ರೈಲ್ವೆ ಅಧಿಕಾರಿಗಳೊಂದಿಗೆ ಸಂಸದ ವಿ. ಸೋಮಣ್ಣ 
ರಾಜ್ಯ

ಕರಾವಳಿ ಕರ್ನಾಟಕದ ರೈಲ್ವೆ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗೊಳಿಸಲಾಗುವುದು: ಕೇಂದ್ರ ಸಚಿವ ವಿ.ಸೋಮಣ್ಣ

ರೈಲ್ವೆ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಇಂದು ಮಂಗಳೂರಿಗೆ ಆಗಮಿಸಿದ್ದ ವಿ ಸೋಮಣ್ಣ ಅವರು, ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಬಾಕಿ ಉಳಿದಿರುವ ಹಲವಾರು ರೈಲ್ವೆ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರು ಬುಧವಾರ ಭರವಸೆ ನೀಡಿದರು.

ರೈಲ್ವೆ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಇಂದು ಮಂಗಳೂರಿಗೆ ಆಗಮಿಸಿದ್ದ ವಿ ಸೋಮಣ್ಣ ಅವರು, ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಮೇಲ್ದರ್ಜೆ ಗೇರಿಸಲು ಎರಡು ತಿಂಗಳಲ್ಲಿ ರೂಪುರೇಷೆ ತಯಾರಿಸಿ ಕ್ರಮ ವಹಿಸಲಾಗುವುದು. ಈ ಸಂಬಂಧ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಉನ್ನತ ಮಟ್ಟದ ಸಭೆಯನ್ನು ಶೀಘ್ರದಲ್ಲೇ ಕರೆಯಲಾಗುವುದು ಎಂದು ಹೇಳಿದರು.

ಕಳೆದ 40 ವರ್ಷಗಳಿಂದ ಮಂಗಳೂರಿನ ರೈಲ್ವೆ ಅಭಿವೃದ್ಧಿ ಕುಂಠಿತವಾಗಿದ್ದು, ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು. ತಮಿಳುನಾಡು, ಕೇರಳ, ಗೋವಾ ಮತ್ತು ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಮಂಗಳೂರು ಮತ್ತು ಕಾರವಾರ ವಿಭಾಗದಲ್ಲಿ ರೈಲ್ವೆ ಅಭಿವೃದ್ಧಿ ಕಾಮಗಾರಿಗಳು ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ.

ಈ ನಿಟ್ಟಿನಲ್ಲಿ ತಜ್ಞರು, ಜನಪ್ರತಿನಿಧಿಗಳು, ಅಧಿಕಾರಿಗಳನ್ನು ಒಟ್ಟುಗೂಡಿಸಿ ಎರಡು ತಿಂಗಳೊಳಗೆ ನೀಲನಕ್ಷೆ ಸಿದ್ಧಪಡಿಸಲಾಗುವುದು ಎಂದರು.

ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ಸಮನ್ವಯ ಕೊರತೆ ಕಂಡು ಬರುತ್ತಿದೆ ಎಂದ ಸಚಿವರು, "ನಾವು ಸಾಮಾನ್ಯವಾಗಿ ಕರ್ನಾಟಕದಲ್ಲಿ ಮತ್ತು ವಿಶೇಷವಾಗಿ ಕರಾವಳಿಯಲ್ಲಿ ರೈಲ್ವೆ ನೆಟ್‌ವರ್ಕಿಂಗ್‌ಗೆ ಸಂಬಂಧಿಸಿದ ಸಮಗ್ರ ಅಭಿವೃದ್ಧಿಯನ್ನು ಯೋಜಿಸುತ್ತಿದ್ದೇವೆ" ಎಂದು ಹೇಳಿದರು.

ಕರಾವಳಿ ರೈಲ್ವೆ ಮೂಲಸೌಕರ್ಯಗಳ ಪರಿಶೀಲನಾ ಸಭೆಯಲ್ಲಿ, ಕರಾವಳಿ ರೈಲ್ವೆ ಅಭಿವೃದ್ಧಿ, ವಿಸ್ತರಣೆ ಮತ್ತು ಕರಾವಳಿ ಪ್ರದೇಶದ ಹೆಚ್ಚುವರಿ ಸೇವೆಗಳನ್ನು ನಿರ್ವಹಿಸುವ ಒಂದು ಪ್ರತೇಕ ವಲಯ ಹೊಂದುವುದು ಉತ್ತಮ ಎಂದು ಸಚಿವರು ಸೂಚಿಸಿದ್ದಾರೆ.

ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಸಚಿವರಿಗೆ ಮಂಗಳೂರು ರೈಲ್ವೆ ಆಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಮೇಯರ್ ಸುಧೀರ್ ಶೆಟ್ಟಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT