ಸಂಗ್ರಹ ಚಿತ್ರ 
ರಾಜ್ಯ

ಮಳೆ ರಜೆ ಬಗ್ಗೆ ನಕಲಿ ಆದೇಶ ವೈರಲ್: FIRಗೆ ಡಿಸಿ ಆದೇಶ

ಜುಲೈ 18 ರಂದು ರಜೆ ಘೋಷಿಸಲಾಗಿದೆ ಎಂಬ ನಕಲಿ ಪತ್ರವೊಂದು ಬುಧವಾರ ಸಂಜೆ ವೈರಲ್ ಆದ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಈ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು: ಮಳೆಯ ಕಾರಣಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲಾ ತಾಣಗಳಲ್ಲಿ ನಕಲಿ ಆದೇಶ ಪ್ರತಿ ರವಾನಿಸುವವರ ವಿರುದ್ಧ ಎಫ್‌ಐಆರ್ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗು ವುದು ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಚ್ಚರಿಕೆ ನೀಡಿದ್ದಾರೆ.

ಜುಲೈ 18 ರಂದು ರಜೆ ಘೋಷಿಸಲಾಗಿದೆ ಎಂಬ ನಕಲಿ ಪತ್ರವೊಂದು ಬುಧವಾರ ಸಂಜೆ ವೈರಲ್ ಆದ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಈ ಎಚ್ಚರಿಕೆ ನೀಡಿದ್ದಾರೆ.

ರಜೆಯ ವಿಚಾರವಾಗಿ ಜಿಲ್ಲಾಧಿಕಾರಿಗಳ ಅಧಿಕೃತ ಮೊಬೈಲ್ ನಂಬರ್ ಗೆ ನಿರಂತರ ಕರೆಗಳು ಬರುತ್ತಿದೆ. ಇದರಿಂದ ಮಳೆಯಿಂದ ಸಂಭವಿಸುವ ವಿಪತ್ತು ನಿರ್ವಹಣೆಗೂ ಅಡ್ಡಿಯಾಗುತ್ತಿದೆ. ಶಾಲಾ ಮಕ್ಕಳ ಹೊರತಾಗಿ ಬೇರೆಯವರು ಇಂತಹ ಕರೆ ಮಾಡುತ್ತಿದ್ದು, ಇದರಿಂದ ಅಧಿಕೃತ ಮೊಬೈಲ್ ಉಪಯೋಗ ಇಲ್ಲದಂತಾಗಿದೆ ಎಂದಿರುವ ಜಿಲ್ಲಾಧಿಕಾರಿ, ಈ ಬಗ್ಗೆ ಕಠಿಣ ನಿರ್ಧಾರ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ರೆಡ್ ಅಲರ್ಟ್ ಇದ್ದ ಕಾರಣದಿಂದ ನಿರಂತರ ಶಾಲೆಗೆ ರಜೆ ಘೋಷಣೆ ಮಾಡಲಾಗಿತ್ತು. ಬುಧವಾರ(ಜು.17)ಮೊಹರಂ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಇದ್ದು, ಗುರುವಾರ(ಜು.18) ಶಾಲೆ ಪುನರಾರಂಭಗೊಳ್ಳಲಿದೆ. ಆದರೆ ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಗುರುವಾರ ಕೂಡಾ ರಜೆ ಘೋಷಣೆ ಮಾಡಲಾಗಿದೆ ಎಂಬ ಆದೇಶ ಪತ್ರ ಹರಿದಾಡಿದೆ. ಕಿಡಿಗೇಡಿಗಳು ಈ ನಕಲಿ ಆದೇಶ ಪತ್ರ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT