ಶಿರೂರು ಗುಡ್ಡ ಕುಸಿತ 
ರಾಜ್ಯ

ಶಿರೂರು ಭೂಕುಸಿತ: ಕೇರಳದ ಅರ್ಜುನ್‌ಗಾಗಿ ಮುಂದುವರೆದ ಹುಡುಕಾಟ, ನಿಧಾನ ಕಾರ್ಯಾಚರಣೆಗೆ ಅಸಮಾಧಾನ

ಜುಲೈ 16 ರಂದು ನಮ್ಮ ಸಹೋದರ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕರ್ನಾಟಕ ಪೊಲೀಸರಿಗೆ ತಿಳಿಸಲಾಯಿತು. ಆದರೆ, ಇಲ್ಲಿಯವರೆಗೆ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಕಾರ್ಯಾಚರಣೆ ಇಷ್ಟು ವಿಳಂಬವಾದರೆ ನಾವು ಯಾವ ಭರವಸೆ ಇಟ್ಟುಕೊಳ್ಳಬೇಕು.

ಶಿರೂರು (ಅಂಕೋಲಾ): ಉತ್ತರಕನ್ನಡ ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಂತ್ರಸ್ತರ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಲಾರಿ ಸಮೇತ ನೆಲದಡಿಯಲ್ಲಿ ಹೂತು ಹೋಗಿದ್ದ ಕೋಯಿಕ್ಕೋಡ್ ನಿವಾಸಿ ಅರ್ಜುನ್​ಗಾಗಿ ಹುಡುಕಾಟ ತೀವ್ರಗೊಂಡಿದೆ.

ಕೇರಳಕ್ಕೆ ತೆರಳುತ್ತಿದ್ದ ವೇಳೆ ಅರ್ಜುನ್ ಅವರು ಲಾರಿ ಸಮೇತ ನಾಪತ್ತೆಯಾಗಿದ್ದರು. ಜಗಲ್‌ಪೇಟೆಯಿಂದ ಮರ ತುಂಬಿಕೊಂಡು ಪ್ರಯಾಣ ಆರಂಭಿಸಿದ್ದ ಅವರು ಕೇರಳ ರಾಜ್ಯದತ್ತ ತೆರಳುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿತ್ತು. ಶಿರೂರಿನಲ್ಲಿರುವ ಲಕ್ಷ್ಮಣ್ ನಾಯ್ಕ್ ಅವರ ಕ್ಯಾಂಟೀನ್ ನಲ್ಲಿ ಅರ್ಜುನ್ ಅವರು ಚಹಾ ಕುಡಿಯಲು ನಿಂತಿದ್ದಾಗ ಘಟನೆ ನಡೆದಿತ್ತು.

ನಾಪತ್ತೆ ವಿಚಾರ ತಿಳಿದ ಅರ್ಜುನ್ ಅವರ ಕುಟುಂಬಸ್ಥರು, ರಕ್ಷಣಾ ಕಾರ್ಯಾಚರಣೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅರ್ಜುನ್ ಅವರ ಸಹೋದರಿ ಮಾತನಾಡಿ. ಜುಲೈ 16 ರಂದು ನಮ್ಮ ಸಹೋದರ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕರ್ನಾಟಕ ಪೊಲೀಸರಿಗೆ ತಿಳಿಸಲಾಯಿತು. ಆದರೆ, ಇಲ್ಲಿಯವರೆಗೆ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಕಾರ್ಯಾಚರಣೆ ಇಷ್ಟು ವಿಳಂಬವಾದರೆ ನಾವು ಯಾವ ಭರವಸೆ ಇಟ್ಟುಕೊಳ್ಳಬೇಕು. ಅಲ್ಲಿ ಅವರಿಗೆ ಅಗತ್ಯವಿರುವ ಸೌಲಭ್ಯಗಳಿಲ್ಲದಿದ್ದರೆ ಎಲ್ಲಿ ಲಭ್ಯವಿದೆಯೋ ಅಲ್ಲಿಂದ ತರಬೇಕಿತ್ತು ಎಂದು ತಿಳಿಸಿದ್ದಾರೆ.

ಭೂಕುಸಿತ ಸ್ಥಳದಲ್ಲಿ ಬಾಲಕನ ಕೈ ತೋಳು ಪತ್ತೆ

ಈ ನಡುವೆ ಭೂಕುಸಿತದ ಸ್ಛಳದಲ್ಲಿ ಬಾಲಕನೊಬ್ಬನ ತೋಳು ಪತ್ತೆಯಾಗಿದ್ದು, ಇದು ಲಕ್ಷ್ಮಣ್ ನಾಯ್ಕ್ ಅವರ 10 ವರ್ಷದ ಮಗ ರೋಷನ್‌ಗೆ ಸೇರಿದ್ದು ಎಂದು ಸ್ಥಳೀಯರು ಹೇಳಿದ್ದಾರೆ, ಶವ ಮೊದಲೇ ಪತ್ತೆಯಾಗಿತ್ತು. ಆದರೆ, ಅವಶೇಷಗಳಡಿಯಲ್ಲಿ ಇನ್ನಷ್ಟು ಮಂದಿ ಸಿಲುಕಿದ್ದ ಹಿನ್ನೆಲೆಯ್ಲಿ ಡಿಎನ್‌ಎ ಪರೀಕ್ಷೆ ನಡೆಸಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT