋಗ ನಿರ್ದೇಶನ!

SCROLL FOR NEXT