ಗುಡ್ಡ ಕುಸಿತ PTI
ರಾಜ್ಯ

ಅಂಕೋಲಾ ಗುಡ್ಡ ಕುಸಿತ: ಇಂದು ಮತ್ತೊಂದು ಮೃತದೇಹ ಪತ್ತೆ; ಕೇರಳದ ಲಾರಿ ಚಾಲಕ ಸೇರಿ ಮೂವರ ಪತ್ತೆಗಾಗಿ ಶೋಧ ಮುಂದುವರಿಕೆ!

ಕೇರಳದ ಕೋಝಿಕ್ಕೋಡ್‌ನ ಲಾರಿ ಚಾಲಕ ಅರ್ಜುನ್ ಎಂದು ತಿಳಿದುಬಂದಿದ್ದು ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು ಈ ಮಧ್ಯೆ ರಸ್ತೆ ಪುನಃಸ್ಥಾಪನೆ ಕಾರ್ಯವು ನಡೆಯುತ್ತಿದೆ.

ಬೆಂಗಳೂರು/ತಿರುವನಂತಪುರಂ: ಉತ್ತರ ಕನ್ನಡ ಜಿಲ್ಲೆಯ ಶಿರೂರು ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಮೇಲೆ ಭಾರೀ ಭೂಕುಸಿತದಿಂದ ನಾಪತ್ತೆಯಾಗಿರುವ ಕೇರಳದ ಲಾರಿ ಚಾಲಕ ಸೇರಿದಂತೆ ಮೂವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಇಂದು ಮತ್ತೊಬ್ಬ ಮೃತದೇಹ ಪತ್ತೆಯಾಗಿದ್ದು, ಜುಲೈ 16ರಂದು ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಇದುವರೆಗೆ ಏಳು ಮೃತದೇಹಗಳನ್ನು ಗುರುತಿಸಲಾಗಿದೆ. ಕೇರಳದ ಚಾಲಕ ಸೇರಿದಂತೆ ಇನ್ನೂ ಮೂವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ನಮ್ಮ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಉತ್ತರ ಕನ್ನಡ ಜಿಲ್ಲೆಯ ಉಪ ಆಯುಕ್ತೆ ಲಕ್ಷ್ಮಿ ಪ್ರಿಯಾ ಕೆ ತಿಳಿಸಿದ್ದಾರೆ.

ಕೇರಳದ ಕೋಝಿಕ್ಕೋಡ್‌ನ ಲಾರಿ ಚಾಲಕ ಅರ್ಜುನ್ ಎಂದು ತಿಳಿದುಬಂದಿದ್ದು ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು ಈ ಮಧ್ಯೆ ರಸ್ತೆ ಪುನಃಸ್ಥಾಪನೆ ಕಾರ್ಯವು ನಡೆಯುತ್ತಿದೆ. ಇಂದು ಪತ್ತೆಯಾಗಿರುವ ಮೃತದೇಹ ತಮಿಳುನಾಡಿನ ಚಾಲಕನದ್ದಾಗಿರಬಹುದು ಎಂದು ಲಕ್ಷ್ಮಿ ಪ್ರಿಯಾ ಹೇಳಿದ್ದಾರೆ. ನಾವು ದೇಹದ ಕೆಳಗಿನ ಭಾಗವನ್ನು ಮಾತ್ರ ಪಡೆದುಕೊಂಡಿದ್ದೇವೆ. ಹಾಗಾಗಿ ಅದು ಯಾರ ದೇಹ ಎಂದು ಗುರುತಿಸಲು ಸಾಧ್ಯವಾಗುತ್ತಿಲ್ಲ. ಇದು ಪುರುಷ ದೇಹ. ಹಾಗಾಗಿ, ಅದು ತಮಿಳುನಾಡಿನ ಚಾಲಕನದ್ದಾಗಿರಬಹುದು ಎಂದು ಅವರು ಹೇಳಿದರು.

ಮೃತದೇಹದ ಡಿಎನ್‌ಎ ಪರೀಕ್ಷೆಯನ್ನು ನಡೆಸುತ್ತಿದ್ದು, ಟ್ಯಾಂಕರ್ ಚಾಲಕನ ಕುಟುಂಬಕ್ಕೆ ಸ್ಯಾಂಪಲ್ ನೀಡಲು ತಮಿಳುನಾಡಿನಿಂದ ಬರುವಂತೆ ಮನವಿ ಮಾಡಿದ್ದು, ಅದು ಹೊಂದಾಣಿಕೆಯಾದರೆ ಮೃತದೇಹವನ್ನು ಅವರಿಗೆ ಹಸ್ತಾಂತರಿಸುತ್ತೇವೆ ಎಂದು ಲಕ್ಷ್ಮಿ ಪ್ರಿಯಾ ಹೇಳಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ (ಕಾರವಾರ), ನಾರಾಯಣ ಎಂ ಅವರು, ಪೊಲೀಸರು ಅವಶೇಷಗಳನ್ನು ತೆಗೆದುಹಾಕಲು ಸಾಧ್ಯವಿರುವ ಎಲ್ಲಾ ಮಾರ್ಗಗಳನ್ನು ಬಳಸುತ್ತಿದ್ದರು. ಆದರೆ ನಿರಂತರ ಮಳೆ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಆದರೆ ಮೃತರ ದೇಹಗಳನ್ನು ಪತ್ತೆ ಮಾಡದೇ ಬಿಡುವುದಿಲ್ಲ ಎಂದು ಹೇಳಿದರು.

ಅರ್ಜುನ್ ಕುಟುಂಬದ ಪ್ರಕಾರ, ಲಾರಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ. ಅವರ ಫೋನ್ ಎರಡು ಬಾರಿ ರಿಂಗ್ ಆಗಿತ್ತು. ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್ ಅಳವಡಿಸಲಾಗಿರುವ ವಾಹನವನ್ನು ಬೆಟ್ಟದ ಭಾಗಗಳು ಕುಸಿದ ಪ್ರದೇಶಕ್ಕೆ ಟ್ರ್ಯಾಕ್ ಮಾಡಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2026 ರಲ್ಲಿ "ರಾಜಕೀಯ ಬಡ್ತಿ": ಗೃಹ ಸಚಿವ ಪರಮೇಶ್ವರ ಹೇಳಿಕೆ ಹಿಂದಿನ ಮರ್ಮ ಏನು?

'ಬಿಗ್ ಬಾಸ್ ತೆಲುಗು ಸೀಸನ್ 9' ಗೆದ್ದ ಸಿಆರ್‌ಪಿಎಫ್ ಕಾನ್‌ಸ್ಟೆಬಲ್ ಜರ್ನಿಯೇ ರೋಚಕ..!

ಮರ್ಯಾದಾ ಹತ್ಯೆ: 'ಮಾನ್ಯಾ' ಹೆಸರಿನಲ್ಲಿ ಹೊಸ ಕಾನೂನು ಜಾರಿಗೆ ಚಿಂತನೆ- ಸಚಿವ ಡಾ. ಹೆಚ್. ಸಿ. ಮಹದೇವಪ್ಪ

5 ಕೋಟಿ ರೂ. ಮೌಲ್ಯದ 7 ಬಿಎಂಡಬ್ಲ್ಯು ಕಾರು ಖರೀದಿ ಟೆಂಡರ್ ರದ್ದುಗೊಳಿಸಿದ ಲೋಕಪಾಲ್

' ತು ಕ್ಯಾ ಘಂಟಾ ಹೋಕೆ ಆಯಾ ಹೈ? ರಿಪೋರ್ಟರ್ ಗೆ ಅವಹೇಳನಕಾರಿ ಪದ ಬಳಸಿದ ಸಚಿವ ಕೈಲಾಶ್ ವಿಜಯ ವರ್ಗಿಯ! Video ವೈರಲ್

SCROLL FOR NEXT