ಹಾವೇರಿಯಲ್ಲಿ ಮನೆ ಮೇಲ್ಚಾವಣಿ ಕುಸಿತ 
ರಾಜ್ಯ

ಹಾವೇರಿ: ಭಾರೀ ಮಳೆಯಿಂದ ಮನೆ ಗೋಡೆ ಕುಸಿತ; ಅವಳಿ ಮಕ್ಕಳು ಸೇರಿ ಮೂವರ ದಾರುಣ ಸಾವು!

ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಬಂದಿದ್ದರೆ ಗಾಯಾಳುಗಳನ್ನು ರಕ್ಷಿಸಬಹುದಿತ್ತು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಹಾವೇರಿ: ನಿರಂತರ ಮಳೆ ಹಿನ್ನೆಲೆ ಮನೆಯ ಮೇಲ್ಚಾವಣಿ ಕುಸಿದು ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ.

ಕೆಲ ದಿನಗಳಿಂದ ಸುರಿದ ಭಾರೀ ಮಳೆಗೆ ಮನೆ ಸೋರುತ್ತಿದ್ದು, ಇಂದು ಬೆಳಗ್ಗೆ ಗೋಡೆ ಕುಸಿದಿದೆ. ಮೃತ ಚೆನ್ನಮ್ಮ ಹರಕುಣಿ (30),ಆಕೆಯ ಅವಳಿ ಹೆಣ್ಣು ಮಕ್ಕಳಾದ ಅಮೂಲ್ಯ ಮತ್ತು ಅನನ್ಯಾ (2) ಒಂದೇ ಕೋಣೆಯಲ್ಲಿ ಮಲಗಿದ್ದರು. ಅವರ ತಾಯಿ ಯಲ್ಲಮ್ಮ (70) ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡಿರುವ ಮುತ್ತಣ್ಣ ಹರಕುಣಿ (70) ಮತ್ತು ಸುನೀತಾ (35) ಅವರನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕುಟುಂಬದವರಿಗೆ ಹಸ್ತಾಂತರಿಸಲಾಗುವುದು. ಕೃಷಿ ಮಾಡಿ ಜೀವನ ಸಾಗಿಸುತ್ತಿರುವ ಕುಟುಂಬ ಮಾದಾಪುರ ಗ್ರಾಮದಲ್ಲಿ ಸಣ್ಣ ಹಿಡುವಳಿ ಭೂಮಿ ಹೊಂದಿದೆ.

ಘಟನೆ ಬಗ್ಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಆಘಾತ ವ್ಯಕ್ತಪಡಿಸಿದ್ದು, ಇಂದು ಹಾವೇರಿಯಲ್ಲಿ ಕುಟುಂಬ ಸದಸ್ಯರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ ಅವರು, ಗಾಯಗೊಂಡ ಕುಟುಂಬದ ಸದಸ್ಯರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವಂತೆ ಆಗ್ರಹಿಸಿದ್ದಾರೆ.

ಮೃತರು ಮಲಗಿದ್ದ ಕೋಣೆ

ಹಾವೇರಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ್ ಹಾಗೂ ಆಡಳಿತದ ಹಿರಿಯ ಅಧಿಕಾರಿಗಳು ಇಂದು ಮಾದಾಪುರ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಹರಕುಣಿ ಕುಟುಂಬದ ಸದಸ್ಯರಿಗೆ ಗ್ರಾಮದಲ್ಲೇ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ಆಡಳಿತಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಬಂದಿದ್ದರೆ ಗಾಯಾಳುಗಳನ್ನು ರಕ್ಷಿಸಬಹುದಿತ್ತು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. "ಆಂಬುಲೆನ್ಸ್ ಸಕಾಲಕ್ಕೆ ಸ್ಪಂದಿಸಲಿಲ್ಲ. ಈ ಬಗ್ಗೆ ಡಿಸಿಗೆ ದೂರು ನೀಡಲಾಗಿದೆ. ಹೊರತೆಗೆಯುವಾಗ ಶಿಶುಗಳು ಜೀವಂತವಾಗಿದ್ದವು. ಆದರೆ. ಸಕಾಲಕ್ಕೆ ಆಂಬ್ಯುಲೆನ್ಸ್ ಬರಲಿಲ್ಲ’ ಎಂದು ಗ್ರಾಮಸ್ಥರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT