ನಾಗೇಂದ್ರ PTI
ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 90 ಕೋಟಿ ರೂ ಅಕ್ರಮ ವರ್ಗಾವಣೆ; ಈ ಹಣದಿಂದಲೇ ಮದ್ಯ, ಲ್ಯಾಂಬೋರ್ಗಿನಿ ಖರೀದಿ: ಇಡಿ

ಈ ಹಣವನ್ನು ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಗೆ ಮದ್ಯ ಖರೀದಿಗಾಗಿ ಹಾಗೂ ದುಬಾರಿ ಬೆಲೆಯ ವಾಹನಗಳ ಖರೀದಿಗೆ ಬಳಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಬುಧವಾರ ಆರೋಪಿಸಿದೆ.

ನವದೆಹಲಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಸುಮಾರು 90 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆ ಮಾಡಲಾಗಿದ್ದು, ಈ ಹಣವನ್ನು ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಗೆ ಮದ್ಯ ಖರೀದಿಗಾಗಿ ಹಾಗೂ ದುಬಾರಿ ಬೆಲೆಯ ವಾಹನಗಳ ಖರೀದಿಗೆ ಬಳಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಬುಧವಾರ ಆರೋಪಿಸಿದೆ.

ಈ ಪ್ರಕರಣದಲ್ಲಿ ಹಾಲಿ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಬಂಧಿಸಿರುವ ಇಡಿ, ಈ ಸಂಬಧ ಇತ್ತೀಚೆಗೆ ಪ್ರಕಟಣೆ ನೀಡಿದ್ದು, ಶಾಸಕರೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳು "ಹಣ ವರ್ಗಾವಣೆ ಮತ್ತು ನಗದು ನಿರ್ವಹಣೆಯಲ್ಲಿ ಭಾಗಿಯಾಗಿದ್ದಾರೆ" ಎಂದು ಆರೋಪಿಸಿದ್ದಾರೆ.

ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ(ವಾಲ್ಮೀಕಿ ನಿಗಮದ ನಿಧಿಯಿಂದ) 18 ನಕಲಿ ಖಾತೆಗಳಿಗೆ ಸುಮಾರು 90 ಕೋಟಿ ರೂ.ಗಳನ್ನು ವರ್ಗಾಯಿಸಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿರುವುದಾಗಿ ಇಡಿ ಹೇಳಿದೆ.

"ಲೋಕಸಭೆ ಚುನಾವಣೆಗೂ ಮುನ್ನ ಗಮನಾರ್ಹ ಪ್ರಮಾಣದಲ್ಲಿ ಮದ್ಯವನ್ನು ಸಂಗ್ರಹಿಸಲು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಗಣನೀಯ ಪ್ರಮಾಣದಲ್ಲಿ ಬಳಸಲಾಗಿದೆ.

"ಹೆಚ್ಚುವರಿಯಾಗಿ, ಹಗರಣದಿಂದ ಬಂದ ಆದಾಯವನ್ನು ಬಳಸಿಕೊಂಡು ಲಂಬೋರ್ಗಿನಿ ಸೇರಿದಂತೆ ದುಬಾರಿ ಬೆಲೆಯ ವಾಹನಗಳನ್ನು ಖರೀದಿಸಲಾಗಿದೆ" ಎಂದು ಇಡಿ ತಿಳಿಸಿದೆ.

ಈ ಪ್ರಕರಣದ ಆರೋಪಿಗಳಲ್ಲೊಬ್ಬನಾದ ಸತ್ಯನಾರಾಯಣ ವರ್ಮಾ ಎಂಬಾತ, ಹಗರಣದಲ್ಲಿ ಬಂದಿದ್ದ ದುಡ್ಡಿನಿಂದ ಎರಡು ಐಷಾರಾಮಿ ಕಾರುಗಳನ್ನು ಖರೀದಿಸಿದ್ದಾಗಿ ತಿಳಿದುಬಂದಿದೆ. ಹೈದರಾಬಾದ್ ನಲ್ಲಿರುವ ಸೆಕೆಂಡ್ ಹ್ಯಾಂಡ್ ಕಾರುಗಳ ಶೋರೂಂನಲ್ಲಿ ಎರಡು ಲ್ಯಾಂಬೋರ್ಗಿನಿ ಕಾರುಗಳನ್ನು ಖರೀದಿಸಿರುವುದು ಬೆಳಕಿಗೆ ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT