ನಾಗೇಂದ್ರ PTI
ರಾಜ್ಯ

ವಾಲ್ಮೀಕಿ ಹಗರಣ: ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿ ಮತ್ತೆ ಐದು ದಿನ ವಿಸ್ತರಣೆ

ಕಾಂಗ್ರೆಸ್ ಶಾಸಕ ನಾಗೇಂದ್ರ ಅವರ ಇಡಿ ಕಸ್ಟಡಿ ಇಂದು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರುಪಡಿಸಲಾಯಿತು.

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ ಬಿ ನಾಗೇಂದ್ರ ಅವರ ಇಡಿ ಕಸ್ಟಡಿಯನ್ನು ವಿಶೇಷ ನ್ಯಾಯಾಲಯ ಗುರುವಾರ ಐದು ದಿನಗಳ ಕಾಲ ವಿಸ್ತರಿಸಿದೆ.

ಬಳ್ಳಾರಿ ಗ್ರಾಮಾಂತರ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರ ಇಡಿ ಕಸ್ಟಡಿ ಇಂದು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರುಪಡಿಸಲಾಯಿತು.

ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಮತ್ತೆ ತಮ್ಮ ಕಸ್ಟಿಡಿಗೆ ನೀಡುವಂತೆ ಇಡಿ ಪರ ವಕೀಲ ಪ್ರಸನ್ನ ಕುಮಾರ್ ಅವರು ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಕೋರ್ಟ್ ನಾಗೇಂದ್ರ ಅವರನ್ನು ಜುಲೈ 22ರವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶಿಸಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಒಟ್ಟು 89.65 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಜಾರಿ ನಿರ್ದೇಶನಾಲಯದಿಂದ ವಿಸ್ತೃತ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

ವಾಲ್ಮೀಕಿ ಹಗರಣ ಸಂಬಂಧ ನಾಲ್ಕು ರಾಜ್ಯಗಳ 23 ಕಡೆ ದಾಳಿ ನಡೆಸಿದ್ದೇವೆ. 18 ನಕಲಿ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದ್ದು, ನಂತರ ಹಲವು ನಕಲಿ ಅಕೌಂಟ್‌ಗಳಿಗೆ ಹೋಗಿ ಕ್ಯಾಶ್‌ ಆಗಿ ಮಾರ್ಪಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ನಾಗೇಂದ್ರ, ಬಸನಗೌಡ ದದ್ದಲ್‌ (ವಾಲ್ಮೀಕಿ ನಿಗಮದ ಅಧ್ಯಕ್ಷ) ಮನೆಯಲ್ಲಿ ದಾಖಲೆಗಳು ಪತ್ತೆಯಾಗಿವೆ ಎಂದು ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ