ಅಂಕೋಲದಲ್ಲಿ ಭೂಕುಸಿತ PTI
ರಾಜ್ಯ

ಅಂಕೋಲಾದಲ್ಲಿ ಗುಡ್ಡ ಕುಸಿತ ಪ್ರಕರಣ: ಘಟನಾ ಸ್ಥಳದಲ್ಲಿ ಮತ್ತೆರಡು ಮೃತದೇಹ ಪತ್ತೆ!

ಎರಡು ದಿನಗಳ ಹಿಂದೆ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೃಹತ್ ಗುಡ್ಡ ಕುಸಿದು ಬಿದ್ದು ಸುಮಾರು 7 ಮಂದಿ ಸಾವನ್ನಪ್ಪಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರೂರು ಗ್ರಾಮದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯ ವೇಳೆ ಇಂದು ಮತ್ತೆ ಎರಡು ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಎರಡು ದಿನಗಳ ಹಿಂದೆ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೃಹತ್ ಗುಡ್ಡ ಕುಸಿದು ಬಿದ್ದು ಸುಮಾರು 7 ಮಂದಿ ಸಾವನ್ನಪ್ಪಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರೂರು ಗ್ರಾಮದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯ ವೇಳೆ ಇಂದು ಮತ್ತೆ ಎರಡು ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ಘಟನೆ ನಡೆದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸ್ಥಳೀಯ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಮತ್ತು ಇತರ ಏಜೆನ್ಸಿಗಳ ಅಧಿಕಾರಿಗಳು ಮಳೆಯ ನಡುವೆ ತೀವ್ರವಾದ ರಕ್ಷಣಾ ಮತ್ತು ಶೋಧ ಕಾರ್ಯಾಚರಣೆಯ ನಂತರ ಮಂಗಳವಾರ ಸಂಜೆಯ ವೇಳೆಗೆ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಯಿತು.

ಕಳೆದ ಎರಡು ದಿನಗಳಿಂದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಎಲ್ಲಾ ಏಜೆನ್ಸಿಗಳ ಸಹಾಯದಿಂದ ನಾವು ಇದುವರೆಗೆ ಆರು ಮೃತದೇಹಗಳನ್ನು ಹೊರತೆಗೆದಿದ್ದೇವೆ ಎಂದು ಪೊಲೀಸ್ ಅಧೀಕ್ಷಕ (ಕಾರವಾರ) ನಾರಾಯಣ ಎಂ ತಿಳಿಸಿದ್ದಾರೆ.

ಮೃತ ನಾಲ್ವರಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಟೀ ಅಂಗಡಿ ನಡೆಸುತ್ತಿದ್ದ ಒಂದೇ ಕುಟುಂಬದವರಾಗಿದ್ದಾರೆ. ಮೃತರನ್ನು 47 ವರ್ಷದ ಲಕ್ಷ್ಮಣ್ ನಾಯ್ಕ್, ಅವರ ಪತ್ನಿ 36 ವರ್ಷದ ಶಾಂತಿ ನಾಯ್ಕ್ ಮತ್ತು ಅವರ ಮಕ್ಕಳಾದ ರೋಷನ್ (11), ಆವಂತಿಕಾ (6) ಎಂದು ಗುರುತಿಸಲಾಗಿದೆ. ಮೃತ ಇನ್ನಿಬ್ಬರನ್ನು ಚಾಲಕರು ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಈ ಪೈಕಿ ಇದುವರೆಗೆ ಆರು ಮಂದಿಯ ಮೃತದೇಹಗಳು ಪತ್ತೆಯಾಗಿವೆ. ಎಲ್ಲಾ ಮೃತದೇಹಗಳು ಪತ್ತೆಯಾಗುವವರೆಗೂ ಶೋಧ ಕಾರ್ಯಾಚರಣೆ ಮುಂದುವರಿಯಲಿದೆ.

ಏತನ್ಮಧ್ಯೆ, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು ರಸ್ತೆ ಮೇಲ್ಮೈಗೆ ತೀವ್ರ ಹಾನಿಯಾಗಿರುವ ಕಾರಣ ಚಿಕ್ಕಮಗಳೂರು ತಾಲೂಕಿನ ಸೀತಾಲಯನಗಿರಿ-ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಜುಲೈ 22ರವರೆಗೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT