ಕೆಹೆಚ್ ಮುನಿಯಪ್ಪ 
ರಾಜ್ಯ

ಹಾಸ್ಟೆಲ್, ಶಾಲೆಗಳಿಗೆ ಗುಣಮಟ್ಟದ ಅಕ್ಕಿ ಪೂರೈಕೆ: ಕೆ.ಎಚ್ ಮುನಿಯಪ್ಪ

ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯವು ಅನ್ಯ ರಾಜ್ಯಗಳಿಂದ ಅಕ್ಕಿ ತರಲು ಶ್ರಮಿಸುತ್ತಿದ್ದು, ಅದರಂತೆ ಗುಣಮಟ್ಟದ ಅಕ್ಕಿ ವಿತರಿಸಲಾಗಿದೆ.

ಕೋಲಾರ: ಹಾಸ್ಟೆಲ್ ಮತ್ತು ಶಾಲೆಗೆ ಗುಣಮಟ್ಟದ ಅಕ್ಕಿ ವಿತರಿಸಲಾಗುತ್ತಿದ್ದು, ಯಾವತ್ತೂ ಕಡಿಮೆ ಗುಣಮಟ್ಟದ ಅಕ್ಕಿಯನ್ನು ಪೂರೈಸಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಕೋಲಾರದಲ್ಲಿ ಗುರುಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯಾದ್ಯಂತ ಗುಣಮಟ್ಟದ ಅಕ್ಕಿ ವಿತರಿಸಲಾಗುತ್ತಿದೆ. ಈ ಬಗ್ಗೆ ವಿಧಾನಸಭೆಯ ಅಧಿವೇಶನದಲ್ಲಿ ಪ್ರಸ್ತಾಪಿಸಿದರೆ, ಸೂಕ್ತ ಉತ್ತರ ನೀಡಲಾಗುವುದು ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಭಿವೃದ್ಧಿ ಕಡೆ ಗಮನ ನೀಡಿದ್ದಾರೆ. ರಾಜ್ಯದ ಜನತೆಗೆ ನೀಡಿದ್ದ ಐದು ಗ್ಯಾರಂಟಿಗಳು ಮುಂದುವರೆಯಲಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸಿನ ಕೊರತೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯವು ಅನ್ಯ ರಾಜ್ಯಗಳಿಂದ ಅಕ್ಕಿ ತರಲು ಶ್ರಮಿಸುತ್ತಿದ್ದು, ಅದರಂತೆ ಗುಣಮಟ್ಟದ ಅಕ್ಕಿ ವಿತರಿಸಲಾಗಿದೆ. ರಾಜ್ಯಾದ್ಯಂತ ಗ್ಯಾರಂಟಿ ಯೋಜನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಮುಂದುವರಿಕೆಯನ್ನು ನೋಡಲಾಗದೆ, ವಿರೋಧ ಪಕ್ಷಗಳು ಸೂಕ್ತ ಪರಿಶೀಲನೆ ಇಲ್ಲದ ಇಲ್ಲಸಲ್ಲದ ಆರೋಪ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದರು.

ವಾಲ್ಮೀಕಿ ನಿಗಮ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಸಚಿವರು, ವಿರೋಧ ಪಕ್ಷಗಳು ವಿನಾಕಾರಣ ಆರೋಪ ಮಾಡುತ್ತಿವೆ. ಇದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು. ಸಿದ್ದರಾಮಯ್ಯ ಸರ್ಕಾರಕ್ಕೆ 40 ಕೋಟಿ ರೂ. ನಷ್ಟ ಉಂಟು ಮಾಡಿದ್ದಾರೆ ಎಂಬ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಮುನಿಯಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಆಪಾದಿತ ಘಟನೆಯಲ್ಲಿ ಭಾಗಿಯಾಗಿಲ್ಲ, ಅವರು ಅಭಿವೃದ್ಧಿ ಕಾರ್ಯಗಳಿಗೆ ಬದ್ಧರಾಗಿರುವ ವ್ಯಕ್ತಿ ಎಂದರು.

ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಬಗ್ಗೆ ಕಾಂಗ್ರೆಸ್ ಶಾಸಕರು ಮತ್ತು ಮುಖಂಡರ ತಂಡ ಹೈಕಮಾಂಡ್‌ಗೆ ದೂರು ಸಲ್ಲಿಸಿದ ಪ್ರಶ್ನೆಗೆ ಉತ್ತರಿಸಿದ ಮುನಿಯಪ್ಪ, ರಾಜ್ಯ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಜನರು ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಂತೋಷಗೊಂಡಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಲೂಚಿಸ್ತಾನದಲ್ಲಿ ಉಗ್ರರ ವಿರುದ್ಧ ಭಾರಿ ಕಾರ್ಯಾಚರಣೆ: 145 ಭಯೋತ್ಪಾದಕರ ಹತ್ಯೆಗೈದಿದ್ದೇವೆಂದ ಪಾಕಿಸ್ತಾನ, ಭಾರತ-ಆಫ್ಘನ್ ವಿರುದ್ಧ ಗಂಭೀರ ಆರೋಪ

ಅಂಡಮಾನ್-ನಿಕೋಬಾರ್ ದ್ವೀಪ, ಕಾಶ್ಮೀರದಲ್ಲಿ ಅವಳಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಸಾವು ಪ್ರಕರಣ: SIT ತನಿಖೆ ಆರಂಭ

ಬೆಂಗಳೂರು: ಮೂರು ದಿನಗಳಿಂದ ಕಾಣೆಯಾಗಿದ್ದ ಬಾಲಕ BWSSB ಸಂಪ್ ನಲ್ಲಿ ಪತ್ತೆ!

9 ವರ್ಷಗಳ ಪ್ರೀತಿ ಮದುವೆಯಾದ ಎರಡೇ ತಿಂಗಳಿಗೆ ಅಂತ್ಯ: ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತ್ನಿ ಬಂಧನ!

SCROLL FOR NEXT