ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಮೊಬೈಲ್​ ಟಾರ್ಚ್ ಆನ್ ಮಾಡುವ ಭರದಲ್ಲಿ ತುರ್ತು ಸಹಾಯವಾಣಿಗೆ ಕರೆ ಮಾಡಿದ ಖದೀಮ ಈಗ ಪೊಲೀಸರ ಅತಿಥಿ!

ಈ ಹಿಂದೆ ಆರೋಗ್ಯ ಕೇಂದ್ರದಲ್ಲಿ ಹೊರಗುತ್ತಿಗೆ ಆಧಾರದ ಆಂಬ್ಯುಲೆನ್ಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಕಳ್ಳತನಕ್ಕೆ ಎಂದು ಸಂಚು ರೂಪಿಸಿಕೊಂಡು ನಕಲಿ ಕೀ ಸಿದ್ದಪಡಿಸಿಕೊಂಡಿದ್ದ.

ಬೆಂಗಳೂರು: ಕಳ್ಳತನಕ್ಕೆಂದು ಬಂದ ಕಳ್ಳ ಕತ್ತಲಲ್ಲಿ ಮೊಬೈಲ್ ಟಾರ್ಚ್ ಆನ್ ಮಾಡಲು ಹೋಗಿ ಎಮರ್ಜೆನ್ಸಿ ನಂಬರಿ (112)ಗೆ ಕರೆ ಮಾಡಿ ಪೊಲೀಸರ ಅತಿಥಿಯಾದ ಘಟನೆ ನಗರದಲ್ಲಿ ನಡೆದಿದೆ.

ಆಶಾ ಕಾರ್ಯಕರ್ತೆಯರಿಗೆ ಹಂಚಲು ಜಯನಗರ 2ನೇ ಬ್ಲಾಕ್‌ನಲ್ಲಿರುವ ಬಿಬಿಎಂಪಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿರಿಸಿದ್ದ ಟ್ಯಾಬ್‌ಗಳನ್ನು ಕದ್ದೊಯ್ದಿದ್ದ ಶ್ರೀನಿವಾಸ್​ ಎಂಬಾತನನ್ನು ಸಿದ್ದಾಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ಆರೋಗ್ಯ ಕೇಂದ್ರದಲ್ಲಿ ಹೊರಗುತ್ತಿಗೆ ಆಧಾರದ ಆಂಬ್ಯುಲೆನ್ಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಕಳ್ಳತನಕ್ಕೆ ಎಂದು ಸಂಚು ರೂಪಿಸಿಕೊಂಡು ನಕಲಿ ಕೀ ಸಿದ್ದಪಡಿಸಿಕೊಂಡಿದ್ದ.

ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಹಂಚಲು ಖರೀದಿಸಿದ್ದ ಟ್ಯಾಬ್‌ಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಸ್ತನು ಮಾಡಲಾಗಿತ್ತು. ಜುಲೈ 9 ರಂದು ರಾತ್ರಿ ನಕಲಿ ಕೀ ಬಳಸಿ ಆರೋಗ್ಯ ಕೇಂದ್ರಕ್ಕೆ ಬಂದಿದ್ದ ಆರೋಪಿ, 62 ಟ್ಯಾಬ್‌ಗಳನ್ನು ಕಳ್ಳತನ ಮಾಡಿದ್ದ. ಮರುದಿನ ಕಳ್ಳತನವಾಗಿರುವುದನ್ನು ಗಮನಿಸಿದ್ದ ವೈದ್ಯಕೀಯ ಅಧಿಕಾರಿ, ಸಿದ್ದಾಪುರ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರಿಗೆ ಕೃತ್ಯ ನಡೆದ ಸಂದರ್ಭದಲ್ಲಿ ಅದೇ ಸ್ಥಳದಿಂದ ಪೊಲೀಸ್ ತುರ್ತು ಸಹಾಯವಾಣಿಗೆ ಕರೆಯೊಂದು ಬಂದು ಸ್ಥಗಿತವಾಗಿರುವ ಮಾಹಿತಿ ಲಭ್ಯವಾಗಿತ್ತು.

ಕಳ್ಳತನ ಮಾಡಲು ಬಂದಿದ್ದ ಆರೋಪಿ ಕತ್ತಲಿನಲ್ಲಿ ಮೊಬೈಲ್ ಟಾರ್ಚ್ ಆನ್ ಮಾಡಲು ಹೋಗಿ ಎಮರ್ಜೆನ್ಸಿ ನಂಬರಿಗೆ ಕರೆ ಮಾಡಿದ್ದ.‌ ತಕ್ಷಣ ಆ ನಂಬರ್ ಆಧರಿಸಿ ಆರೋಪಿಯನ್ನು ಪತ್ತೆ ಹಚ್ಚಿದಾಗ ಕೃತ್ಯ ಬಯಲಾಗಿದೆ‌.

ಸದ್ಯ ಆರೋಪಿಯನ್ನು ಬಂಧಿಸಿರುವ ಸಿದ್ದಾಪುರ ಠಾಣಾ ಪೊಲೀಸರು, ಆತನಿಂದ 61 ಟ್ಯಾಬ್‌ಗಳು, 2 ಯುಪಿಎಸ್ ಬ್ಯಾಟರಿಗಳನ್ನು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT