ರಾಜ್ಯ

ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ: ಹಾಸಿಗೆಗಳನ್ನು ಮೀಸಲಿಡಲು ಸರ್ಕಾರಿ ಆಸ್ಪತ್ರೆಗಳಿಗೆ ಸೂಚನೆ

ಜುಲೈ 17 ರ ಹೊತ್ತಿಗೆ, ರಾಜ್ಯದಲ್ಲಿ 10,973 ಡೆಂಗ್ಯೂ-ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 4,040 ಬಿಬಿಎಂಪಿ ವ್ಯಾಪ್ತಿಯಲ್ಲಿ, 63 ಬೆಂಗಳೂರು ನಗರ ಮತ್ತು 51 ಬೆಂಗಳೂರು ಗ್ರಾಮಾಂತರದಲ್ಲಿ ವರದಿಯಾಗಿದೆ.

ಬೆಂಗಳೂರು: ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಭವಿಸಲಬಹುದಾದ ಸಾವುನೋವುಗಳನ್ನು ತಡೆಗಟ್ಟಲು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಎಚ್‌ಎಫ್‌ಡಬ್ಲ್ಯು) ತೀವ್ರ ಡೆಂಗ್ಯೂ ಪ್ರಕರಣಗಳ ಪರಿಣಾಮಕಾರಿ ನಿರ್ವಹಣೆಗೆ ಮುಂದಾಗಿದ್ದು, ನಗರದ ಹಲವಾರು ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲು ಆದೇಶಿಸಿದೆ.

ಮುಂದಿನ ಸೂಚನೆ ಬರುವವರೆಗೆ ಡೆಂಗ್ಯೂ ರೋಗಿಗಳಿಗೆ ನಿರ್ದಿಷ್ಟ ಸಂಖ್ಯೆಯ ಹಾಸಿಗೆಗಳನ್ನು ಕಾಯ್ದಿರಿಸುವಂತೆ ಸೂಚಿಸಲಾಗಿದೆ. ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆ (25 ಹಾಸಿಗೆಗಳು), ಸಿವಿ ರಾಮನ್ ಆಸ್ಪತ್ರೆ (25 ಹಾಸಿಗೆಗಳು), ಸರ್ಕಾರಿ ಆಸ್ಪತ್ರೆ ಜಯನಗರ (25 ಹಾಸಿಗೆಗಳು), ಯಲಹಂಕ ತಾಲೂಕು ಆಸ್ಪತ್ರೆ (10 ಹಾಸಿಗೆಗಳು), ಮತ್ತು ಕೆಆರ್ ಪುರಂ ತಾಲೂಕು ಆಸ್ಪತ್ರೆಯಲ್ಲಿ (10 ಹಾಸಿಗೆಗಳು) ಮೀಸಲಿಡುವಂತೆ ತಿಳಿಸಲಾಗಿದೆ. ಜಿಲ್ಲಾ ಕೇಂದ್ರದ ಎಚ್‌ಎಫ್‌ಡಬ್ಲ್ಯೂ ಆಸ್ಪತ್ರೆಗಳು ತಲಾ 10 ಹಾಸಿಗೆಗಳನ್ನು ಮತ್ತು ತಾಲೂಕು ಕೇಂದ್ರ ಕಚೇರಿಯ ಎಚ್‌ಎಫ್‌ಡಬ್ಲ್ಯೂ ಆಸ್ಪತ್ರೆಗಳಲ್ಲಿ ತಲಾ ಐದು ಹಾಸಿಗೆಗಳನ್ನು ಡೆಂಗ್ಯೂ ರೋಗಿಗಳಿಗೆ ಮೀಸಲಿಡಲು ಹೆಚ್ಚುವರಿಯಾಗಿ ನಿರ್ದೇಶನ ನೀಡಲಾಗಿದೆ. ಈ ಸೂಚನೆ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ.

ಏತನ್ಮಧ್ಯೆ, ಜುಲೈ 17 ರ ಹೊತ್ತಿಗೆ, ರಾಜ್ಯದಲ್ಲಿ 10,973 ಡೆಂಗ್ಯೂ-ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 4,040 ಬಿಬಿಎಂಪಿ ವ್ಯಾಪ್ತಿಯಲ್ಲಿ, 63 ಬೆಂಗಳೂರು ನಗರ ಮತ್ತು 51 ಬೆಂಗಳೂರು ಗ್ರಾಮಾಂತರದಲ್ಲಿ ವರದಿಯಾಗಿದೆ. ಚಿಕ್ಕಮಗಳೂರು ರಾಜ್ಯದಲ್ಲಿ ಎರಡನೇ ಅತಿ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದು, ಒಟ್ಟು 621 ಪ್ರಕರಣಗಳು ದಾಖಲಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT