ಬಂಧನ 
ರಾಜ್ಯ

ನಕಲಿ ದಾಖಲೆ ಸೃಷ್ಟಿಸಿ ವಾಹನ ಮಾರಾಟ: ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ; 2.5 ಕೋಟಿ ರೂ ಮೌಲ್ಯದ 17 ಕಾರು ವಶಕ್ಕೆ

ಆರೋಪಿಗಳು ಅನ್ಯ ರಾಜ್ಯಗಳಲ್ಲಿ ಕದ್ದ ಕಾರುಗಳಿಗೆ ನಕಲಿ ನೋಂದಣಿ ಸಂಖ್ಯೆ, ದಾಖಲೆಗಳನ್ನ ಸೃಷ್ಟಿಸುತ್ತಿದ್ದ ಆರೋಪಿಗಳು ಅವುಗಳನ್ನ ಮಾರಾಟ ಮಾಡುತ್ತಿದ್ದರು.

ಬೆಂಗಳೂರು: ಹೊರ ರಾಜ್ಯಗಳಲ್ಲಿ ಕದ್ದ ಕಾರುಗಳಿಗ ಸಾರಿಗೆ ಇಲಾಖೆ ಹಾಗೂ ಬ್ಯಾಂಕ್ ಗಳ ನಕಲಿ ನಿರಾಕ್ಷೇಪಣಾ ಪ್ರಮಾಣ ಪತ್ರ (ಎನ್ಒಸಿ) ಸೃಷ್ಟಿಸಿ ಜನರಿಗೆ ಕದ್ದ ಕಾರುಗಳ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಬಂಧನಕ್ಕೊಳಪಡಿಸಿದೆ.

ಆರೋಪಿಗಳನ್ನು ಸೈಯದ್ ರಿಯಾಜ್ ಮತ್ತು ಆಸ್ಟಿನ್ ಕಾರ್ಡೋಸ್ ಎಂದು ಗುರುತಿಸಲಾಗಿದೆ. ಆರೋಪಿಗಳು ಅನ್ಯ ರಾಜ್ಯಗಳಲ್ಲಿ ಕದ್ದ ಕಾರುಗಳಿಗೆ ನಕಲಿ ನೋಂದಣಿ ಸಂಖ್ಯೆ, ದಾಖಲೆಗಳನ್ನ ಸೃಷ್ಟಿಸುತ್ತಿದ್ದ ಆರೋಪಿಗಳು ಅವುಗಳನ್ನ ಮಾರಾಟ ಮಾಡುತ್ತಿದ್ದರು.

ಅದೇ ರೀತಿ ಬ್ಯಾಂಕ್‌ನಲ್ಲಿ ಪಡೆದ ಲೋನ್ ಮರುಪಾವತಿಸಲಾಗದವರಿಂದ ಕಾರುಗಳನ್ನು ಅಡಮಾನವಿರಿಸಿಕೊಳ್ಳುತ್ತಿದ್ದ ಆರೋಪಿಗಳು, ಬಳಿಕ ಲೋನ್ ಮರುಪಾವತಿಯಾಗಿರುವಂತೆ ಎನ್ಓಸಿ ಸಿದ್ಧಪಡಿಸಿ‌ ಅವುಗಳನ್ನು ಇತರರಿಗೆ ಮಾರಾಟ ಮಾಡುತ್ತಿದ್ದರು.

ಇನ್​ಸ್ಟಾಗ್ರಂ, ಫೇಸ್‌ಬುಕ್‌ ವಿಡಿಯೋಗಳ ಮೂಲಕ ಖರೀದಾರರನ್ನ ಸೆಳೆಯುತ್ತಿದ್ದ ಆರೋಪಿಗಳು, ಇದುವರೆಗೆ 40ಕ್ಕೂ ಅಧಿಕ ಕಾರುಗಳನ್ನು ಇದೇ ಮಾದರಿಯಲ್ಲಿ ಮಾರಾಟ ಮಾಡಿದ್ದರು ಎಂದು ಪೊಲೀಸರು ವಿವರಿಸಿದರು.

ಬಂಧಿತ ಆರೋಪಿಗಳಿಂದ ಸದ್ಯ ಇನ್ನೋವಾ ಫಾರ್ಚೂನರ್, ಮಹೀಂದ್ರಾ ಜೀಪ್, ಹ್ಯೂಂಡೈ ಕ್ರೆಟಾ ಸೇರಿದಂತೆ 2.5 ಕೋಟಿ ಮೌಲ್ಯದ 17 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ; ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ; BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT