ಶಾಸಕ Pradedp Eshwar ವಿರುದ್ಧ ಸ್ಪೀಕರ್ ಯುಟಿ ಖಾದರ್ ಗರಂ 
ರಾಜ್ಯ

Karnataka Assembly Session: 'ಕೈಗೆ ಕಬ್ಬಿಣ ಕೊಡ್ರಿ.. ತಲೆ ಸರಿ ಇಲ್ವಾ..'; Pradeep Eshwar ವಿರುದ್ಧ ಸ್ಪೀಕರ್ ಯುಟಿ ಖಾದರ್ ಗರಂ

ತಮ್ಮ ಕ್ಷೇತ್ರದ ಸಮಸ್ಯೆ ಬಗ್ಗೆ ಮಾತನಾಡದ ಪ್ರದೀಪ್ ಈಶ್ವರ್, ಬಿಜೆಪಿ ವಿರುದ್ಧ ಆಕ್ರೋಶದ ಮಾತುಗಳನ್ನು ಆಡಿದರು. ಬಿಜೆಪಿ ಅವಧಿಯಲ್ಲಿ ಹಗರಣ ನಡೆದಿದೆ ಅಂತ ಆಕ್ರೋಶ ವ್ಯಕ್ತಪಡಿಸಿ, ಏರು ದನಿಯಲ್ಲಿ ಕಿರುಚಾಡಿದ್ರು.

ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಮತ್ತೆ ವಾಲ್ಮೀಕಿ ನಿಗಮದ ಹಗರಣದ ವಿಚಾರವಾಗಿ ವಾಗ್ದಾಳಿ ನಡೆದಿದ್ದು, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ದ ಸ್ಪೀಕರ್ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ವಿಧಾನಸಭೆ ಅಧಿವೇಶನದಲ್ಲಿ (Assembly Session) ಚಿಕ್ಕಬಳ್ಳಾಪುರ (Chikkaballapur) ಕಾಂಗ್ರೆಸ್ ಶಾಸಕ (Congress MLA) ಪ್ರದೀಪ್ ಈಶ್ವರ್‌ಗೆ (Pradeep Eshwar) ಸ್ಪೀಕರ್ (Speaker) ಯುಟಿ ಖಾದರ್ (UT Khadar) ಗದರಿದ ಪ್ರಸಂಗ ನಡೆಯಿತು. ಮಾತನಾಡಲು ಅವಕಾಶ ಕೇಳಿದ್ದ ಪ್ರದೀಪ್ ಈಶ್ವರ್‌ಗೆ ಸ್ಪೀಕರ್ ಖಾದರ್ ಅವಕಾಶ ಕೊಟ್ಟಿದ್ದರು.

ಆದರೆ ಈ ವೇಳೆ ಸದನದ ಬಾವಿಗಿಳಿದಿದ್ದ ಪ್ರತಿಪಕ್ಷ ಸದಸ್ಯರು ವಾಲ್ಮೀಕ ಹಗರಣದ ಕುರಿತು ಘೋಷಣೆ ಕೂಗುತ್ತಿದ್ದರು. ಇದರಿಂದ ಕೆರಳಿದ ಶಾಸಕ ಪ್ರದೀಪ್ ಈಶ್ವರ್ ಬಿಜೆಪಿ ಸರ್ಕಾರದ ಹಲವು ಹಗರಣಗಳು ನಡೆದಿದೆ ಎಂದು ಹೇಳಿ ಪಟ್ಟಿಯನ್ನೇ ನೀಡಿದರು. ಆದರೆ ಈ ವೇಳೆ ತಮ್ಮ ಕ್ಷೇತ್ರದ ಸಮಸ್ಯೆ ಬಗ್ಗೆ ಮಾತನಾಡದ ಪ್ರದೀಪ್ ಈಶ್ವರ್, ಬಿಜೆಪಿ ವಿರುದ್ಧ ಆಕ್ರೋಶದ ಮಾತುಗಳನ್ನು ಆಡಿದರು. ಬಿಜೆಪಿ ಅವಧಿಯಲ್ಲಿ ಹಗರಣ ನಡೆದಿದೆ ಅಂತ ಆಕ್ರೋಶ ವ್ಯಕ್ತಪಡಿಸಿ, ಏರು ದನಿಯಲ್ಲಿ ಕಿರುಚಾಡಿದ್ರು.

ಪ್ರದೀಪ್ ಈಶ್ವರ್ ನಿಮ್ಮ ಕೈಗೆ ಕಬ್ಬಿಣ ಕೊಡ್ಬೇಕಾ?

ಇದಕ್ಕೆ ಗರಂ ಆದ ಸ್ಪೀಕರ್ ಖಾದರ್, ಪ್ರದೀಪ್ ಈಶ್ವರ್‌ಗೆ ಗದರಿದ್ರು. ಪ್ರದೀಪ್ ಈಶ್ವರ್ ಕೈಗೆ ಕಬ್ಬಿಣ ಏನಾದ್ರೂ ಕೊಡ್ರಿ ಅಂತ ಖಾದರ್ ಬೈಯ್ದರು. ಕುಳಿತು ಕೊಳ್ಳುವಂತೆ ಸಾವಧಾನದಿಂದಲೇ ಸ್ಪೀಕರ್ ಹೇಳಿದ್ರು. ಆದ್ರೆ ಪ್ರದೀಪ್ ಈಶ್ವರ್ ಕೇಳಲೇ ಇಲ್ಲ. ಆಗ ಖಾದರ್ ಗರಂ ಆದ್ರು. ಪ್ರದೀಪ್ ಈಶ್ವರ್, ಕುಳಿತುಕೊಳ್ರೀ, ನಿಮ್ಮ ಕೈಗೆ ಕಬ್ಬಿಣ ಕೊಡ್ಬೇಕಾ ಅಂತ ಗದರಿಸಿದ್ರು.

ಸ್ಪೀಕರ್ ಹೇಳಿದ್ರೂ ಸುಮ್ಮನಾಗದ ಪ್ರದೀಪ್ ಈಶ್ವರ್

ಇಷ್ಟಾದರೂ ಪ್ರದೀಪ್ ಈಶ್ವರ್ ಕುಳಿತುಕೊಳ್ಳದೇ ಕೂಗಾಟ ಮುಂದುವರೆಸಿದರು. ಸ್ಪೀಕರ್ ಆದೇಶಿಸಿದ್ರೂ ಮಾತು ನಿಲ್ಲಿಸದಿದ್ದರಿಂದ ಕೊನೆಗೆ ಪ್ರದೀಪ್ ಈಶ್ವರ್ ಬಳಿ ಸರ್ಕಾರಿ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಹೋಗಿ ಸಮಾಧಾನ ಮಾಡಿದ್ರು. ಕುಳಿತುಕೊಳ್ಳುವಂತೆ ಕೈ ಮುಗಿದು ಮನವಿ ಮಾಡಿದರು. ನಂತರ ಪ್ರದೀಪ್ ಬಳಿ ಹೋಗಿ ಕುಳಿತುಕೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್