ಮೃತಪಟ್ಟ ಎತ್ತು. 
ರಾಜ್ಯ

KSRTC ಬಸ್ ನಲ್ಲಿ ರೀಲ್ಸ್; ಚಾಲಕ​ನ ಅಪಘಾತ ದಾಖಲು: ಅಮಾಯಕ ಜೀವಗಳು ಬಲಿ, ರೈತ ಕಂಗಾಲು

ಹುಬ್ಬಳ್ಳಿಯಿಂದ ಬಾಗಲಕೋಟೆ ಕಡೆ ಬಸ್ ಸಂಚರಿಸುತ್ತಿತ್ತು. ಚಾಲಕ ಬಸ್ ಚಾಲನೆ ಮಾಡುತ್ತಿರುವಾಗ ಮತ್ತೊಬ್ಬರು ರೀಲ್ಸ್ ಮಾಡುತ್ತಿದ್ದರು.

ಹುಬ್ಬಳ್ಳಿ: ಸರ್ಕಾರಿ ಬಸ್ ಚಾಲಕನ ಅಪಘಾತಕ್ಕೆ ಎರಡು ಎತ್ತುಗಳು ಬಲಿಯಾಗಿದ್ದು, ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್ ಗ್ರಾಮದ ಸಮೀಪ ಮಂಗಳವಾರ ನಡೆದಿದೆ.

ಹುಬ್ಬಳ್ಳಿಯಿಂದ ಬಾಗಲಕೋಟೆ ಕಡೆ ಬಸ್ ಸಂಚರಿಸುತ್ತಿತ್ತು. ಚಾಲಕ ಬಸ್ ಚಾಲನೆ ಮಾಡುತ್ತಿರುವಾಗ ಮತ್ತೊಬ್ಬರು ರೀಲ್ಸ್ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಮುಂದಿದ್ದ ಎತ್ತಿನಬಂಡಿಯನ್ನು ಗಮನಿಸದೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಎರಪಡು ಎತ್ತುಗಳು ಮೃತಪಟ್ಟಿವೆ. ಘಟನೆಯಲ್ಲಿ ರೈತನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

ಗಾಯಗೊಂಡ ರೈತನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ, ಚಾಲಕ ರಮೇಶ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಯಗೊಂಡ ರೈತನನ್ನು ಮಂಜುನಾಥ್ ಎಂದು ಗುರ್ತಿಸಲಾಗಿದೆ. ಮಂಗಳವಾರ ಸಂಜೆ ಕೆರೆಸೂರು ಗ್ರಾಮದ ತಮ್ಮ ಕೃಷಿ ಜಮೀನಿನಿಂದ ಎತ್ತಿನಬಂಡಿಯಲ್ಲಿ ಮಂಜುನಾಥ್ ಅವರು ಮನೆಗೆ ವಾಪಸಾಗುತ್ತಿದ್ದಾಗ ಅವಘಡ ಸಂಭವಿಸಿದೆ. ಕೆಲ ಪ್ರತ್ಯಕ್ಷದರ್ಶಿಗಳು ಚಾಲಕನ ವಿರುದ್ಧ ಕಿಡಿಕಾರಿದ್ದಾರೆ.

ಗಾಮಸ್ಥ ಹಾಗೂ ಮಂಜುನಾಥ್ ಅವರ ಸ್ನೇಹಿತ ರಾಯನಗೌಡ ಎಂಬುವವರು ಮಾತನಾಡಿ, ಘಟನೆ ಬಳಿಕ ಎತ್ತುಗಳು ಮೃತಪಟ್ಟಿವೆ. ಮಂಜುನಾಥ್ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ನನ್ನ ಸ್ನೇಹಿತ ಬಡ ರೈತನಾಗಿದ್ದು, ದೈನಂದಿನ ದುಡಿಮೆಯೊಂದಿಗೆ ಜೀವನ ನಡೆಸುತ್ತಿದ್ದ. ಎರಡು ಎಕರೆ ಜಮೀನು ಆದಾಯ ನೀಡುತ್ತಿಲ್ಲ. ಸಾಲ ಪಡೆದು ಎರಡು ಎತ್ತು ಖರೀದಿ ಮಾಡಿ, ಹೊಲದಲ್ಲಿ ಉಳಿಮೆ ಮಾಡುತ್ತಿದ್ದ. ರೈತರಿಂದ ಸುಮಾರು ರೂ.1.5 ಲಕ್ಷ ಸಾಲ ಪಡೆದಿದ್ದ. ಸರ್ಕಾರ ಈತನಿಗೆ ಅಲ್ಪಾವಧಿಯ ಪರಿಹಾರ ನೀಡದೆ ನೆರವಿಗೆ ಮುಂದಾಗಬೇಕು. ಇಬ್ಬರು ಮಕ್ಕಳಿದ್ದು, ಕುಟುಂಬಕ್ಕೆ ಈತನೇ ಆಧಾರ ಎಂದು ಹೇಳಿದ್ದಾರೆ.

ಅಪಘಾತದ ಸಮಯದಲ್ಲಿ ಚಾಲಕನ ವರ್ತನೆಯ ವಿಡಿಯೋಗಳಿವೆ. ವಿಡಿಯೋ ಆಧಾರದ ಮೇಲೆ ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಂಜುನಾಥ್ ಅವರ ಸಂಬಂಧಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT