ಎಚ್ ಡಿ ರೇವಣ್ಣ 
ರಾಜ್ಯ

ದೇವಸ್ಥಾನದಲ್ಲಿ ಜಾರಿ ಬಿದ್ದ ಎಚ್.ಡಿ ರೇವಣ್ಣ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ಆಷಾಢಮಾಸ ನಿಮಿತ್ತ ಉಪವಾಸವಿದ್ದ ಎಚ್ ಡಿ ರೇವಣ್ಣ ಅವರು ಇಂದು ಹೊಳೆನರಸೀಪುರ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ತೆರಳಿದ್ದರು.

ಹಾಸನ: ಮಾಜಿ ಸಚಿವ ಹಾಗೂ ಹಾಲಿ ಜೆಡಿಎಸ್ ಶಾಸಕ ಎಚ್‌.ಡಿ. ರೇವಣ್ಣ ಅವರು ಬುಧವಾರ ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಆಸ್ಪತ್ರೆ ದಾಖಲಾಗಿದ್ದಾರೆ.

ಆಷಾಢಮಾಸ ನಿಮಿತ್ತ ಉಪವಾಸವಿದ್ದ ಎಚ್ ಡಿ ರೇವಣ್ಣ ಅವರು ಇಂದು ಹೊಳೆನರಸೀಪುರ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ಮನೆ ದೇವರು ಹರದನಹಳ್ಳಿಯ ಈಶ್ವರ ದೇವಾಲಯಕ್ಕೆ ತೆರಳಿದ್ದಾಗ ಕಾಲು ಜಾರಿಬಿದ್ದಿದ್ದು, ಪಕ್ಕೆಲುಬು ಮುರಿದಿದೆ ಎನ್ನಲಾಗಿದೆ.

ತಕ್ಷಣ ರೇವಣ್ಣ ಅವರನ್ನು ಹೊಳೆನರಸೀಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆದಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಾರಿನಲ್ಲಿಯೇ ಬೆಂಗಳೂರಿಗೆ ತೆರಳಿದರು.

ಎಚ್.ಡಿ. ರೇವಣ್ಣ ಅವರು ಮಂಗಳವಾರ ವಿಧಾನಸಭೆ ಕಲಾಪದಲ್ಲಿ ಪಾಲ್ಗೊಂಡಿದ್ದರು. ಅಪಾರ ದೈವ ಭಕ್ತರಾಗಿರುವ ರೇವಣ್ಣ ಅವರು ಇಂದು ಹೊಳೆನರಸೀಪುರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಬೇಕಿತ್ತು. ಹೀಗಾಗಿ ಹೊಳೆನರಸೀಪುರಕ್ಕೆ ತೆರಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!