ವಿಧಾನಸಭೆ ಅಧಿವೇಶನ 
ರಾಜ್ಯ

ಕಳೆದ 3-4 ವರ್ಷಗಳಲ್ಲಿ ಎಲ್ಲಾ SC/ST ನಿಗಮಗಳಲ್ಲಿ ಹಗರಣಗಳು ನಡೆದಿವೆ: ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರ ಸ್ವಾಮಿ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಅವ್ಯವಹಾರ ನಡೆದಿದ್ದು, ಮಾಜಿ ಎಂಎಲ್‌ಸಿ ಸುನೀಲ್ ವಲ್ಯಾಪೂರೆ ಅವರ ಪುತ್ರ ವಿನಯ್ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿದೆ.

ಬೆಂಗಳೂರು: ಕಳೆದ 3-4 ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳ ಎಲ್ಲಾ ಮಂಡಳಿಗಳು ಮತ್ತು ನಿಗಮಗಳಲ್ಲಿ ಹಗರಣಗಳು ನಡೆದಿವೆ ಎಂದು ಎಸ್‌ಸಿ/ಎಸ್‌ಟಿ ಕಲ್ಯಾಣ ಸಮಿತಿ ಅಧ್ಯಕ್ಷರೂ ಆದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರ ಸ್ವಾಮಿ ಅವರು ಮಂಗಳವಾರ ಆರೋಪಿಸಿದರು,

ವಿಧಾನಸಭೆಯಲ್ಲಿ ಮಾತನಾಡಿರುವ ಅವರು, ಕಳೆದ 3-4 ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳ ಎಲ್ಲಾ ಮಂಡಳಿಗಳು ಮತ್ತು ನಿಗಮಗಳಲ್ಲಿ ಹಗರಣಗಳು ನಡೆದಿವೆ. ಇದರಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮ ಮತ್ತು ತಾಂಡಾ ಅಭಿವೃದ್ಧಿ ನಿಗಮ ಕೂಡ ಸೇರಿವೆ. ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಅವ್ಯವಹಾರ ನಡೆದಿದ್ದು, ಮಾಜಿ ಎಂಎಲ್‌ಸಿ ಸುನೀಲ್ ವಲ್ಯಾಪೂರೆ ಅವರ ಪುತ್ರ ವಿನಯ್ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿದೆ.

ಹಲವು ಸಮಿತಿಗಳು ಹಣಕಾಸು ಇಲಾಖೆಯ ವಹಿವಾಟಿನ ಮೇಲೆ ನಿಗಾ ಇಡಲು ವಿಫಲವಾಗಿದೆ. ಕಳೆದ 3-4 ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳಿಗೆ ಕಲ್ಯಾಣ ಯೋಜನೆಗಳ ಸೌಲಭ್ಯ ನೀಡಿಲ್ಲ ಎಂದು ಆರೋಪಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT