ಬೆಳ್ಳಿಯಪ್ಪ ಮತ್ತು ಬೋಜಮ್ಮ ದಂಪತಿಗೆ ಸನ್ಮಾನ TNIE
ರಾಜ್ಯ

ಆರು ಮಕ್ಕಳನ್ನು ಸಾಕಿ ಬೆಳೆಸಿದ ದಂಪತಿಗೆ ಕೊಡವ ಸಮಾಜದಿಂದ ಸನ್ಮಾನ!

ಮಡಿಕೇರಿಯಲ್ಲಿ ಆರು ಮಕ್ಕಳನ್ನು ಸಾಕಿ ಬೆಳೆಸಿದ ದಂಪತಿಗೆ ಸನ್ಮಾನಿಸಲಾಯಿತು. ಮಡಿಕೇರಿ ಕೊಡವ ಸಮಾಜದ ವತಿಯಿಂದ ಸನ್ಮಾನ ಸಮಾರಂಭ ನಡೆಯಿತು.

ಮಡಿಕೇರಿ: ಮಡಿಕೇರಿಯಲ್ಲಿ ಆರು ಮಕ್ಕಳನ್ನು ಸಾಕಿ ಬೆಳೆಸಿದ ದಂಪತಿಗೆ ಸನ್ಮಾನಿಸಲಾಯಿತು. ಮಡಿಕೇರಿ ಕೊಡವ ಸಮಾಜದ ವತಿಯಿಂದ ಸನ್ಮಾನ ಸಮಾರಂಭ ನಡೆಯಿತು.

ಕೊಡವ ಸಮುದಾಯವು ಆಧುನೀಕರಣದ ತೀವ್ರತೆಗೆ ಸಿಲುಕಿ ನಲುಗುತ್ತಿರುವ ಒಂದು ಸಣ್ಣ ಬುಡಕಟ್ಟು ಸಮುದಾಯವಾಗಿದೆ. ಕಳೆದ ಹಲವಾರು ವರ್ಷಗಳಿಂದ ಸಮುದಾಯದ ಜನಸಂಖ್ಯೆಯು ವಿವಿಧ ಕಾರಣಗಳಿಂದ ಕಡಿಮೆಯಾಗಿದೆ. ಆಧುನೀಕರಣ ಮತ್ತು ವಿಭಕ್ತ ಕುಟುಂಬವು ಅದರ ಜನಸಂಖ್ಯೆಯ ಕುಸಿತಕ್ಕೆ ಕಾರಣ ಎಂದು ಹೇಳಲಾಗುತ್ತದೆ.

ಇಂತಹ ಸನ್ನಿವೇಶದಲ್ಲಿ ಬುಡಕಟ್ಟು ಸಮುದಾಯದ ಜನಸಂಖ್ಯೆಯ ಬೆಳವಣಿಗೆಯನ್ನು ಉತ್ತೇಜಿಸುವ ಉದ್ದೇಶದಿಂದ ಮಡಿಕೇರಿ ಕೊಡವ ಸಮಾಜವು ಮರಗೋಡು ಗ್ರಾಮದ ತಾಟಪಂಡ ಬೆಳ್ಳಿಯಪ್ಪ ಮತ್ತು ಬೋಜಮ್ಮ ಅಕಾ ಶೀಲಾ ದಂಪತಿಯನ್ನು ಇದೇ ಮೊದಲ ಬಾರಿಗೆ ಸನ್ಮಾನಿಸಲಾಯಿತು. ಐದು ಗಂಡು ಮತ್ತು ಒಬ್ಬ ಮಗಳು ಸೇರಿ ಆರು ಮಕ್ಕಳನ್ನು ಬೆಳೆಸಿದ್ದಕ್ಕಾಗಿ ದಂಪತಿಗಳನ್ನು ಗೌರವಿಸಲಾಯಿತು. ಅಲ್ಲದೆ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕಾರಿಯಾಗಲು ದಂಪತಿಗೆ 25,000 ರೂಪಾಯಿ ನಗದು ಬಹುಮಾನ ವಿತರಿಸಲಾಯಿತು.

ಇಂತಹ ಕಾರ್ಯಕ್ರಮದ ಮೂಲಕ ಸಮುದಾಯದ ಜನಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಒತ್ತು ನೀಡಲಾಗುತ್ತಿದೆ ಎಂದು ಸಮಾಜದ ಅಧ್ಯಕ್ಷ ಎಂ.ಪಿ.ಮುತ್ತಪ್ಪ ಹೇಳಿದರು. ಇದೇ ವೇಳೆ ಸಮಾಜದ ಮತ್ತೊಬ್ಬ ಸದಸ್ಯ ಎಂ ಸುನೀಲ್ ಮಂದಪ್ಪ ಶೀಲಾ ದಂಪತಿಗೆ 5000 ರೂಪಾಯಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT