ದರ್ಶನ್-ಪವಿತ್ರಾ ಗೌಡ PTI
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಹಾಗೂ ಇತರ 16 ಆರೋಪಿಗಳ ನ್ಯಾಯಾಂಗ ಬಂಧನ ಆಗಸ್ಟ್ 1ರವರೆಗೆ ವಿಸ್ತರಣೆ!

ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಇಂದು ಅಂತ್ಯಗೊಂಡಿದ್ದರಿಂದ ಅವರನ್ನು ಬೆಂಗಳೂರು ಮತ್ತು ತುಮಕೂರು ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ, ಅವರ ಸ್ನೇಹಿತೆ ಪವಿತ್ರಾ ಗೌಡ ಹಾಗೂ ಇತರ 15 ಆರೋಪಿಗಳ ನ್ಯಾಯಾಂಗ ಬಂಧನವನ್ನು ವಿಶೇಷ ನ್ಯಾಯಾಲಯ ಆಗಸ್ಟ್ 1ವರೆಗೆ ವಿಸ್ತರಿಸಿದೆ.

ದರ್ಶನ್ ಮತ್ತು ಪವಿತ್ರಾ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಇಂದು ಅಂತ್ಯಗೊಂಡಿದ್ದರಿಂದ ಅವರನ್ನು ಬೆಂಗಳೂರು ಮತ್ತು ತುಮಕೂರು ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆರೋಪಿಗಳನ್ನು ಬಿಡುಗಡೆ ಮಾಡುವುದರಿಂದ ಪ್ರಸ್ತುತ ನಡೆಯುತ್ತಿರುವ ತನಿಖೆಗಳಿಗೆ ಅಡ್ಡಿಯಾಗಬಹುದು ಎಂದು ವಾದಿಸಿದರು. ಅಲ್ಲದೆ ಕಾನೂನಿನ ನಿರ್ಲಕ್ಷ್ಯವನ್ನು ಪ್ರದರ್ಶಿಸುವ ಮೂಲಕ ತಾಂತ್ರಿಕ, ಭೌತಿಕ ಮತ್ತು ವೈಜ್ಞಾನಿಕ ಪುರಾವೆಗಳನ್ನು ನಾಶಮಾಡಲು ಆರೋಪಿಗಳು ಆಪಾದಿತ ಪ್ರಯತ್ನಗಳನ್ನು ಪ್ರಾಸಿಕ್ಯೂಷನ್ ಎತ್ತಿ ತೋರಿಸಿದೆ.

ಅಲ್ಲದೆ ಆರೋಪಿ ದರ್ಶನ್ ಮನೆಯಿಂದ 83.65 ಲಕ್ಷ ರೂಪಾಯಿ ನಗದು ವಶಪಡಿಸಿಕೊಂಡಿರುವುದನ್ನು ಪ್ರಾಸಿಕ್ಯೂಟರ್ ಬಹಿರಂಗಪಡಿಸಿದರು. ಕೊಲೆಗೂ ಮುನ್ನ ಹಾಗೂ ನಂತರ ವಿವಿಧ ವ್ಯಕ್ತಿಗಳನ್ನು ಸಂಪರ್ಕಿಸಲು ವಿವಿಧ ಹೆಸರಿನಲ್ಲಿ ನೋಂದಾಯಿಸಲಾದ ಹಲವು ಸಿಮ್ ಕಾರ್ಡ್‌ಗಳನ್ನು ಅವರು ಬಳಸಿರುವುದು ಪತ್ತೆಯಾಗಿದೆ. ಜಾಮೀನು ನೀಡುವುದರಿಂದ ನಿರ್ಣಾಯಕ ಸಾಕ್ಷ್ಯ ನಾಶಕ್ಕೆ ಕಾರಣವಾಗಬಹುದು ಎಂದು ಪ್ರಾಸಿಕ್ಯೂಷನ್ ಒತ್ತಿ ಹೇಳಿದೆ.

ಏತನ್ಮಧ್ಯೆ, ಮನೆ ಆಹಾರ, ಹಾಸಿಗೆ ಮತ್ತು ಪುಸ್ತಕಗಳನ್ನು ತರಿಸಿಕೊಳ್ಳಲು ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ದರ್ಶನ್ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ಶುಕ್ರವಾರ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT