ಡಿಸಿಎಂ ಡಿಕೆ.ಶಿವಕುಮಾರ್ 
ರಾಜ್ಯ

ಖಾಸಗಿ ವಲಯದ ತಾಂತ್ರಿಕ ಹುದ್ದೆ ನೇಮಕಾತಿಯಲ್ಲಿ ಹಸ್ತಕ್ಷೇಪವಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

ನಾವು ಟೆಕ್ನಿಕಲ್ ವಿಚಾರಗಳಿಗೆ ಕೈ ಹಾಕಲ್ಲ. ಅಲ್ಲಿ ಯಾವ ರೀತಿ ಜನ ಬೇಕು, ಅದನ್ನು ಅವರು ತೀರ್ಮಾನ ಮಾಡುತ್ತಾರೆ. ನಮ್ಮ ಸರ್ಕಾರ ಕನ್ನಡಿಗರ ಸ್ವಾಭಿಮಾನ ಎತ್ತಿ ಹಿಡಿಯುವ ಕೆಲಸ ಮಾಡಿದೆ.

ಬೆಂಗಳೂರು: ಖಾಸಗಿ ವಲಯದ ತಾಂತ್ರಿಕ ಉದ್ಯೋಗಗಳ ನೇಮಕಾತಿ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಾತನಾಡಿ, ನಾವು ಟೆಕ್ನಿಕಲ್ ವಿಚಾರಗಳಿಗೆ ಕೈ ಹಾಕಲ್ಲ. ಅಲ್ಲಿ ಯಾವ ರೀತಿ ಜನ ಬೇಕು, ಅದನ್ನು ಅವರು ತೀರ್ಮಾನ ಮಾಡುತ್ತಾರೆ. ನಮ್ಮ ಸರ್ಕಾರ ಕನ್ನಡಿಗರ ಸ್ವಾಭಿಮಾನ ಎತ್ತಿ ಹಿಡಿಯುವ ಕೆಲಸ ಮಾಡಿದೆ ಎಂದು ಹೇಳಿದರು.

ಕನ್ನಡ ಬೋರ್ಡ್, ಭಾಷೆ, ಧ್ವಜ ಬಳಕೆ, ನಮ್ಮ ಸಂಸ್ಕೃತಿ, ಕಡತಗಳಲ್ಲಿ ಕನ್ನಡ ಬಳಕೆ ಮಾಡಲಾಗುತ್ತಿದೆ. ಮುಂದೆ ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಇರಬಹುದು. ಕಡ್ಡಾಯವಾಗಿ ಕನ್ನಡಿಗರಿಗೆ ಇಷ್ಟು ಪರ್ಸೆಂಟ್ ಇರಬೇಕು. ಇದರ ಬಗ್ಗೆ ತೀರ್ಮಾನ ನಾವು ಮಾಡಿದ್ದೇವೆ ಹಾಗೂ ವಿಧೇಯಕ ಮಂಡಿಸುತ್ತಿದ್ದೇವೆಂದು ತಿಳಿಸಿದರು.

ಸರ್ಕಾರ ನಿರ್ಧಾರಕ್ಕೆ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ವಿರೋಧ ವ್ಯಕ್ತಪಡಿಸಿರುವ ಕುರಿತು ಮಾತನಾಡಿ, ಟಕ್ನಿಕಲ್ ಇದ್ದ ಕಡೆ ಏನು ಮಾಡಲು ಆಗಲ್ಲ. ನಾವು ಕೂಡ ಅರ್ಥ ಮಾಡಿಕೊಳ್ಳುತ್ತೇವೆ ಎಂದರು.

ಅವರು ಕೂಡ ರಾಜ್ಯದಿಂದಲೇ ಬೆಳದಿರುವವರು. ಟೆಕ್ನಿಕಲ್ ಬೇಕಾಗುವ ಕಡೆ ರಿಯಾಯಿತಿ ಕೋಡುತ್ತೇವೆ. ಸರ್ಕಾರದ ಗಮನಕ್ಕೆ ಅವರು ತರಬೇಕು. ಸದನ ಇರುವುದರಿಂದ ಸಂಪೂರ್ಣ ಮಾಹಿತಿ ಹೇಳಲು ಆಗಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅಪಾರ ಅವಕಾಶಗಳಿಗೆ ದಾರಿ ಮಾಡಿಕೊಡುತ್ತದೆ': ಸುಂಕ ಕಡಿತದ ನಂತರ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ

'Mogambo Khush Hai': ಭಾರತ-ಯುಎಸ್ ವ್ಯಾಪಾರ ಒಪ್ಪಂದ ಕುರಿತು ಕಾಂಗ್ರೆಸ್ ವಾಗ್ದಾಳಿ!

T20 ವಿಶ್ವಕಪ್ ನಲ್ಲಿ ಪಾಕಿಸ್ತಾನ ಒಂದು ಪಂದ್ಯ ಆಡದಿರಬಹುದೇ? ICC ನಿಯಮ ಏನು, ಆಗುವ ನಷ್ಟ ಎಷ್ಟು ಗೊತ್ತಾ!

ಕಾಂಗ್ರೆಸ್ ಸರ್ಕಾರದ ಆಳ್ವಿಕೆಯಲ್ಲಿ ತಗ್ಗಿದ ಅಪರಾಧ ಪ್ರಮಾಣ: ಗಡಿಗಳ ಮೂಲಕ ಅಕ್ರಮ ಬಾಂಗ್ಲಾದೇಶಿಗಳ ಪ್ರವೇಶ; ಗಡಿ ಕಾಪಾಡುವ ಜವಾಬ್ದಾರಿ ಯಾರದ್ದು?

ಸಿಜೆ ರಾಯ್ ಮಾನಸಿಕ ಒತ್ತಡ, ಖಿನ್ನತೆಯಿಂದ ಬಳಲುತ್ತಿದ್ದರು: SIT ತನಿಖೆ ವೇಳೆ ಮಾಹಿತಿ ಬಹಿರಂಗ!

SCROLL FOR NEXT