ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಮೊಬೈಲ್​ ಟಾರ್ಚ್ ಆನ್ ಮಾಡುವ ಭರದಲ್ಲಿ ತುರ್ತು ಸಹಾಯವಾಣಿಗೆ ಕರೆ ಮಾಡಿದ ಖದೀಮ ಈಗ ಪೊಲೀಸರ ಅತಿಥಿ!

ಈ ಹಿಂದೆ ಆರೋಗ್ಯ ಕೇಂದ್ರದಲ್ಲಿ ಹೊರಗುತ್ತಿಗೆ ಆಧಾರದ ಆಂಬ್ಯುಲೆನ್ಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಕಳ್ಳತನಕ್ಕೆ ಎಂದು ಸಂಚು ರೂಪಿಸಿಕೊಂಡು ನಕಲಿ ಕೀ ಸಿದ್ದಪಡಿಸಿಕೊಂಡಿದ್ದ.

ಬೆಂಗಳೂರು: ಕಳ್ಳತನಕ್ಕೆಂದು ಬಂದ ಕಳ್ಳ ಕತ್ತಲಲ್ಲಿ ಮೊಬೈಲ್ ಟಾರ್ಚ್ ಆನ್ ಮಾಡಲು ಹೋಗಿ ಎಮರ್ಜೆನ್ಸಿ ನಂಬರಿ (112)ಗೆ ಕರೆ ಮಾಡಿ ಪೊಲೀಸರ ಅತಿಥಿಯಾದ ಘಟನೆ ನಗರದಲ್ಲಿ ನಡೆದಿದೆ.

ಆಶಾ ಕಾರ್ಯಕರ್ತೆಯರಿಗೆ ಹಂಚಲು ಜಯನಗರ 2ನೇ ಬ್ಲಾಕ್‌ನಲ್ಲಿರುವ ಬಿಬಿಎಂಪಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿರಿಸಿದ್ದ ಟ್ಯಾಬ್‌ಗಳನ್ನು ಕದ್ದೊಯ್ದಿದ್ದ ಶ್ರೀನಿವಾಸ್​ ಎಂಬಾತನನ್ನು ಸಿದ್ದಾಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ಆರೋಗ್ಯ ಕೇಂದ್ರದಲ್ಲಿ ಹೊರಗುತ್ತಿಗೆ ಆಧಾರದ ಆಂಬ್ಯುಲೆನ್ಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಕಳ್ಳತನಕ್ಕೆ ಎಂದು ಸಂಚು ರೂಪಿಸಿಕೊಂಡು ನಕಲಿ ಕೀ ಸಿದ್ದಪಡಿಸಿಕೊಂಡಿದ್ದ.

ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಹಂಚಲು ಖರೀದಿಸಿದ್ದ ಟ್ಯಾಬ್‌ಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಸ್ತನು ಮಾಡಲಾಗಿತ್ತು. ಜುಲೈ 9 ರಂದು ರಾತ್ರಿ ನಕಲಿ ಕೀ ಬಳಸಿ ಆರೋಗ್ಯ ಕೇಂದ್ರಕ್ಕೆ ಬಂದಿದ್ದ ಆರೋಪಿ, 62 ಟ್ಯಾಬ್‌ಗಳನ್ನು ಕಳ್ಳತನ ಮಾಡಿದ್ದ. ಮರುದಿನ ಕಳ್ಳತನವಾಗಿರುವುದನ್ನು ಗಮನಿಸಿದ್ದ ವೈದ್ಯಕೀಯ ಅಧಿಕಾರಿ, ಸಿದ್ದಾಪುರ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರಿಗೆ ಕೃತ್ಯ ನಡೆದ ಸಂದರ್ಭದಲ್ಲಿ ಅದೇ ಸ್ಥಳದಿಂದ ಪೊಲೀಸ್ ತುರ್ತು ಸಹಾಯವಾಣಿಗೆ ಕರೆಯೊಂದು ಬಂದು ಸ್ಥಗಿತವಾಗಿರುವ ಮಾಹಿತಿ ಲಭ್ಯವಾಗಿತ್ತು.

ಕಳ್ಳತನ ಮಾಡಲು ಬಂದಿದ್ದ ಆರೋಪಿ ಕತ್ತಲಿನಲ್ಲಿ ಮೊಬೈಲ್ ಟಾರ್ಚ್ ಆನ್ ಮಾಡಲು ಹೋಗಿ ಎಮರ್ಜೆನ್ಸಿ ನಂಬರಿಗೆ ಕರೆ ಮಾಡಿದ್ದ.‌ ತಕ್ಷಣ ಆ ನಂಬರ್ ಆಧರಿಸಿ ಆರೋಪಿಯನ್ನು ಪತ್ತೆ ಹಚ್ಚಿದಾಗ ಕೃತ್ಯ ಬಯಲಾಗಿದೆ‌.

ಸದ್ಯ ಆರೋಪಿಯನ್ನು ಬಂಧಿಸಿರುವ ಸಿದ್ದಾಪುರ ಠಾಣಾ ಪೊಲೀಸರು, ಆತನಿಂದ 61 ಟ್ಯಾಬ್‌ಗಳು, 2 ಯುಪಿಎಸ್ ಬ್ಯಾಟರಿಗಳನ್ನು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT