ಶಿರೂರು ಗುಡ್ಡ ಕುಸಿತ 
ರಾಜ್ಯ

ಶಿರೂರು ಭೂಕುಸಿತ: ಕೇರಳದ ಅರ್ಜುನ್‌ಗಾಗಿ ಮುಂದುವರೆದ ಹುಡುಕಾಟ, ನಿಧಾನ ಕಾರ್ಯಾಚರಣೆಗೆ ಅಸಮಾಧಾನ

ಜುಲೈ 16 ರಂದು ನಮ್ಮ ಸಹೋದರ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕರ್ನಾಟಕ ಪೊಲೀಸರಿಗೆ ತಿಳಿಸಲಾಯಿತು. ಆದರೆ, ಇಲ್ಲಿಯವರೆಗೆ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಕಾರ್ಯಾಚರಣೆ ಇಷ್ಟು ವಿಳಂಬವಾದರೆ ನಾವು ಯಾವ ಭರವಸೆ ಇಟ್ಟುಕೊಳ್ಳಬೇಕು.

ಶಿರೂರು (ಅಂಕೋಲಾ): ಉತ್ತರಕನ್ನಡ ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಂತ್ರಸ್ತರ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಲಾರಿ ಸಮೇತ ನೆಲದಡಿಯಲ್ಲಿ ಹೂತು ಹೋಗಿದ್ದ ಕೋಯಿಕ್ಕೋಡ್ ನಿವಾಸಿ ಅರ್ಜುನ್​ಗಾಗಿ ಹುಡುಕಾಟ ತೀವ್ರಗೊಂಡಿದೆ.

ಕೇರಳಕ್ಕೆ ತೆರಳುತ್ತಿದ್ದ ವೇಳೆ ಅರ್ಜುನ್ ಅವರು ಲಾರಿ ಸಮೇತ ನಾಪತ್ತೆಯಾಗಿದ್ದರು. ಜಗಲ್‌ಪೇಟೆಯಿಂದ ಮರ ತುಂಬಿಕೊಂಡು ಪ್ರಯಾಣ ಆರಂಭಿಸಿದ್ದ ಅವರು ಕೇರಳ ರಾಜ್ಯದತ್ತ ತೆರಳುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿತ್ತು. ಶಿರೂರಿನಲ್ಲಿರುವ ಲಕ್ಷ್ಮಣ್ ನಾಯ್ಕ್ ಅವರ ಕ್ಯಾಂಟೀನ್ ನಲ್ಲಿ ಅರ್ಜುನ್ ಅವರು ಚಹಾ ಕುಡಿಯಲು ನಿಂತಿದ್ದಾಗ ಘಟನೆ ನಡೆದಿತ್ತು.

ನಾಪತ್ತೆ ವಿಚಾರ ತಿಳಿದ ಅರ್ಜುನ್ ಅವರ ಕುಟುಂಬಸ್ಥರು, ರಕ್ಷಣಾ ಕಾರ್ಯಾಚರಣೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅರ್ಜುನ್ ಅವರ ಸಹೋದರಿ ಮಾತನಾಡಿ. ಜುಲೈ 16 ರಂದು ನಮ್ಮ ಸಹೋದರ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕರ್ನಾಟಕ ಪೊಲೀಸರಿಗೆ ತಿಳಿಸಲಾಯಿತು. ಆದರೆ, ಇಲ್ಲಿಯವರೆಗೆ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಕಾರ್ಯಾಚರಣೆ ಇಷ್ಟು ವಿಳಂಬವಾದರೆ ನಾವು ಯಾವ ಭರವಸೆ ಇಟ್ಟುಕೊಳ್ಳಬೇಕು. ಅಲ್ಲಿ ಅವರಿಗೆ ಅಗತ್ಯವಿರುವ ಸೌಲಭ್ಯಗಳಿಲ್ಲದಿದ್ದರೆ ಎಲ್ಲಿ ಲಭ್ಯವಿದೆಯೋ ಅಲ್ಲಿಂದ ತರಬೇಕಿತ್ತು ಎಂದು ತಿಳಿಸಿದ್ದಾರೆ.

ಭೂಕುಸಿತ ಸ್ಥಳದಲ್ಲಿ ಬಾಲಕನ ಕೈ ತೋಳು ಪತ್ತೆ

ಈ ನಡುವೆ ಭೂಕುಸಿತದ ಸ್ಛಳದಲ್ಲಿ ಬಾಲಕನೊಬ್ಬನ ತೋಳು ಪತ್ತೆಯಾಗಿದ್ದು, ಇದು ಲಕ್ಷ್ಮಣ್ ನಾಯ್ಕ್ ಅವರ 10 ವರ್ಷದ ಮಗ ರೋಷನ್‌ಗೆ ಸೇರಿದ್ದು ಎಂದು ಸ್ಥಳೀಯರು ಹೇಳಿದ್ದಾರೆ, ಶವ ಮೊದಲೇ ಪತ್ತೆಯಾಗಿತ್ತು. ಆದರೆ, ಅವಶೇಷಗಳಡಿಯಲ್ಲಿ ಇನ್ನಷ್ಟು ಮಂದಿ ಸಿಲುಕಿದ್ದ ಹಿನ್ನೆಲೆಯ್ಲಿ ಡಿಎನ್‌ಎ ಪರೀಕ್ಷೆ ನಡೆಸಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT