ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕುಖ್ಯಾತ ಓಜಿ ಕುಪ್ಪಂ ಗ್ಯಾಂಗ್‌ನ ಇಬ್ಬರು ಮಹಿಳೆಯರ ಬಂಧನ

ಲಾವಣ್ಯ ಮತ್ತು ಮೀನಾ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಂದ ಆಭರಣಗಳನ್ನು ಕದಿಯುತ್ತಿದ್ದರು. ಕಳೆದ ಐದು ವರ್ಷಗಳಿಂದ ಈ ಕೆಲಸದಲ್ಲಿ ಸಕ್ರಿಯರಾಗಿದ್ದರು ಎನ್ನಲಾಗಿದೆ.

ಬೆಂಗಳೂರು: ಆಂಧ್ರಪ್ರದೇಶದ ಕುಖ್ಯಾತ ಓಜಿ ಕುಪ್ಪಂನ ಇಬ್ಬರು ಮಹಿಳೆಯರನ್ನು ನಗರದ ಉಪ್ಪಾರಪೇಟೆಯ ಲಾಡ್ಜ್‌ ವೊಂದರಲ್ಲಿ ಬಂಧಿಸಲಾಗಿದ್ದು, ಅವರಿಂದ ಸುಮಾರು 80 ಲಕ್ಷ ರೂಪಾಯಿ ಮೌಲ್ಯದ 899 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಲಾವಣ್ಯ ಮತ್ತು ಮೀನಾ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಂದ ಆಭರಣಗಳನ್ನು ಕದಿಯುತ್ತಿದ್ದರು. ಕಳೆದ ಐದು ವರ್ಷಗಳಿಂದ ಈ ಕೆಲಸದಲ್ಲಿ ಸಕ್ರಿಯರಾಗಿದ್ದರು ಎನ್ನಲಾಗಿದೆ.

ಆರೋಪಿಗಳು ದಾವಣಗೆರೆ, ತುಮಕೂರು, ಸಿರಾದಲ್ಲಿ ಕಳ್ಳತನ ಮಾಡಿದ್ದಾರೆ.ಹೀಗೆ ಕೆಆರ್ ಪುರಂ ಬಸ್ ನಿಲ್ದಾಣದಲ್ಲಿ ಕುಟುಂಬದೊಂದಿಗೆ ಬಸ್‌ಗಾಗಿ ಕಾಯುತ್ತಿದ್ದಾಗ 156 ಗ್ರಾಂ ಚಿನ್ನಾಭರಣ ಕಳೆದುಕೊಂಡಿದ್ದ ಸಂತ್ರಸ್ತ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಗಳು ತಮಿಳುನಾಡಿನ ತಿರುಪತ್ತೂರಿನ ಬ್ಯಾಂಕ್‌ನಲ್ಲಿ ಚಿನ್ನವನ್ನು ಗಿರವಿ ಇಟ್ಟಿದ್ದರು.

ಆರೋಪಿಗಳು ಬೆಂಗಳೂರಿನಲ್ಲಿ ಕೆಆರ್ ಪುರಂ, ಮಹದೇವಪುರ, ಯಶವಂತಪುರ ಮತ್ತು ರಾಮಮೂರ್ತಿನಗರ ಪೊಲೀಸ್ ವ್ಯಾಪ್ತಿಯಲ್ಲಿ ಆಭರಣಗಳನ್ನು ಕಳವು ಮಾಡಿದ್ದರು. ಓಜಿ ಕುಪ್ಪಂ ಗ್ಯಾಂಗ್‌ನ ಸದಸ್ಯರು ಗಮನ ಬೇರೆಡೆ ಸೆಳೆಯುವ ತಂತ್ರಗಳಿಗೆ ಹೆಸರುವಾಸಿಯಾಗಿದ್ದಾರೆ.

ಈ ಗ್ಯಾಂಗ್ ಗುಂಪಾಗಿ ಬಂದು ಸಣ್ಣ ಸಣ್ಣ ಗುಂಪುಗಳಾಗಿ ಒಡೆದು ಲಾಡ್ಜ್ ಗಳಲ್ಲಿ ಇರುತ್ತಾರೆ. ದೊಡ್ಡ ಲೂಟಿಯ ನಂತರ ಕುಪ್ಪಂಗೆ ತೆರಳಿ ಅವರು ಲೂಟಿ ಮಾಡಿದ್ದನ್ನು ಹಂಚಿಕೊಳ್ಳುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕೊಡಿ...ಆಶೀರ್ವಾದ.. ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿ ಕೆ ಶಿವಕುಮಾರ್.. ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್-Photos

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT