ಸಿಸಿಬಿ ಪೊಲೀಸರು 
ರಾಜ್ಯ

ಆ್ಯಪಲ್ ಹೆಸರಲ್ಲಿ ನಕಲಿ ಮೊಬೈಲ್ ಮಾರಾಟ: 8 ಲಕ್ಷ ರೂ ಮೌಲ್ಯದ ವಸ್ತು ಜಪ್ತಿ

ಚಿಕ್ಕಪೇಟೆಯ ಖಲೀಲ್ ಕಟ್ಟಡದ ಚೋದ್ರಾ ಟೆಲಿಕಾಂ ಎಂಬ ಅಂಗಡಿಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಂಗಳೂರು: ಪ್ರತಿಷ್ಠಿತ ಆ್ಯಪಲ್ ಕಂಪನಿಯ ಬ್ರ್ಯಾಂಡ್ ಹೆಸರಿನಲ್ಲಿ ಕಳಪೆ ಗುಣಮಟ್ಟದ ಮೊಬೈಲ್, ಏರ್ ಪಾಡ್ ಸೇರಿದಂತೆ ಕೆಲ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಸುಮಾರು ರೂ,8 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಚಿಕ್ಕಪೇಟೆಯ ಖಲೀಲ್ ಕಟ್ಟಡದ ಚೋದ್ರಾ ಟೆಲಿಕಾಂ ಎಂಬ ಅಂಗಡಿಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ಅಂಗಡಿಯಲ್ಲಿ ಆ್ಯಪಲ್ ಕಂಪನಿ ಬ್ರ್ಯಾಂಡ್ ಹೆಸರಿನಲ್ಲಿ ಕಳಪೆ ಗುಣಮಟ್ಟದ ಮೊಬೈಲ್ ಫೋನ್, ಏರ್ ಪಾಡ್, ಯುಎಸ್'ಬಿ ಕೇಬಲ್, ಲೈಟ್ನಿಂಗ್ ಕೇಬಲ್ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಿಸಿಬಿ ದಾಳಿ ನಡೆಸಿ, ಪರಿಶೀಲನೆ ನಡೆಸಿದೆ.

ದಾಳಿ ವೇಳೆ ಆ್ಯಪಲ್ ಕಂಪನಿ ಹೆಸರಿನಲ್ಲಿ ನಕಲಿ ವಸ್ತುಗಳನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಈ ವೇಳೆ ಸುಮಾರು ರೂ.8 ಲಕ್ಷ ಮೌಲ್ಯದ ಕಳಪೆ ಗುಣಮಟ್ಟದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳಪೆ ತಾಮ್ರದ ತಂತಿ ಮಾರಾಟ: ರೂ.6 ಲಕ್ಷ ಮೌಲ್ಯದ ವೈಯರ್ ಜಪ್ತಿ

ಈ ನಡುವೆ ಪ್ರತಿಷ್ಠಿತ ಕಂಪನಿಗಳ ಬ್ರ್ಯಾಂಡ್ ಹೆಸರಿನಲ್ಲಿ ಕಳಪೆ ಗುಣಮಟ್ಟದ ವಿದ್ಯುತ್ ತಾಮ್ರದ ತಂತಿ ಮಾರಾಟ ಮಾಡುತ್ತಿದ್ದ ಗರುಚಾರ್ ಪಾಳ್ಯದ ಅಂಗಡಿ ಮೇಲೆ ಸಿಸಿಬಿ ದಾಳಿ ನಡೆಸಿ, ರೂ.6.20 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಈ ಅಂಗಡಿಯಲ್ಲಿ ವಿ ಗಾರ್ಡ್, ಆರ್ ಆರ್, ಪಾಲಿ ಕ್ಯಾಬ್, ಆ್ಯಂಕರ್,ಗ್ರೇಟ್ ವೈಟ್, ಹಾವೆಲ್ಸ್ ಕಂಪನಿಗಳ ಬ್ರ್ಯಾಂಡ್ ಹೆಸರಿನಲ್ಲಿ ಕಳಪೆ ಗುಣಮಟ್ಟದ ವಿದ್ಯುತ್ ತಾಮ್ರದ ವೈಯರ್ ಮಾರಾಟ ಮಾಡುತ್ತಿರುವ ಬಗ್ಗೆ ಖಚಿಕ ಮಾಹಿತಿ ದೊರೆತೆ ಹಿನ್ನೆಲೆಯಲ್ಲಿ ದಾಳಿ ಮಾಡಿ ರೂ,6.20 ಲಕ್ಷ ಮೌಲ್ಯದ ಕಳಪೆ ಗುಣಮಟ್ಟದ ವಿದ್ಯುತ್ ತಾಮ್ರದ ತಂತಿ ಜಪ್ತಿ ಮಾಡಿದ್ದಾರೆ. ಈ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT