ನಿರ್ದೇಶಕ ಗಜ 
ರಾಜ್ಯ

20 ವರ್ಷಗಳ ಹಿಂದಿನ ಕೊಲೆ ಪ್ರಕರಣ: ಕನ್ನಡ ಸಿನಿಮಾ ನಿರ್ದೇಶಕ ಬಂಧನ!

ರೌಡಿ ಶೀಟರ್ ಕೋಥಾ ರವಿ ಹತ್ಯೆ ಪ್ರಕರಣದಲ್ಲಿ ನಿರ್ದೇಶಕ 8ನೇ ಆರೋಪಿಯಾಗಿದ್ದಾರೆ. ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2004ರಲ್ಲಿ ಕೊಲೆ ನಡೆದಿತ್ತು.

ಬೆಂಗಳೂರು: 20 ವರ್ಷಗಳ ಹಿಂದಿನ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಕನ್ನಡ ಚಲನಚಿತ್ರ ನಿರ್ದೇಶಕರೊಬ್ಬರನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ರೌಡಿ ಶೀಟರ್ ಕೋಥಾ ರವಿ ಹತ್ಯೆ ಪ್ರಕರಣದಲ್ಲಿ ನಿರ್ದೇಶಕ 8ನೇ ಆರೋಪಿಯಾಗಿದ್ದಾರೆ. ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2004ರಲ್ಲಿ ಕೊಲೆ ನಡೆದಿತ್ತು.

ನಿರ್ದೇಶಕನನ್ನು ಗಜೇಂದ್ರ ಅಲಿಯಾಸ್ ಗಜ ಎಂದು ಗುರುತಿಸಲಾಗಿದೆ. ರೌಡಿ ಶೀಟರ್ ಹತ್ಯೆ ನಂತರ ಪೊಲೀಸರು ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಸುಮಾರು ಒಂದು ವರ್ಷ ನ್ಯಾಯಾಂಗ ಬಂಧನದಲ್ಲಿದ್ದು, ನಂತರ ಜಾಮೀನಿನ ಮೇರೆಗೆ ಜೈಲಿನಿಂದ ಹೊರಗೆ ಬಂದಿದ್ದರು. ತದನಂತರ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಚಂದ್ರಪ್ಪ ಮತ್ತು ಅಲ್ಯೂಮಿನಿಯಂ ಬಾಬು ಕೊಲೆಯಲ್ಲಿ ಭಾಗಿಯಾಗಿರುವ ಇನ್ನಿಬ್ಬರು.

ಅರಸಯ್ಯನ ಆಪ್ತನಾಗಿರುವ ಗಜೇಂದ್ರ ಎರಡು ಕನ್ನಡ ಮತ್ತು ತಮಿಳು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ ಎನ್ನಲಾಗಿದೆ. ಜಾಮೀನು ಸಿಕ್ಕ ನಂತರ ಅವರು ನೆರೆಯ ರಾಜ್ಯದಲ್ಲಿ ನೆಲೆಸಿದ್ದರು ಎನ್ನಲಾಗಿದೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT