ಶೃಂಗೇರಿ ಮಠದ ಆಡಳಿತಾಧಿಕಾರಿಗಳ ಪ್ರಕಟಣೆ online desk
ರಾಜ್ಯ

ಶೃಂಗೇರಿ ಶಾರದಾಂಬೆ ದೇವಾಲಯ: ಆಗಸ್ಟ್ 15 ರಿಂದ ಭಕ್ತಾದಿಗಳಿಗೆ ವಸ್ತ್ರ ಸಂಹಿತೆ ಕಡ್ಡಾಯ

ಪುರುಷರು ಧೋತಿ, ಶಲ್ಯ, ಉತ್ತರೀಯ (ಅಂಗವಸ್ತ್ರ) ಮಹಿಳೆಯರು ಸೀರೆ, ಸಲ್ವಾರ್, ದುಪಟ್ಟಾ, ಲಂಗಾ ದಾವಣಿ ಧರಿಸಿ ದೇವಾಲಯವನ್ನು ಪ್ರವೇಶಿಸಬಹುದಾಗಿದೆ.

ಚಿಕ್ಕಮಗಳೂರು: ಶೃಂಗೇರಿಯ ಶಾರದಾಂಬೆ ದೇವಾಲಯದಲ್ಲಿ ಆ.15 ರಿಂದ ಭಕ್ತಾದಿಗಳಿಗೆ ವಸ್ತ್ರ ಸಂಹಿತೆ ಕಡ್ಡಾಯವಾಗಲಿದೆ.

ದೇವಾಲಯ ಪ್ರವೇಶಿಸುವವರು ಸಂಪ್ರದಾಯಬದ್ಧ ಭಾರತೀಯ ಧಿರಿಸಿನಲ್ಲಿದ್ದರೆ ಮಾತ್ರ ದೇವಾಲಯದಲ್ಲಿ ಹತ್ತಿರದಿಂದ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ದೇವಾಲಯ ಹಾಗೂ ಶೃಂಗೇರಿ ಮಠದ ಆಡಳಿತಾಧಿಕಾರಿಗಳು ಬಿಡುಗಡೆ ಮಾಡಿರುವ ಪ್ರಕಟಣೆ ತಿಳಿಸಿದೆ.

ಒಂದು ವೇಳೆ ಭಾರತೀಯ ಉಡುಪುಗಳನ್ನಲ್ಲದೇ ಬೇರೆ ಉಡುಪುಗಳನ್ನು ಧರಿಸಿದರೆ, ದೇವಾಲಯದಲ್ಲಿ ಅರ್ಧ ಮಂಟಪದಿಂದ ಹೊರಭಾಗದಲ್ಲಿ ನಿಂತು ದೇವರ ದರ್ಶನ ಪಡೆಯಬೇಕಾಗುತ್ತದೆ ಅವರಿಗೆ ಒಳ ಭಾಗದಲ್ಲಿರುವ ಪರಿಕ್ರಮಕ್ಕೆ ಪ್ರವೇಶವಿರುವುದಿಲ್ಲ ಎಂದು ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

ಪುರುಷರು ಧೋತಿ, ಶಲ್ಯ, ಉತ್ತರೀಯ (ಅಂಗವಸ್ತ್ರ) ಮಹಿಳೆಯರು ಸೀರೆ, ಸಲ್ವಾರ್, ದುಪಟ್ಟಾ, ಲಂಗಾ ದಾವಣಿ ಧರಿಸಿ ದೇವಾಲಯವನ್ನು ಪ್ರವೇಶಿಸಬಹುದಾಗಿದೆ.

ಈ ಹಿಂದೆ ಶ್ರೀಮಠದ ಗುರು ನಿವಾಸದಲ್ಲಿ ಗುರುಗಳ ದರ್ಶನ ಪಡೆಯುವುದಕ್ಕೆ ವಸ್ತ್ರ ಸಂಹಿತೆ ಜಾರಿಯಲ್ಲಿತ್ತು ಈಗ ಆ.15 ರಿಂದ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೂ ವಸ್ತ್ರ ಸಂಹಿತೆ ಕಡ್ಡಾಯವಾಗಿ ಜಾರಿಯಾಗಲಿದೆ.

ದೇವಾಲಯದ ನಿರ್ಧಾರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ವ್ಯಕ್ತವಾಗಿದೆ. ಹಲವು ಮಂದಿ ಈ ಹಿಂದೆ ಸೂಕ್ತ ವಸ್ತ್ರ ಸಂಹಿತೆ ಪಾಲನೆ ಮಾಡದೇ ದೇವಾಲಯಕ್ಕೆ ಪ್ರವಾಸಿಗರ ರೀತಿಯಲ್ಲಿ ಪ್ರವೇಶಿಸಿದ್ದನ್ನು ಭಕ್ತಾದಿಗಳು ಉಲ್ಲೇಖಿಸಿ ವಸ್ತ್ರ ಸಂಹಿತೆ ನೀತಿ ಜಾರಿಯನ್ನು ಸ್ವಾಗತಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT